ಸಿಎಂ ಆಗಲು ಅನುಮತಿ ಕೋರಿದ್ದ ಅರ್ಜಿ ವಜಾ
Team Udayavani, Jul 7, 2018, 2:15 PM IST
ಬೆಂಗಳೂರು: ವಿಧಾನಸೌಧ ಪಡಸಾಲೆ ಹಾಗೂ ಕಾಂಗ್ರೆಸ್ ಕಚೇರಿಯಲ್ಲಿ ಸದಾ ಕಾಣಿಸಿಕೊಳ್ಳುವ ಹರಿಶ್ಚಂದ್ರಗೌಡ ಎಂಬುವವರು ತಮಗೆ ರಾಜ್ಯದ ಮುಖ್ಯಮಂತ್ರಿ ಆಗಲು ಅನುಮತಿ ಕೊಡಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ತಮಗೆ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ರಾಜ್ಯದಲ್ಲಿ ಸರ್ಕಾರ ರಚಿಸಲು ಅನುಮತಿ ನೀಡಿದ್ದಾರೆ.
ಆದರೆ, ನಾನು ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದು ಹರಿಶ್ಚಂದ್ರಗೌಡ ಸ್ವತಃ ವಾದಿಸಿದರೂ ಫಲ ಸಿಗಲಿಲ್ಲ. ಹರಿಶ್ಚಂದ್ರಗೌಡ ಅವರ ವಾದ ಆಲಿಸಿದ ನ್ಯಾಯಮೂರ್ತಿ ಎಚ್.ಜಿ.ರಮೇಶ್ ನೇತೃತ್ವದ ವಿಭಾಗೀಯ ಪೀಠ, ಈ ಅರ್ಜಿ ವೈಯಕ್ತಿಕ ಹಿತಾಸಕ್ತಿಯ ಅರ್ಜಿಯಾಗಿದೆ. ಸಾರ್ವಜನಿಕ ಹಿತಾಸಕ್ತಿಯ ವ್ಯಾಪ್ತಿಗೆ ಒಳಪಡುವುದಿಲ್ಲ. ಅರ್ಜಿ ವಿಚಾರಣೆ ನಡೆಸಲು ಕಾನೂನು ಆಧಾರಗಳಿಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Rain: ಭಾರೀ ಧರೆಗುರುಳಿದ 118 ಮರಗಳು
Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್ ಕ್ಲಾಸ್
Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ
Election Result: ಟ್ರೆಂಡ್ ಗೊತ್ತಾದರೂ ಫಲಿತಾಂಶ ಘೋಷಣೆ ವಿಳಂಬ ಸಾಧ್ಯತೆ
ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ
MUST WATCH
ಹೊಸ ಸೇರ್ಪಡೆ
Sagara: ಮತದಾನಕ್ಕೆ ಬಂದಿದ್ದವರ ಮೊಬೈಲ್ ಕಳ್ಳತನ
Mandya: ಬಿಜೆಪಿ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ
ಈಶಾನ್ಯ ಪದವೀಧರರ ಚುನಾವಣೆ: ಹರಪನಹಳ್ಳಿಯಲ್ಲಿ ಮ.1 ಗಂಟೆಯವರೆಗೆ ಶೇ.33.8 ರಷ್ಟು ಮತದಾನ
Shimoga; ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ ಪಾದಚಾರಿ ಮಹಿಳೆ
ಆಗುಂಬೆ ಘಾಟಿಯಲ್ಲಿ ಪಾರ್ಕಿಂಗ್ ನಿಷೇಧ ಎಂಬ ನಾಮ ಫಲಕ ಎದುರೇ ವಾಹನ ಪಾರ್ಕಿಂಗ್ – ಪೊಲೀಸರು ಮೌನ