ಆರು ಮತಗಟ್ಟೆಗಳ ಸ್ಥಳಾಂತರಕ್ಕೆ ಅನುಮೋದನೆ
Team Udayavani, Apr 8, 2019, 3:00 AM IST
ಬೆಂಗಳೂರು: ಉತ್ತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿನ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಮತಗಟ್ಟೆ ಹಾಗೂ ಯಶವಂತಪುರ ವಿಧಾನಸಭೆ ಕ್ಷೇತ್ರದಲ್ಲಿ ಐದು ಮತಗಟ್ಟೆಗಳನ್ನು ಸ್ಥಳಾಂತರಿಸಲು ಚುನಾವಣಾ ಆಯೋಗ ಅನುಮೋದನೆ ನೀಡಿದೆ ಎಂದು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿ ಬಿ.ಎಂ.ವಿಜಯ್ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವರತ್ನ ಅಗ್ರಹಾರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿದ್ದ ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದ ಮತಗಟ್ಟೆ ಸಂಖ್ಯೆ 6, ಇದೀಗ ನವರತ್ನ ಅಗ್ರಹಾರದ ಅಂಗನವಾಡಿ ಕೇಂದ್ರಕ್ಕೆ ಸ್ಥಳಾಂತರವಾಗಿದೆ.
ಕೆಂಗೇರಿ ಹೋಬಳಿಯ ಕುಂಬಳಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿದ್ದ ಮತಗಟ್ಟೆ ಸಂಖ್ಯೆ 390, 391, 392 ಮತ್ತು 393 ಹಾಗೂ ಕೆಂಗೇರಿ ಹೋಬಳಿಯ ಕುಂಬಳಗೋಡು ಗ್ರಾ.ಪಂ ಕಚೇರಿಯ ಮತಗಟ್ಟೆ ಸಂಖ್ಯೆ 394 ಕೆಂಗೇರಿ ಹೋಬಳಿಯ ಕುಂಬಳಗೋಡುವಿನ ಡಾನ್ ಬಾಸ್ಕೋ ಸಮೂಹ ಸಂಸ್ಥೆಯ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಸ್ಥಳಾಂತರಗೊಂಡಿವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ