ಉಮ್ರಾ ಯಾತ್ರೆಯಿಂದ ಹಿಂದಿರುಗಿದವರಲ್ಲಿ ಆತಂಕ
Team Udayavani, Mar 22, 2020, 1:16 PM IST
ಬೆಂಗಳೂರು: ದೇಶದ ಮೊದಲ ಕೋವಿಡ್ 19 ಸಾವು ಸಂಭವಿಸಿದ್ದು ಕಲಬುರಗಿಯಲ್ಲಿ. ಮೆಕ್ಕಾ ಯಾತ್ರೆಯಿಂದ (ಉಮ್ರಾ) ಹಿಂದಿರುಗಿದ್ದ ವೃದ್ಧರೊಬ್ಬರಲ್ಲಿ ಸೋಂಕು ಕಾಣಿಸಿ ಕೊಂಡಿದ್ದರಿಂದ ಅವರು ಸಾವಿಗೀಡಾಗಿದ್ದರು. ಕೋವಿಡ್ 19 ಸೋಂಕು ದೃಢಪಟ್ಟ ರಾಜ್ಯದ 6ನೇ ಪ್ರಕರಣ ಇದಾಗಿತ್ತು.
ರಾಜ್ಯದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 20ಕ್ಕೆ ಏರಿದೆ. ಈ ಪೈಕಿ ಕಲಬುರಗಿ ಹಾಗೂ ಗೌರಿಬಿದನೂರಿನ ತಲಾ ಒಬ್ಬರು ಸೋಂಕಿತರು ಮೆಕ್ಕಾ ಯಾತ್ರೆಗೆ ಹೋಗಿ, ಸೌದಿ ಅರೇಬಿಯಾ ದಿಂದ ಭಾರತಕ್ಕೆ ವಾಪಸ್ ಆಗಿದ್ದಾರೆ. ಆದರೆ, ದುಬೈನಿಂದ ಬಂದ ಕೊಡಗು ಜಿಲ್ಲೆಯ ಸೋಂಕಿತರು ಮೆಕ್ಕಾ ಯಾತ್ರೆಗೆ ಹೋಗಿದ್ದರ ಬಗ್ಗೆ ಖಾತರಿಯಿಲ್ಲ, ಆದಾಗ್ಯೂ, ಉಮ್ರಾ ಯಾತ್ರೆಗೆ ತೆರಳಿದ್ದ ರಾಜ್ಯದ ತಂಡಗಳು ಮತ್ತು ವ್ಯಕ್ತಿಗಳ ವಿಚಾರವಾಗಿ ಒಂದಿಷ್ಟು ಆತಂಕ ಮನೆ ಮಾಡಿದೆ.
ಕರ್ನಾಟಕ ರಾಜ್ಯ ಹಜ್ ಆರ್ಗನೈಜರ್ ಅಸೋಸಿಯೇಷನ್ ಈ ಆತಂಕಕ್ಕೆ ಸ್ಪಷ್ಟನೆ ನೀಡಿದೆ. ಯಾವುದೇ ರೀತಿಯ ಆತಂಕ ಪಡುವ ಯಾವುದೇ ಸನ್ನಿವೇಶವಿಲ್ಲ. ಏಕೆಂದರೆ, ಈ ಬಾರಿ ಉಮ್ರಾ ಯಾತ್ರೆಗೆಂದು ಮೆಕ್ಕಾಗೆ ತೆರಳಿದ್ದ ರಾಜ್ಯದ ತಂಡಗಳ ಪೈಕಿ ಈಗಾಗಲೇ ಬಹುತೇಕ ತಂಡಗಳು ಸುರಕ್ಷಿತವಾಗಿ ವಾಪಸ್ಸಾಗಿವೆ. ಕೊನೆಯ ತಂಡ ಮಾ.19ಕ್ಕೆ ಭಾರತಕ್ಕೆ ಮರಳಿದೆ ಎಂದು ಅಸೋಸಿಯೇಷನ್ ಹೇಳಿದೆ.
ಕಟ್ಟುನಿಟ್ಟಿನ ಸೂಚನೆ: ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೇರೆ ದೇಶಗಳಿಂದ ಉಮ್ರಾ ಯಾತ್ರೆಗೆ ಬರುವವರ ಪ್ರವೇಶವನ್ನು ಫೆ.27ರಿಂದ ಸೌದಿ ಸರ್ಕಾರ ನಿರ್ಬಂಧಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಖಾಸಗಿ ಹಜ್ ಮತ್ತು ಉಮ್ರಾ ಟೂರ್ ಆಪರೇಟರ್ಗಳ ಸಭೆ ಕರೆದು, ಸೌದಿ ಸರ್ಕಾರದ ಮುಂದಿನ ಆದೇಶದವರೆಗೆ ಹಾಗೂ ಭಾರತ ಸರ್ಕಾರದ ಮುಂದಿನ ನಿರ್ದೇಶನದವರೆಗೆ ಉಮ್ರಾ ಯಾತ್ರೆಗೆ ಬುಕ್ಕಿಂಗ್ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಈ ವಿಚಾರದಲ್ಲಿ ರಾಜ್ಯ ಸರ್ಕಾರ, ಕೇಂದ್ರ ವಿದೇಶಾಂಗ ಸಚಿವಾಲಯ ಮತ್ತು ಇಮ್ಮಿಗ್ರೇಷನ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಕರ್ನಾಟಕ ರಾಜ್ಯ ಹಜ್ ಆರ್ಗನೈಜರ್ ಅಸೋಸಿಯೇಷನ್ ಅಧ್ಯಕ್ಷ ಶೌಕತ್ ಅಲಿ ಸುಲ್ತಾನ್ “ಉದಯವಾಣಿ’ಗೆ ತಿಳಿಸಿದ್ದಾರೆ.
ವರ್ಷಕ್ಕೆ 30 ಸಾವಿರ ಮಂದಿ ಉಮ್ರಾಗೆ : ರಾಜ್ಯದ ಬೆಂಗಳೂರು, ಕಲಬುರಗಿ, ಮಂಗಳೂರು, ಮೈಸೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ನೋಂದಾಯಿತ 46 ಆಪರೇಟರ್ಗಳು ಸೇರಿದಂತೆ ಒಟ್ಟು 150ಕ್ಕೂ ಹೆಚ್ಚು ಖಾಸಗಿ ಹಜ್ ಮತ್ತು ಉಮ್ರಾ ಟೂರ್ ಆಪರೇಟರ್ ಸಂಸ್ಥೆಗಳಿವೆ. ಇವುಗಳ ಮೂಲಕ ಪ್ರತಿ ವರ್ಷ ರಾಜ್ಯದಿಂದ ಸುಮಾರು 25ರಿಂದ 30 ಸಾವಿರ ಮಂದಿ ಉಮ್ರಾ ಯಾತ್ರೆಗೆಂದು ಮೆಕ್ಕಾಗೆ ತೆರಳುತ್ತಾರೆ. ಪ್ರತಿ ವರ್ಷ ಸೆಪ್ಟೆಂಬರ್ನಿಂದ ಮೇ ತಿಂಗಳವರೆಗೆ ಉಮ್ರಾ ಯಾತ್ರೆ ಕೈಗೊಳ್ಳಲಾಗುತ್ತದೆ. ಬೇಸಿಗೆ ರಜೆ ಮತ್ತಿತರ ಕಾರಣಗಳಿಗೆ ಫೆಬ್ರವರಿಯಿಂದ ಏಪ್ರಿಲ್ವರೆಗೆ ಉಮ್ರಾ ಯಾತ್ರಿಕರ ಸಂಖ್ಯೆ ಹೆಚ್ಚಾಗಿರುತ್ತದೆ ಎಂದು ಶೌಕತ್ ಅಲಿ ಸುಲ್ತಾನ್ ಹೇಳುತ್ತಾರೆ.
ಉಮ್ರಾ ಯಾತ್ರೆಯನ್ನು ಸೌದಿ ಸರ್ಕಾರ ನಿರ್ಬಂಧಿಸಿದೆ. ಹಾಗಾಗಿ, ಈಗ ಯಾರೂ ಉಮ್ರಾ ಯಾತ್ರೆಗೆ ಹೋಗುತ್ತಿಲ್ಲ. ಖಾಸಗಿ ಹಜ್ ಮತ್ತು ಉಮ್ರಾ ಟೂರ್ ಆಪರೇಟರ್ಗಳು ನಮ್ಮ ನಿಯಂತ್ರಣದಲ್ಲಿ ಇಲ್ಲ. ಆದ್ದರಿಂದ ಅವರಿಗೆ ನಿರ್ದಿಷ್ಟ ಸೂಚನೆಗಳನ್ನು ನೀಡುವ ಅಧಿಕಾರ ನಮಗಿಲ್ಲ. –ಏಜಾಜ್ ಅಹ್ಮದ್, ನೋಡಲ್ ಅಧಿಕಾರಿ, ರಾಜ್ಯ ಹಜ್ ಸಮಿತಿ
–ರಫೀಕ್ ಅಹ್ಮದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ