ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ


Team Udayavani, Jan 16, 2023, 10:22 AM IST

tdy-6

ಬೆಂಗಳೂರು: ಈವರೆಗೆ ಪ್ರಕ್ರಿಯೆಗಷ್ಟೇ ಸೀಮಿತವಾಗಿದ್ದ ಪೌರಕಾರ್ಮಿಕರ ನೇಮಕಾತಿಗೆ ಕೊನೆಗೂ ಬಿಬಿಎಂಪಿ ಚಾಲನೆ ನೀಡಿದೆ. ಬಿಬಿಎಂಪಿಯಲ್ಲಿ ಖಾಲಿ ಇರುವ 3,673 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.

ಬಿಬಿಎಂಪಿಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆ ನೇಮಕಕ್ಕೆ ಸಂಬಂಧಿಸಿದಂತೆ ಕಳೆದೆರಡು ತಿಂಗಳ ಹಿಂದೆಯೇ ರಾಜ್ಯ ಸರ್ಕಾರ ಅಧಿಸೂಚನೆ ಪ್ರಕಟಿಸಿತ್ತು. ಆದರೆ, ಪೌರಕಾರ್ಮಿಕರ ಆಯ್ಕೆಗೆ ಸಂಬಂಧಿಸಿದಂತೆ ನಿಗದಿ ಮಾಡಲಾದ ಷರತ್ತುಗಳು, ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳದ ಕ್ರಮ ಸೇರಿ ಇನ್ನಿತರ ಕಾರಣಗಳಿಂದಾಗಿ ಈವರೆಗೆ ಯಾವುದೇ ಪ್ರಕ್ರಿಯೆಗಳು ನಡೆದಿರಲಿಲ್ಲ.ಕಳೆದ ಸಚಿವ ಸಂಪುಟ ಸಭೆ ನಂತರ ಪೌರಕಾರ್ಮಿಕರ ನೇಮಕಕ್ಕೆ ರಾಜ್ಯ ಸರ್ಕಾರ ಗ್ರೀನ್‌ಸಿಗ್ನಲ್‌ ನೀಡಿತ್ತು. ಆ ಹಿನ್ನೆಲೆಯಲ್ಲಿ ಪೌರಕಾರ್ಮಿಕ ನೇಮಕ ಪ್ರಕ್ರಿಯೆಗೆ ಬಿಬಿಎಂಪಿ ಚಾಲನೆ ನೀಡಿದೆ.  ಜ. 16ರಿಂದ ಅರ್ಜಿ ಸಲ್ಲಿಕೆ ಆರಂಭಿಸಲಾಗಿದ್ದು, ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಹುದ್ದೆಗಳನ್ನು ಮೀಸಲಿರಿಸಲಾಗಿದೆ.

3,673 ಪೌರಕಾರ್ಮಿಕರ ನೇಮಕ: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ಪೈಕಿ 2,600 ಕಾಯಂ ಪೌರಕಾರ್ಮಿಕರಿದ್ದಾರೆ. ಉಳಿದಂತೆ 18 ಸಾವಿರ ಪೌರಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೀಗ 3,673 ಪೌರಕಾರ್ಮಿಕ ಹುದ್ದೆಗೆ ಕಾಯಂ ನೇಮಕ ಮಾಡಿಕೊಳ್ಳಲು ಬಿಬಿಎಂಪಿ ಮುಂದಾಗಿದೆ. ಅದರಲ್ಲಿ ಈಗಾಗಲೇ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನೇ ನೇಮಕಕ್ಕೆ ಪರಿಗಣಿಸಲಾಗುತ್ತಿದೆ. ಅದರ ಜತೆಗೆ 3,673 ಪೌರಕಾರ್ಮಿಕ ಹುದ್ದೆಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದವರಿಗೆ 430 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಉಳಿದ 3,243 ಹುದ್ದೆಗಳನ್ನು ರಾಜ್ಯದ ಇತರ ಜಿಲ್ಲೆಗಳವರಿಗೆ ನಿಗದಿ ಮಾಡಲಾಗಿದೆ.

ಎಸ್ಸಿ/ಎಸ್ಟಿ ಸಮುದಾಯಕ್ಕೆ 882: ನೇಮಕಾತಿಯಲ್ಲಿ ಎಸ್ಸಿ/ಎಸ್ಟಿ, ಸಾಮಾನ್ಯ ವರ್ಗ, ಪ್ರವರ್ಗ 1, 2ಎ, 2ಬಿ, 3ಎ, 3ಬಿಗೆ ಪ್ರತ್ಯೇಕವಾಗಿ ಹುದ್ದೆಗಳ ಸಂಖ್ಯೆಯನ್ನು ನಿಗದಿ ಮಾಡಲಾಗಿದೆ. ಅದರಲ್ಲಿ ಸಾಮಾನ್ಯ ವರ್ಗದವರಿಗೆ ಅತಿಹೆಚ್ಚು ನಿಗದಿ ಮಾಡಲಾಗಿದ್ದು, ಕಲ್ಯಾಣ ಕರ್ನಾಟಕದ ಹುದ್ದೆಗಳೂ ಸೇರಿ ಒಟ್ಟು 1,617 ಸಾಮಾನ್ಯ ವರ್ಗದ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಉಳಿದಂತೆ ಪರಿಶಿಷ್ಟ ಜಾತಿಯವರಿಗೆ 624, ಪರಿಶಿಷ್ಟ ಪಂಗಡದವರಿಗೆ 258 ಹುದ್ದೆ ಮೀಸಲಿರಿಸಲಾಗಿದೆ. ಉಳಿದ ಹುದ್ದೆಗಳು ಉಳಿದ ಪ್ರವರ್ಗದವರಿಗೆ ನಿಗದಿ ಮಾಡಲಾಗಿದೆ. ಅಲ್ಲದೆ, ಎಲ್ಲ ವರ್ಗದಲ್ಲೂ ಶೇ. 1 ಹುದ್ದೆಯನ್ನು ತೃತೀಯ ಲಿಂಗಿಗಳಿಗೆ ಮೀಸಲಿರಿಸಲಾಗಿದೆ. ಪ್ರಮುಖವಾಗಿ ಸಾಮಾನ್ಯ ವರ್ಗ ಅಥವಾ ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳು ನಿಗದಿಯಷ್ಟು ದೊರೆಯದಿದ್ದರೆ ಆ ಹುದ್ದೆಗೆ ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ಅರ್ಜಿ ಸಲ್ಲಿಕೆ ಆರಂಭ: ಪೌರಕಾರ್ಮಿಕ ಹುದ್ದೆಗೆ ಜ. 16 (ಸೋಮವಾರ)ದಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲಾಗಿದೆ. ಜ. 30ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಪೌರಕಾರ್ಮಿಕ ಹುದ್ದೆಗೆ ನೇಮಕವಾಗಲು ಬಯಸುವವರು ಆಯಾ ವಾರ್ಡ್‌ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ (ಘನತ್ಯಾಜ್ಯ) ಇವರಿಗೆ ರಜಾ ದಿನಗಳನ್ನು ಹೊರತುಪಡಿಸಿ ಬೆಳಗ್ಗೆ 10ರಿಂದ ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸುವವರ ಗುತ್ತಿಗೆ ಆಧಾರದಲ್ಲಿ ಕನಿಷ್ಠ 2 ವರ್ಷಗಳ ಕಾಲ ಪೌರಕಾರ್ಮಿಕರಾಗಿ ಹಾಲಿ ಕೆಲಸ ಮಾಡಿರಬೇಕಿದೆ. ಅಭ್ಯರ್ಥಿಯ ವಯಸ್ಸು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ 2022ರ ನವೆಂಬರ್‌ 23ಕ್ಕಿಂತ ಮುಂಚೆ 55 ವರ್ಷಗಳಿಗಿಂತ ಹೆಚ್ಚಿರಬಾರದು ಎಂದು ತಿಳಿಸಲಾಗಿದೆ.

ಇಬ್ಬರು ಪತ್ನಿಯಿದ್ದರೆ ಅನರ್ಹರು: ಅರ್ಜಿ ಸಲ್ಲಿಸುವ ಪುರುಷ ಪೌರಕಾರ್ಮಿಕರಿಗೆ ಇಬ್ಬರು ಪತ್ನಿಯರಿರಬಾರದು ಎಂದು ಷರತ್ತಿನಲ್ಲಿ ಉಲ್ಲೇಖೀಸಲಾಗಿದೆ. ಅದರ ಜತೆಗೆ ಮಹಿಳಾ ಪೌರಕಾರ್ಮಿಕರು ಇಬ್ಬರು ಪತ್ನಿ ಇರುವವರನ್ನು ವಿವಾಹವಾಗಿರಬಾರದು ಎಂದೂ ತಿಳಿಸಲಾಗಿದೆ. ಅಲ್ಲದೆ, ಕ್ರಿಮಿನಲ್‌ ಪ್ರಕರಣ ಇರುವವರು, ಈ ಹಿಂದೆ ಸೇವೆಯಿಂದ ವಜಾಗೊಂಡವರು ಅರ್ಜಿ ಸಲ್ಲಿಸಲು ಅನರ್ಹರಾಗಿದ್ದಾರೆ. ನಿಗದಿತ ಷರತ್ತುಗಳಿಗೆ ವಿರುದ್ಧವಾಗಿ ಅರ್ಜಿ ಸಲ್ಲಿಸಿದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವುದು ಹಾಗೂ ಅಪೂರ್ಣ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ ಎಂದೂ ಬಿಬಿಎಂಪಿ ಹೇಳಿದೆ. 3,673 ಪೌರಕಾರ್ಮಿಕರ ನೇಮಕಕ್ಕೆ ಸಂಬಂಧಿಸಿದಂತೆ ಇದ್ದಂತಹ ತೊಡಕುಗಳೆಲ್ಲವೂ ನಿವಾರಣೆಯಾಗಿದೆ.

ಸೋಮವಾರದಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಜ. 30 ಅರ್ಜಿ ಸಲ್ಲಿಕೆಗೆ ಅಂತಿಮ ದಿನವಾಗಿದೆ. ಅದಾದ ನಂತರ ಅರ್ಜಿ ಪರಿಶೀಲನೆ ಸೇರಿ ಇನ್ನಿತರ ಕೆಲಸ ಮಾಡಲಾಗುವುದು. ಡಾ|ಕೆ.ಹರೀಶ್‌ಕುಮಾರ್‌, ಬಿಬಿಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ)

ಗಿರೀಶ್‌ ಗರಗ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.