ಅಂತರವಿಲ್ಲದೆ ಆತಂಕ ಸೃಷ್ಟಿ


Team Udayavani, Mar 29, 2020, 10:37 AM IST

ಅಂತರವಿಲ್ಲದೆ ಆತಂಕ ಸೃಷ್ಟಿ

ಬೆಂಗಳೂರು: ಪಾಲಿಕೆ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ತರಕಾರಿ ಮಾರಾಟಕ್ಕೆ ಯಾವುದೇ ಪೂರ್ವಸಿದ್ಧತೆ ಮಾಡಿಕೊಳ್ಳದೆ ಅವಕಾಶ ನೀಡಿದ್ದರಿಂದ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಶನಿವಾರ ಜನ ಜಂಗುಳಿ ಸೇರಿ ಆತಂಕದ ವಾತಾವರಣ ನಿರ್ಮಾಣವಾಯಿತು.

ನೂರಾರು ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಒಂದೆಡೆ ಗುಂಪು ಸೇರಿದ ಮೇಲೆ ಪರಿಸ್ಥತಿ ನಿಯಂತ್ರಿಸಲು ವಿಫ‌ಲವಾದ ಪಾಲಿಕೆ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ತರಕಾರಿ ಮಾರಾಟ ಮಾಡುವುದಕ್ಕೆ ತಾತ್ಕಾಲಿಕ ತಡೆ ನೀಡಿದೆ. ಪಾಲಿಕೆ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ತರಕಾರಿ ಮಾರಾಟಕ್ಕೆ ಯಾವುದೇ ಪೂರ್ವಸಿದ್ಧತೆ ಮಾಡಿಕೊಳ್ಳದೆ ಏಕಾಏಕಿ ನ್ಯಾಷನಲ್‌ ಕಾಲೇಜು ಮೈದಾನಕ್ಕೆ ಕೆ.ಆರ್‌. ಮಾರುಕಟ್ಟೆಯನ್ನು ಸ್ಥಳಾಂತರಿಸುವುದಾಗಿ ತಿಳಿಸಿತ್ತು.

ಹೀಗಾಗಿ, ಶನಿವಾರ ಬೆಳಗ್ಗೆಯೇ ಚಿಲ್ಲರೆ ವ್ಯಾಪಾರಿಗಳು ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟ ಪ್ರಾರಂಭಿಸಿದರು. ಹೀಗಾಗಿ, ಸಾರ್ವಜನಿಕರು ಖರೀದಿಗೆ ಮುಗಿಬಿದ್ದರು. ಈ ವೇಳೆ ಖರೀದಿಗೆ ಬಂದ ಸಾರ್ವಜನಿಕರು ಮಾಸ್ಕ್ ಧರಿಸದೆ ಹಾಗೂ ಕನಿಷ್ಠ ಒಂದು ಮೀಟರ್‌ ಅಂತರ ಕಾಯ್ದುಕೊಳ್ಳದೆ ಗುಂಪಾಗಿ ಸೇರಿದ್ದು, ಆತಂಕಕ್ಕೆ ಕಾರಣವಾಯಿತು.

ಕೆ.ಆರ್‌. ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆ ಭಾಗದಲ್ಲಿ ಸಾರ್ವಜನಿಕರು ಗುಂಪು ಸೇರುತ್ತಿದ್ದ ಹಿನ್ನೆಲೆಯಲ್ಲಿ ನ್ಯಾಷನಲ್‌ ಕಾಲೇಜು ಮೈದಾನ ಸೇರಿದಂತೆ ಮೂರು ಕಡೆ ವಿಶಾಲ ಪ್ರದೇಶದಲ್ಲಿ ಮಾರುಕಟ್ಟೆ ತೆರೆಯುವುದಕ್ಕೆ ವ್ಯವಸ್ಥೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಉದಯ್‌ ಗರುಡಾಚಾರ್‌ ಹಾಗೂ ರವಿಸುಬ್ರಹ್ಮಣ್ಯ ಪರಸ್ಪರ ಚರ್ಚೆ ನಡೆಸಿದ್ದರು. ಈ ನಿಟ್ಟಿನಲ್ಲಿ ವಿವಿಧ ಮೈದಾನಗಳನ್ನು ಪಾಲಿಕೆ ಗುರುತಿಸಿತ್ತಾದರೂ, ಯಾವುದೇ ವ್ಯವಸ್ಥೆ ಮಾಡಿಕೊಂಡಿರಲಿಲ್ಲ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಪಾಲಿಕೆ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌, ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನೀರು, ವಿದ್ಯುತ್‌ ಹಾಗೂ ವಾಹನ ನಿಲ್ಲಿಸಲು ವ್ಯವಸ್ಥೆ ಮಾಡಿಕೊಂಡ ಮೇಲೆ ಕೆ.ಆರ್‌. ಮಾರುಕಟ್ಟೆಯ ಕೆಲವು ಮಳಿಗೆಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು ಎಂದರು.

ಪಾಲಿಕೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳುವ ಮುನ್ನವೇ ಕೆ.ಆರ್‌. ಮಾರುಕಟ್ಟೆಯ ಕೆಲವು ಮಳಿಗೆಗಳ ವ್ಯಾಪಾರಿಗಳು ವ್ಯಾಪಾರ ಶುರು ಮಾಡಿದ ಹಿನ್ನೆಲೆಯಲ್ಲಿ ಗೊಂದಲ ಸೃಷ್ಟಿಯಾಗಿದೆ. ಸೂಕ್ತ ವ್ಯವಸ್ಥೆ ಮಾಡಿಕೊಂಡ ಮೇಲೆ ಮಾರುಕಟ್ಟೆ ಸ್ಥಳಾಂತರ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.