ನಗರದಿಂದ ಮತ್ತೂಂದು ಮಹಾವಲಸೆ

ಲಾಕ್‌ಡೌನ್‌ನಿಂದ ಊರುಗಳಿಗೆ ತೆರಳಲು ಜನ ನಿರ್ಧಾರ

Team Udayavani, Jul 14, 2020, 9:53 AM IST

BNG-TDY-1

ಬೆಂಗಳೂರು: ಸೋಂಕು ನಿಯಂತ್ರಣಕ್ಕಾಗಿ ಜಾರಿಗೊಳಿಸಿದ ಅಲ್ಪಾವಧಿಯ ಲಾಕ್‌ಡೌನ್‌ ಸೋಂಕು ವಿಸ್ತರಣೆಗೆ ರಹದಾರಿ ಆಗಲಿದೆಯೇ? – ಲಾಕ್‌ಡೌನ್‌ ಘೋಷಣೆ ಬೆನ್ನಲ್ಲೇ ರಾಜಧಾನಿಯಲ್ಲಿ ಶುರುವಾದ ಮತ್ತೂಂದು ಸುತ್ತಿನ ಮಹಾವಲಸೆ ಈ ಆತಂಕ ಸೃಷ್ಟಿಸಿದೆ.

ಸಾವಿರಾರು ಸಂಖ್ಯೆಯಲ್ಲಿ ಜನ ನಗರ ತೊರೆದು ಸ್ವಂತ ಊರುಗಳತ್ತ ಮುಖಮಾಡುತ್ತಿದ್ದಾರೆ. ಸರ್ಕಾರ ಕೂಡ ಹೋಗುವವರು ಹೋಗಬಹುದು ಎಂದು ಹೇಳುವುದರ ಜತೆಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕೂಡ ಕಲ್ಪಿಸಿದೆ. ಆದರೆ ಹೀಗೆ ವಾಪಸ್‌ ಹೊರಟವರಲ್ಲಿ ಯಾರಿಗಾದರೂ ಸೋಂಕು ತಗುಲಿದ್ದರೆ, ಅಕ್ಷರಶಃ ಅವರು “ಕೋವಿಡ್ ಕ್ಯಾರಿಯರ್‌’ (ಕೋವಿಡ್ ವೈರಸ್‌ ವಾಹಕ) ಆಗಲಿದ್ದಾರೆ. ಆಗ ಸೋಂಕಿನ ಸ್ಥಾನಪಲ್ಲಟ ಆಗಲಿದೆ.

ಬೆಂಗಳೂರಿನ ಮೂಲಕವೇ ಕೋವಿಡ್ ವೈರಸ್‌ ರಾಜ್ಯಕ್ಕೆ ಕಾಲಿಟ್ಟಿತ್ತು. ನಂತರ ನಾನಾ ಮಾರ್ಗದಲ್ಲಿ ಎಲ್ಲ ಕಡೆ ವಿಸ್ತರಿಸಿತ್ತು. ಈಗ ಮತ್ತೆ ಸಿಲಿಕಾನ್‌ಸಿಟಿಯಲ್ಲಿ ಸೋಂಕು “ಪೀಕ್‌’ನಲ್ಲಿದೆ. ಈ ವೇಳೆ ಜನ ಹಳ್ಳಿಗಳತ್ತ ಮುಖಮಾಡುತ್ತಿದ್ದಾರೆ. ಅವರಲ್ಲಿ ಲಕ್ಷಣಗಳು ಇಲ್ಲದಿದ್ದರೂ, ತಮಗರಿವಿಲ್ಲದೆ ಕೆಲವರು ವೈರಸ್‌ನೊಂದಿಗೆ ಊರುಗಳನ್ನು ಪ್ರವೇಶಿಸಿದರೂ ಅಚ್ಚರಿ ಇಲ್ಲ. ಇದು ಸರ್ಕಾರದ ಮೇಲೆ ಬೇರೆ ರೀತಿಯ ಪರಿಣಾಮ ಬೀರಲಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಕರಾವಳಿ ಸೇರಿದಂತೆ ನಾನಾ ಭಾಗಗಳಿಗೆ ಜನ ಗಂಟುಮೂಟೆ ಕಟ್ಟಿಕೊಂಡು ಪ್ರಯಾಣ ಬೆಳೆಸಿದ್ದಾರೆ. ಇದಕ್ಕೆ ಸ್ವತಃ ಸರ್ಕಾರ ಹೆಚ್ಚುವರಿ ಬಸ್‌ ಗಳನ್ನು ನಿಯೋಜಿಸಿ, ಪೂರಕ ವಾತಾವರಣ ಕಲ್ಪಿಸುತ್ತಿದೆ. ಬಹುತೇಕರು ಸೋಮವಾರ ಸಂಜೆಯಿಂದಲೇ ಕಾಲ್ಕಿàಳುತ್ತಿದ್ದಾರೆ. ಇದರಿಂದ ಪ್ರವೇಶ ದ್ವಾರಗಳಲ್ಲಿ ವಾಹನದಟ್ಟಣೆ ಉಂಟಾಗಿ, ಹೆಜ್ಜೆ- ಹೆಜ್ಜೆಗೂ ಜನ ಪರದಾಡುವಂತಾಯಿತು. ಸಂಚಾರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟರು. ಮತ್ತೆ ಹಳ್ಳಿಗಳ ನಿದ್ದೆಗೆಡಿಸಿದ ವಲಸೆ: ಮತ್ತೂಂ  ದೆಡೆ ಹಳ್ಳಿಗಳಲ್ಲಿ ಜನ ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಹಿಂದೆ ರಾತ್ರೋರಾತ್ರಿ ಬೆಂಗಳೂರಿನಿಂದ ವಲಸೆ ಬಂದ ಜನರಲ್ಲಿ ಕೆಲವರು ವೈರಸ್‌ ಹೊತ್ತುತಂದಿದ್ದರು. ಆದರೂ ಊರಿನವರನ್ನು ಅಪ್ಪಿಕೊಂಡರು. ಇದು ಅತಿಯಾದಾಗ ಊರು ಪ್ರವೇಶದ್ವಾರಗಳಲ್ಲಿ ಬೇಲಿ ಹಾಕಿ, ಜಾಗರಣೆ ಮಾಡಿದ ಉದಾಹರಣೆಗಳೂ ಇವೆ. ಇದಾದ ನಂತರ ಮಹಾರಾಷ್ಟ್ರ, ಗೋವಾ ಸೇರಿದಂತೆ ನಾನಾ ಭಾಗಗಳಲ್ಲಿ ನೆಲೆಸಿದ್ದ ಜನ ವಾಪಸ್‌ ಊರುಗಳಿಗೆ ಬಂದಾಗಲೂ ಈ ಸಮಸ್ಯೆ ಎದುರಾಗಿತ್ತು. ತದನಂತರದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ಆಶಾ ಕಾರ್ಯಕರ್ತೆಯರಿಂದ ಸಮೀಕ್ಷೆ ನಡೆಸಿ, ಸೋಂಕು ತಡೆಗೆ ಕಸರತ್ತು ನಡೆಸಿದರು.

ಈಗ ಮತ್ತೂಂದು ಹಂತದ ವಲಸೆ ಶುರುವಾಗಿದ್ದು, ಸೋಂಕಿನ ಪ್ರಕರಣಗಳಲ್ಲಿ ಶೇ. 50ರಷ್ಟು ರಾಜಧಾನಿಯಲ್ಲೇ ಪತ್ತೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಜನ ಸ್ವಂತ ಊರುಗಳಿಗೆ ವಾಪಸ್ಸಾಗುತ್ತಿರುವುದು ಸಹಜವಾಗಿ ಹಳ್ಳಿಗರಲ್ಲಿ ಆತಂಕ ಸೃಷ್ಟಿಸಿದೆ. ಕೆಲವು ತಾಲೂಕುಗಳಲ್ಲಿ ಅಲ್ಲಿನತಹಶೀಲ್ದಾರರು ಕ್ವಾರಂಟೈನ್‌ ಅಥವಾ ಪರೀಕ್ಷೆ ಕಡ್ಡಾಯಗೊಳಿಸಿ ಆದೇಶವನ್ನೂ ಹೊರಡಿಸಿದ್ದಾರೆ. ಆದರೆ, ಕಡ್ಡಾಯವಾಗಿ ಜಾರಿಯಲ್ಲಿಲ್ಲ. ಸರ್ಕಾರ ಕೂಡ ಈ ಸಂಬಂಧ ಮಾರ್ಗಸೂಚಿ ಹೊರಡಿಸಿಲ್ಲ.

2 ದಿನದಲ್ಲಿ 1,600 ಹೆಚ್ಚುವರಿ ಬಸ್‌! :  ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯು ಸೋಮವಾರ ಮತ್ತು ಮಂಗಳವಾರ ತಲಾ 800 ಹೆಚ್ಚುವರಿ ಬಸ್‌ಗಳ ನಿಯೋಜನೆ ಮಾಡಿದ್ದು, ಅಗತ್ಯಬಿದ್ದರೆ, ಇನ್ನೂ 200 ಬಸ್‌ ಗಳ ಕಾರ್ಯಾಚರಣೆಗೆ ಸಿದ್ಧ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ 1ರವರೆಗೆ 440 ಬಸ್‌ಗಳು ಕಾರ್ಯಾಚರಣೆ ಮಾಡಿದ್ದು, ಸುಮಾರು 11,466 ಪ್ರಯಾಣಿಕರು ಸಂಚರಿಸಿದ್ದಾರೆ. ಅಷ್ಟೇ ಅಲ್ಲ, 231 ಬಸ್‌ ಗಳಲ್ಲಿ ಆಸನಗಳು ಮುಂಗಡ ಬುಕಿಂಗ್‌ ಆಗಿವೆ. ಸಾಮಾಜಿಕ ಅಂತರ ಕಾಯ್ದುಕೊಂಡು, ಪ್ರತಿಯೊಬ್ಬರಿಗೂ ಥರ್ಮಲ್‌ ಸ್ಕ್ರೀನಿಂಗ್‌ ಮಾಡಿ, ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ.

ಬ್ಯಾಂಕ್‌- ಎಟಿಎಂ ಕೇಂದ್ರಕ್ಕೆ ಮುಗಿಬಿದ್ದ ಜನ  :  ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್‌ ಪರಿಣಾಮ ಜನ ಸೋಮವಾರ ಎಟಿಎಂ ಕೇಂದ್ರಗಳಿಗೆ ಮುಗಿಬಿದ್ದರು. ಮಂಗಳವಾರ ರಾತ್ರಿ 8ರಿಂದ ಜುಲೈ 22ರ ಬೆಳಗ್ಗೆ 5ರವರೆಗೆ ಲಾಕ್‌ಡೌನ್‌ ಘೋಷಣೆಯಾದ ಬೆನ್ನಲ್ಲೇ ಜನ ಬ್ಯಾಂಕಿಂಗ್‌ ವ್ಯವಹಾರಕ್ಕಾಗಿ ಬ್ಯಾಂಕ್‌ಗಳು ಹಾಗೂ ಹಣ ಡ್ರಾ ಮಾಡಲು ಎಟಿಎಂ ಕೇಂದ್ರಗಳ ಮುಂದೆ “ಕ್ಯೂ’ ನಿಂತಿರುವುದು ಸರ್ವೆಸಾಮಾನ್ಯವಾಗಿತ್ತು. ಹಲವು ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಘೋಷಣೆಯಾಗುವ ನಿರೀಕ್ಷೆಯಲ್ಲಿ ರಾಜ್ಯದ ಇತರೆಡೆಯೂ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಂಕ್‌ಗಳತ್ತ ಮುಖ ಮಾಡಿದ್ದರು. ಎಟಿಎಂ ಕೇಂದ್ರಗಳಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಕಲ್ಪಿಸದಿರುವ ಬಗ್ಗೆ ಆಕ್ಷೇಪವೂ ವ್ಯಕ್ತವಾಯಿತು. ಎರಡನೇ ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆ ಕಾರಣಕ್ಕೆ ಹಲವು ಎಟಿಎಂ ಕೇಂದ್ರಗಳಲ್ಲಿ ಹಣ ಖಾಲಿಯಾಗಿದ್ದರಿಂದ ಸೋಮವಾರ ಬೆಳಗ್ಗೆ ಹಣ ಪಡೆಯಲಾಗದೆ ಪರದಾಡುವಂತಾಗಿತ್ತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.