ಬಿಜೆಪಿ ವಿರುದ್ಧದ ಅಭಿಯಾನಕ್ಕೆ ತಕ್ಕ ಉತ್ತರ ನೀಡಿ
Team Udayavani, Aug 7, 2017, 7:20 AM IST
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಅಭಿಯಾನ ಹೆಚ್ಚಾಗುತ್ತಿದ್ದು, ಈ ತಾಣಗಳಲ್ಲಿ ಸಕ್ರಿಯವಾಗಿರುವ ಪಕ್ಷದ ಕಾರ್ಯಕರ್ತರು ನಕಾರಾತ್ಮಕ ಚಿಂತನೆಗೆ ಆಸ್ಪದ ನೀಡದೆ ತಕ್ಕ ಉತ್ತರ ನೀಡುವ ಮೂಲಕ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ರಾಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಭಾನುವಾರ ಬಿಜೆಪಿ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠದಿಂದ ಹಮ್ಮಿಕೊಂಡಿದ್ದ ಸಾಮಾಜಿಕ
ಜಾಲತಾಣದಲ್ಲಿ ಸಕ್ರಿಯವಾಗಿರುವ ಬಿಜೆಪಿ ಬೆಂಬಲಿತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ರಾಜಸ್ಥಾನ, ಉತ್ತರ ಪ್ರದೇಶ, ಅಸ್ಸಾಂ ಸೇರಿ ವಿವಿಧ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಮಾಜಿಕ ಜಾಲತಾಣದ
ಅಭಿಯಾನ ಸಾಕಷ್ಟು ಫಲ ನೀಡಿದೆ. ಅದೇ ರೀತಿ ಕರ್ನಾಟಕದಲ್ಲೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಾಮಾಜಿಕ ಜಾಲತಾಣ ಪ್ರಮುಖ ಪಾತ್ರ ವಹಿಸಲಿದೆ. ರಾಜ್ಯದ ಬಿಜೆಪಿ ಸಂಸದರು, ಶಾಸಕರು ಸೇರಿ ಎಲ್ಲಾ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು, ಮುಖಂಡರು ವಾಟ್ಸ್ ಆ್ಯಪ್, ಫೇಸ್ಬುಕ್ ಮತ್ತು ಟ್ವಿಟರ್ ಸೇರಿದಂತೆ ಎಲ್ಲಾ ರೀತಿಯ ಸಾಮಾಜಿಕ ಜಾಲತಾಣದಲ್ಲೂ ಸಕ್ರಿಯರಾಗಿ ಬಿಜೆಪಿ ಬೆಂಬಲಿತ ಸಂದೇಶಗಳನ್ನು ಹಂಚಬೇಕು.
ಜತೆಗೆ ಕನಿಷ್ಠ ಮೂರ್ನಾಲ್ಕು ಜನರಿಗೆ ಟ್ಯಾಗ್ ಮಾಡಬೇಕು ಎಂದು ಸಲಹೆ ನೀಡಿದರು. ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ ಸೇರಿ ಪ್ರಮುಖ ಸಾಂವಿಧಾನಿಕ ಹುದ್ದೆಗಳನ್ನು ಬಿಜೆಪಿ ನಾಯಕರು ಅಲಂಕರಿಸಿದ್ದಾರೆ. ಅದೇ ರೀತಿ ಮುಂದಿನ ಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೆಲ್ಲಿಸುವ ಮಹತ್ವದ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ. ಆ ಮೂಲಕ ಕಾಂಗ್ರೆಸ್ ಮುಕ್ತ ಭಾರತಕ್ಕೆ ಕರ್ನಾಟಕವೂ ಸೇರಬೇಕು ಎಂದರು. ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್, ಕೇಂದ್ರ ಬಿಜೆಪಿ ಐಟಿ ಘಟಕದ ಅಮಿತ್ ಮಾಳವೀಯ, ಸಂಸದ ಪ್ರತಾಪ್ ಸಿಂಹ, ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ