ಸಿಬಿಐ ತನಿಖೆ ಕೋರಿ ಹೈಕೋರ್ಟ್ಗೆ ಅರ್ಜಿ
Team Udayavani, Jun 15, 2019, 3:05 AM IST
ಬೆಂಗಳೂರು: ಐಎಂಎ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಕಂಪನಿಯ ಹೂಡಿಕೆದಾರರೊಬ್ಬರು ಶುಕ್ರವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಿತ್ರದುರ್ಗ ಮೂಲದ ಹೂಡಿಕೆದಾರ ಮೊಹಮ್ಮದ್ ಸಿರಾಜುದ್ದೀನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸುವಂತೆ ಅರ್ಜಿದಾರರ ಪರ ವಕೀಲರು ನ್ಯಾ. ಆಲೋಕ್ ಆರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಮೆಮೋ ಮೂಲಕ ಮನವಿ ಮಾಡಿಕೊಂಡರು. ಅದಕ್ಕೆ ಸೋಮವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ನ್ಯಾಯಪೀಠ ಹೇಳಿದೆ.
ಐಎಂಎ ಗ್ರೂಪ್ ಆಫ್ ಕಂಪನೀಸ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮನ್ಸೂರ್ ಅಹ್ಮದ್ ಖಾನ್ ವಿರುದ್ಧದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೂರನ್ನು ಮುಂದಿನ ವಿಚಾರಣೆಗಾಗಿ ಸಿಬಿಐಗೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಸ್ಥಳೀಯ ಪೊಲೀಸರಿಗೆ ನಿರ್ದೇಶನ ನೀಡಬೇಕು.
ಐಎಂಎ ಕಂಪನಿಯ ವಂಚನೆಗೆ ಸಂಬಂಧಿಸಿದಂತೆ 2018ರ ನ.16ರಂದು ಬೆಂಗಳೂರು ಉತ್ತರ ವಲಯದ ಉಪವಿಭಾಗಾಧಿಕಾರಿಗಳು ಅವರೇ ಹೊರಡಿಸಿದ ಸಾರ್ವಜನಿಕ ಪ್ರಕಟಣೆ ಆಧರಿಸಿ ಮನ್ಸೂರ್ ಅಹ್ಮದ್ ಖಾನ್ ವಿರುದ್ಧ ಕೈಗೊಂಡಿರುವ ತನಿಖೆಗೆ ಸಮಗ್ರ ದಾಖಲೆಗಳು ಮತ್ತು ಕಂಪನಿಯ ನಿರ್ದೇಶಕರಿಗೆ ಸಂಬಂಧಪಟ್ಟ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಉಪವಿಭಾಗಾಧಿಕಾರಿಗೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.
ಮನ್ಸೂರ್ ರಾಜ್ಯದ ಕೆಲವು ಸಚಿವರು, ರಾಜಕಾರಣಿಗಳು, ಐಪಿಎಸ್ ಅಧಿಕಾರಿಗಳಿಗೆ ಆಪ್ತನಾಗಿದ್ದಾನೆ. ಸಚಿವರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆತನ ರಕ್ಷಣೆ ಮಾಡುತ್ತಿದ್ದಾರೆ. ಹಾಗಾಗಿಯೇ ಆತ ಕೋಟ್ಯಂತರ ರೂ. ದೋಚಿ ದೇಶಬಿಟ್ಟು ಪರಾರಿಯಾಗಿದ್ದಾನೆ. ಸ್ಥಳೀಯ ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಈ ತನಿಖೆಯಿಂದ ವಂಚಿತರಿಗೆ ನ್ಯಾಯ ಸಿಗುವುದಿಲ್ಲ. ಆದ್ದರಿಂದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಯಾದ ಸಿಬಿಐಗೆ ವಹಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!