ಕಂಟೈನ್ಮೆಂಟ್‌ ಝೋನ್‌ನಲ್ಲಿರುವವರಿಗೆ ಆ್ಯಪ್‌ ನೆರವು

ಬಿಬಿಎಂಪಿ ಕಂಟೈನ್ಮೆಂಟ್‌ ಎಂಬ ಅಪ್ಲಿಕೇಷನ್‌

Team Udayavani, Apr 26, 2020, 9:55 AM IST

ಕಂಟೈನ್ಮೆಂಟ್‌ ಝೋನ್‌ನಲ್ಲಿರುವವರಿಗೆ ಆ್ಯಪ್‌ ನೆರವು

ಬೆಂಗಳೂರು: ನಗರದಲ್ಲಿ ಕಂಟೈನ್ಮೆಂಟ್‌ ಝೋನ್‌ಗಳ ವ್ಯಾಪ್ತಿಯಲ್ಲಿರುವ ಜನರಿಗೆ ನೆರವಾಗಲು ಪಾಲಿಕೆ ಹೊಸ ಆ್ಯಪ್‌ ಪರಿಚಯಿಸಲು ಮುಂದಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 20 ಕಂಟೈನ್ಮೆಂಟ್‌ ಝೋನ್‌ಗಳನ್ನು ಇಲ್ಲಿಯವರೆಗೆ ಗುರುತಿಸಲಾಗಿದ್ದು, ಕಂಟೈನ್ಮೆಂಟ್‌ ವ್ಯಾಪ್ತಿಯಲ್ಲಿ ಗೊಂದಲ ಹಾಗೂ ನಿಯಮ ಉಲ್ಲಂಘನೆ ಪ್ರಕರಣಗಳು ವರದಿಯಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಪಾಲಿಕೆ ಎಂಬ ಆ್ಯಪ್‌ ಪರಿಚಯಿಸಲು ಸಿದ್ಧತೆ ಮಾಡಿಕೊಂಡಿದ್ದು, ಇಷ್ಟರಲ್ಲೇ ಈವ್ಯಾಪ್ತಿಯ ಜನರ ಅಗತ್ಯಕ್ಕೆ ನೆರವಾಗಲು ಮುಂದಾಗಿದೆ.

ಇದರ ಮೂಲಕ ಆಹಾರ, ನೀರು ಸರಬರಾಜು, ಕಸ ಸಂಗ್ರಹಣ ಹಾಗೂ ಕ್ವಾರೆಂಟೈನ್‌ನಲ್ಲಿರುವವರ ಮೇಲೆ ಕಣ್ಣಿಡಲು ಪಾಲಿಕೆ ಮುಂದಾಗಿದೆ. ಈ ಕುರಿತು ಉದಯವಾಣಿ ಜತೆ ಮಾತನಾಡಿದ ಬೆಂಗಳೂರು ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕ ಹೆಪ್ಸಿಬಾ ರಾಣಿ ಕೊರ್ಲಾಪಾಟಿ ಅವರು, ದೇಶದಲ್ಲಿ ಇದೇ ಮೊದಲ ಬಾರಿಗೆ ಬಿಬಿಎಂಪಿ ಕಂಟೈನ್ಮೆಂಟ್‌ ವ್ಯಾಪಿ ಯಲ್ಲಿರುವ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ “”ಬಿಬಿಎಂಪಿ ಕಂಟೈ ನ್ಮೆಂಟ್‌” ಎಂಬ ಆ್ಯಪ್‌ ಪರಿಚಯ  ಪಡಿಸುತ್ತಿದೆ. ಈ ಆಪ್‌ನ ಮೂಲಕ ಸಾರ್ವಜನಿಕರು ಕಂಟೈನ್ಮೆಂಟ್‌ ವ್ಯಾಪ್ತಿಯಲ್ಲಿ ಯಾರಿಗಾದರೂ ದಿನಸಿ ಸಮಸ್ಯೆಯಾದರೆ ಹಾಗೂ ಆರೋಗ್ಯದಲ್ಲಿ ಏರುಪೇರಾದರೆ ಮಾಹಿತಿ ನೀಡಬಹುದು. ಕಂಟೈನ್ಮೆಂಟ್‌ ವ್ಯಾಪ್ತಿಯಲ್ಲಿ ಯಾರಾದರೂ ನಿಯಮ ಉಲ್ಲಂಘನೆ ಮಾಡಿ ಗುಂಪು ಸೇರಿದರೆ, ಬ್ಯಾರಿಕೇಡ್‌ ಸರಿಸಿ ನಿಯಂತ್ರಿತ ವಲಯದಿಂದ ಹೊರಗೆ ಅಥವಾ ಒಳಗೆ ಹೋಗಲು ಪ್ರಯತ್ನಿಸಿದರೆ ಅವರ ಚಿತ್ರವನ್ನು ತೆಗೆದು ಆ್ಯಪ್‌ನಲ್ಲಿ ಅಪ್‌ಲೋಡ್‌ ಮಾಡಲು ಅವಕಾಶ ನೀಡಲಾಗಿದೆ. ಈ ರೀತಿಯ ಯಾವುದೇ ಸಂದೇಶ ಬಂದರೂ ಬಿಬಿಎಂಪಿಯ ಅಧಿಕಾರಿಗಳು ಹಾಗೂ ಪೊಲೀಸರು ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆ ಪರಿಹರಿಸುತ್ತಾರೆ ಎಂದು ಮಾಹಿತಿ ನೀಡಿದರು.

ಗೊಂದಲಗಳಿಗೆ ತೆರೆ: ಬಿಬಿಎಂಪಿ ವ್ಯಾಪ್ತಿಯಲ್ಲಿನ ಕಂಟೈನ್ಮೆಂಟ್‌ ಝೋನ್‌ಗಳಲ್ಲಿ ಆರೋಗ್ಯಾಧಿಕಾರಿಗಳಿಗೆ ಅಸಹಕಾರ ನೀಡುತ್ತಿರುವುವುದು ಹಾಗೂ ನಿಂದನೆ ಘಟನೆಗಳು ನಡೆಯುತ್ತಿವೆ ಇಂತಹ ಸಂದರ್ಭದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳುವುದಕ್ಕೂ ಇದು ಸಹಕಾರಿಯಾಗಲಿದೆ.

ಕಂಟೈನ್ಮೆಂಟ್‌ ವ್ಯಾಪ್ತಿ ಜನರಿಗೆ ಮಾತ್ರ: ಬಿಬಿಎಂಪಿ ಕಂಟೈನ್ಮೆಂಟ್‌ ಆ್ಯಪ್‌ ಹೆಸರೇ ಸೂಚಿಸುವಂತೆ ಕಂಟೈನ್ಮೆಂಟ್‌ ಜನರಿಗೆ ಮಾತ್ರ ಬಳಸಲು ಅನುವು ಮಾಡಿಕೊಡಲಾಗಿದೆ. ನೀವು ಕಂಟೈನ್ಮೆಂಟ್‌ ವ್ಯಾಪ್ತಿಯಲ್ಲಿ ಇದ್ದರೆ ಮಾತ್ರ ಡೌನ್‌ಲೋಡ್‌ ಆಪ್ಷನ್‌ ತೋರಿಸಲಿದೆ. ಉಳಿದಂತೆ ನಗರದ ಬೇರೆ ವ್ಯಾಪ್ತಿಯಲ್ಲಿದ್ದರೆ ಈ ಆ್ಯಪ್‌ ಬಳಸಲು ಸಾಧ್ಯವಿಲ್ಲ. ಇನ್ನು ಎರಡು ದಿನಗಳಲ್ಲಿ ಈ ಆಪ್‌ ಸಾರ್ವಜನಿಕ ಬಳಕೆಗೆ ಮುಕ್ತವಾಗುವ ಸಾಧ್ಯತೆ ಇದೆ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ.

 ಕಂಟೈನ್ಮೆಂಟ್‌ ಆ್ಯಪ್‌ ಕಾರ್ಯನಿರ್ವಹಣೆ ಹೇಗೆ? :  ಬಿಬಿಎಂಪಿ ಕಂಟೈನ್ಮೆಂಟ್‌ ಆ್ಯಪ್‌ಅನ್ನು ಚುನಾವಣಾ ಆಯೋಗಾ ಅಭಿವೃದ್ಧಿಪಡಿಸಿದ್ದ ಸಿವಿಜಲ್‌ ಹಾಗೂ ಉಡುಪಿ ಜಿಲ್ಲಾಡಳಿತ ವಿಪತ್ತು ನಿರ್ವಹಣಾ ಸಂದರ್ಭದಲ್ಲಿ ಬಳಸಿದ ಆ್ಯಪ್‌ಗಳ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗಿದ್ದು, ಇದರ ನಿರ್ವಹಣೆಯನ್ನು ಬಿಬಿಎಂಪಿಯ ವಾರ್‌ ರೂಂನ ಮೂಲಕ ನಿರ್ವಹಿಸಲಾಗುತ್ತದೆ. ಇದರಲ್ಲಿ ದೂರು ದಾಖಲಾಗುವ ಎರಡು ನಿಮಿಷದಲ್ಲಿ ಸಂಪೂರ್ಣ ಮಾಹಿತಿ ವಾರ್‌ರೂಮ್‌ಗೆ ಸಿಗಲಿದ್ದು, ವಲಯವಾರು ನೋಡಲ್‌ ಅಧಿಕಾರಿಗಳಿಗೆ ಸಂದೇಶ ರವಾನೆಯಾಗಲಿದೆ. ಅಲ್ಲಿಂದ ಸಂಬಂಧ ಪಟ್ಟವರು ಆಯಾ ನಿರ್ದಿಷ್ಟ ಸಮಸ್ಯೆಗೆ ಸ್ಪಂದಿಸಲಿದ್ದಾರೆ.

 

ಹಿತೇಶ್‌. ವೈ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.