ವಾಲಿದ ಮತ್ತೊಂದು ಕಟ್ಟಡ
Team Udayavani, May 14, 2019, 3:06 AM IST
ಕೆ.ಆರ್.ಪುರ: ಕೆಲ ತಿಂಗಳ ಹಿಂದಷ್ಟೇ ಮಾರತ್ತಹಳ್ಳಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಬಿರುಕು ಬಿಟ್ಟ ಪ್ರಕರಣದ ನೆನಪು ಮಾಸುವ ಮುನ್ನವೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೊಂದು ಕಟ್ಟಡ ವಾಲಿದ ಬಿಟ್ಟ ಘಟನೆ ನಡೆದಿದೆ.
ಕೆ.ಆರ್.ಪುರ ಸಮೀಪದ ಹೊರಮಾವು ಬಳಿಯ ರೈಲ್ವೆ ಅಂಡರ್ ಪಾಸ್ ಸಮೀಪದ ಲಾಲ್ಸಿಂಗ್ ಎಂಬವರಿಗೆ ಸೇರಿದ ಮೂರು ಅಂತಸ್ತಿನ ಕಟ್ಟಡವೊಂದು ಬಲಭಾಗಕ್ಕೆ ವಾಲಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ, ಕಟ್ಟಡದಲ್ಲಿನ ಜನರನ್ನು ಸ್ಥಳಾಂತರಗೊಳಿಸಿ ಅನಾಹುತ ತಪ್ಪಿಸಿದ್ದಾರೆ.
ಅಪಾಯದ ಸ್ಥಿತಿಯಲ್ಲಿರುವ ಕಟ್ಟಡವನ್ನು ಸಂಪೂರ್ಣವಾಗಿ ನೆಲಸಮಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಕಟ್ಟಡದ ಮೂಲ ಮಾಲೀಕರಾದ ರತನ್ಲಾಲ್ ಹತ್ತು ವರ್ಷಗಳ ಹಿಂದೆ ಕಟ್ಟಡ ನಿರ್ಮಾಣ ಮಾಡಿದ್ದು, ಆ ಕಟ್ಟಡವನ್ನು ಲಾಲ್ಸಿಂಗ್ ಮೂರು ವರ್ಷಗಳ ಹಿಂದೆ ಖರೀದಿ ಮಾಡಿದ್ದರು. ಅದರಲ್ಲಿ ಜ್ಯುವೆಲ್ಲರಿ ಶಾಪ್ ಸೇರಿ ಮೂರು ಮನೆಗಳು ಇವೆ.
ಅದೇ ಕಟ್ಟಡದ ಪಕ್ಕದಲ್ಲಿ ಎಚ್ಆರ್ಬಿಆರ್ ಬಡಾವಣೆ ನಿವಾಸಿ ಕುಮರೇಶ್ ಎಂಬವರಿಗೆ ಸೇರಿದ ಜಾಗವಿದ್ದು, ಕಟ್ಟಡ ನಿರ್ಮಾಣ ಮಾಡಲು ಪಾಯ ತೆಗೆಯಲಾಗಿದೆ. ಆರು ಅಡಿಗೂ ಹೆಚ್ಚು ಅಳದ ಗುಂಡಿ ತೋಡಿದ ಹಿನ್ನೆಲೆಯಲ್ಲಿ ಮಣ್ಣು ಕುಸಿದು, ಪಕ್ಕದ ಮೂರು ಅಂತಸ್ಥಿನ ಕಟ್ಟಡ ವಾಲಿಕೊಂಡಿದೆ. ಅದನ್ನು ಕಂಡ ಕಟ್ಟಡ ಕಾರ್ಮಿಕರು ಜೋರಾಗಿ ಕೂಗಿಕೊಂಡು ಸ್ಥಳದಿಂದ ಓಡಿದ್ದು, ಕೂಗಾಟದ ಜೋರು ಶಬ್ಧ ಕೇಳಿ ಕಟ್ಟಡ ನಿವಾಸಿಗಳು ಹೊರ ಬಂದಿದ್ದಾರೆ.
ಕಟ್ಟಡದ ಬಳಿ ನಿರ್ಬಂಧ: ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಬಾಣಸವಾಡಿಯ ಅಗ್ನಿಶಾಮಕ ಸಿಬ್ಬಂದಿ ಮತ್ತು ಹೆಣ್ಣೂರು ಪೊಲೀಸರು ಹಾಗು ಬಿಬಿಎಂಪಿ ಅಧಿಕಾರಿಗಳು ಕಟ್ಟಡ ಬಳಿ ಯಾರು ಹೋಗದಂತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದು, ಕಟ್ಟಡದ ಅಕ್ಕ-ಪಕ್ಕದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಿದರು.
ನಂತರ ಕಟ್ಟಡದ ಸುತ್ತ-ಮುತ್ತ ಯಾರು ಹೋಗದಂತೆ ನಿರ್ಬಂಧ ಹೇರಿದ್ದರು. ಲಾಲ್ಸಿಂಗ್ ಮೂರು ವರ್ಷಗಳ ಹಿಂದೆ ರತನ್ ಲಾಲ್ ಎಂಬುವವರಿಂದ ಕಟ್ಟಡ ಖರೀದಿ ಮಾಡಿದ್ದರು. ಚಿಕ್ಕ ನಿವೇಶನದಲ್ಲಿ ಭದ್ರವಾದ ಪಾಯ ಹಾಕದೆ ಮೂರು ಅಂತಸ್ತಿನ ನಿರ್ಮಾಣ ಮಾಡಿರುವುದೇ ಘಟನೆಗೆ ಕಾರಣ ಎಂದು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು