ಉಪಯುಕ್ತ ಯೋಜನೆಗಳು ನಿಲ್ಲುವ ಆತಂಕ


Team Udayavani, Aug 13, 2019, 3:08 AM IST

upayukta

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ 13 ಅಕಾಡೆಮಿಗಳು ಮತ್ತು ಮೂರು ಪ್ರಾಧಿಕಾರಗಳು ಈಗಾಗಲೇ ಆರಂಭಿಸಿರುವ ಯೋಜನೆಗಳನ್ನು ಹಾಗೇ ಮುಂದುವರಿಸಿಕೊಂಡು ಹೋಗಬೇಕು ಎಂಬ ಮಾತುಗಳು ಸಾಂಸ್ಕೃತಿಕ ವಲಯದಲ್ಲಿ ಬಲವಾಗಿ ಕೇಳಿ ಬಂದಿದೆ.

ಹೊಸ ಸರ್ಕಾರ ರಚನೆಯಾದ ನಂತರ ಪ್ರಾಧಿಕಾರ ಮತ್ತು ವಿವಿಧ ಅಕಾಡೆಗಳ ಅಧ್ಯಕ್ಷರು ರಾಜೀನಾಮೆ ನೀಡಿದ್ದು ಇದರಿಂದಾಗಿ ನಿರ್ಗಮಿತ ಅಧ್ಯಕ್ಷರು ಈಗಾಗಲೇ ರೂಪಿಸಿರುವ ಉತ್ತಮ ಯೋಜನೆಗಳು ಅರ್ಧಕ್ಕೆ ನಿಲ್ಲುವ ಆತಂಕ ಎದುರಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರುವಾಗಿದೆ.

ನಾಟಕ ಅಕಾಡೆಮಿ ರೂಪಿಸಿರುವ ದೂರದೃಷ್ಟಿ ಯೋಜನೆಗಳಲ್ಲಿ “ರಂಗ ಚಟುವಟಿಕೆಗಳ ದಾಖಲೀಕರಣ’, “ಭರತನಾಟ್ಯ ಶಾಸ್ತ್ರದ ಕನ್ನಡ ಲಿಪೀಕರಣ’ ಕೂಡ ಸೇರಿದೆ. ಯಕ್ಷಗಾನ ಅಕಾಡೆಮಿ ತಾಲೂಕು ಕೇಂದ್ರಗಳಲ್ಲಿ “ಮನೆಯಂಗಳದಲ್ಲಿ ಮಾತುಕತೆ’ಎಂಬ ಕಾರ್ಯಕ್ರಮ ರೂಪಿಸಲು ತಯಾರಿ ನಡೆಸಿತ್ತು. ಯಕ್ಷಗಾನ ಕಲೆಯನ್ನು ಮತ್ತಷ್ಟು ಜೀವಂತವಾಗಿಸಲು ಮಕ್ಕಳಿಗೆ “ಯಕ್ಷಗಾನ ತರಬೇತಿ’ ಸೇರಿದಂತೆ ಹಲವು ಅನುಪಮ ಯೋಜನೆಗಳು ರೂಪಿಸಿತ್ತು.

ಹಾಗೆಯೇ ಕನ್ನಡ ಪುಸ್ತಕ ಪ್ರಾಧಿಕಾರ “ಪ್ರಕಾಶಕರ ಸಮ್ಮೇಳನಕ್ಕೆ ಅಣಿಯಾಗಿತ್ತು. ಹೊರ ರಾಜ್ಯದ ಪ್ರಕಾಶಕರನ್ನು ಬೆಂಗಳೂರಿಗೆ ಆಹ್ವಾನಿಸಿ ಕಾರ್ಯಕ್ರಮ ಮಾಡುವ ಆಲೋಚನೆಯಲ್ಲಿತ್ತು. ಗಡಿ ಪ್ರದೇಶದಲ್ಲಿರುವ ಕನ್ನಡ ಶಾಲೆಗಳ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳನ್ನು ನೀಡುವ ಯೋಜನೆ ಕೈಗೊಂಡಿತ್ತು. ಜತೆಗೆ ಗ್ರಾಮೀಣ ಪ್ರದೇಶಗಳಿಗೆ ಪುಸ್ತಕಗಳನ್ನು ಕೊಂಡೊಯ್ಯುವ ಆಲೋಚನೆ ಮಾಡಿತ್ತು.

ಈಗಾಗಲೇ ನಾಟಕ ಅಕಾಡೆಮಿ, ಯಕ್ಷಗಾನ ಅಕಾಡೆಮಿ, ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರು ಉತ್ತಮ ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಮುಂದುವರಿಸುವ ಅಗತ್ಯವಿದೆ ಎಂದು ಹಿರಿಯ ರಂಗಕರ್ಮಿ ಶ್ರೀನಿವಾಸ್‌ ಜಿ.ಕಪ್ಪಣ್ಣ ಹೇಳಿದ್ದಾರೆ.

“ಉದಯವಾಣಿ’ ಜತೆ ಮಾತನಾಡಿದ ಅವರು, ನಾಟಕ ಅಕಾಡೆಮಿ ಆರಂಭಿಸಿರುವ ರಂಗ ಚಟುವಟಿಕೆಗಳ ದಾಖಲೀಕರಣ ಅದ್ಭುತ ಯೋಜನೆ. ಜಾನಪದ, ಯಕ್ಷಗಾನ ಅಕಾಡೆಮಿ ಮತ್ತು ಸಾಹಿತ್ಯ ಅಕಾಡೆಮಿಗಳು ಕೂಡ ಅತ್ಯುತ್ತಮ ಕಾರ್ಯಕ್ರಗಳನ್ನು ರೂಪಿಸಿದ್ದು, ನಾಡಿನ ಸಾಂಸ್ಕೃತಿಕ ಚಟುವಟಿಕೆಗಳ ಅಭಿವೃದ್ಧಿ ದೃಷ್ಟಿಯಿಂದ ಈ ಯೋಜನೆಗಳನ್ನು ಮುಂದುವರಿಸುವುದು ಒಳಿತು ಎಂದರು.

ಕನ್ನಡ ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಅರವಿಂದ ಮಾಲಗತ್ತಿ ಪ್ರತಿಕ್ರಿಯಿಸಿ, ಸಾಹಿತ್ಯಅಕಾಡೆಮಿ ಈಗಾಗಲೇ “ಸೀಮಾತೀತ ಸಾಹಿತ್ಯ ಪರ್ಬ’ ಎಂಬ ರಾಷ್ಟ್ರೀಯ ವಿಚಾರ ಸಂಕಿರಣ ರೂಪಿಸಿತ್ತು. ಅದನ್ನು ಇಲಾಖೆ ಮುಂದಿನ ದಿನಗಳಲ್ಲಿ ಆಯೋಜಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಯಕ್ಷಗಾನ ಅಕಾಡೆಮಿ ನಿಕಟ ಪೂರ್ವ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ಮಾತನಾಡಿ, ಯಕ್ಷಗಾನ ಲೋಕಕ್ಕೆ ಹಲವರು ಅನುಪಮ ಕೊಡುಗೆ ನೀಡಿದ್ದಾರೆ. ಅಂತವರನ್ನು ಅವರ ಹುಟ್ಟೂರಿನಲ್ಲೇ ನೆನೆಯುವ ಕಾರ್ಯಕ್ರಮ ರೂಪಿಸಲಾಗಿತ್ತು ಎಂದರು.

ಮುಂದುವರಿಕೆಗೆ ಪತ್ರ: ವಿವಿಧ ಅಕಾಡೆಮಿಗಳು ಪ್ರಾರಂಭಿಸಿರುವ ಯೋಜನೆಗಳನ್ನು ಮುಂದುವರಿಸಲು ನಾಟಕ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಜೆ.ಲೋಕೇಶ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಆರ್‌.ಆರ್‌.ಜನ್ನು ಅವರಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರ ಬರೆದಿರುವ ಅವರು, ಇಲಾಖೆ ಯಾವುದೇ ಹಸ್ತಕ್ಷೇಪ ಮಾಡದೆ, ಹಾಲಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಒತ್ತಾಯಿಸಿದ್ದಾರೆ.

ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳು ಅತ್ಯುತ್ತಮ ಯೋಜನೆಗಳನ್ನು ರೂಪಿಸಿದ್ದು ಈ ಎಲ್ಲಾ ಕಾರ್ಯಕ್ರಮಗಳನ್ನು ಮುಂದೆ ಬರುವವರು ಮುಂದುವರಿಸಿಕೊಂಡು ಹೋಗುವ ವಿಶ್ವಾಸವಿದೆ.
-ಡಾ.ವಸುಂಧರಾ ಭೂಪತಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷೆ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.