ಶಂಕಿತ ಉಗ್ರನ ಬಂಧನ
Team Udayavani, Feb 27, 2020, 3:10 AM IST
ಬೆಂಗಳೂರು: ಐಸಿಸ್ ಪ್ರೇರಿತ ಅಲ್-ಹಿಂದ್ ಸಂಘಟನೆಯ ಮತ್ತೂಬ್ಬ ಶಂಕಿತ ಉಗ್ರನನ್ನು ಬೆಂಗಳೂರಿನ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಮತ್ತು ಆಂತರಿಕ ಭದ್ರತಾ ದಳ(ಐಎಸ್ಡಿ) ಅಧಿಕಾರಿಗಳು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ.
ಡಿ.ಜೆ.ಹಳ್ಳಿಯ ಕಾಫಿ ಬೋರ್ಡ್ ಕಾಲೋನಿ ನಿವಾಸಿ ಫಜಿ ಅಲಿಯಾಸ್ ಸೈಯದ್ ಫಜಿ ಅಲಿಯಾಸ್ ಫಜಿ ಉರ್ ರೆಹಮಾನ್ (36) ಬಂಧಿತ. ಇವೆಂಟ್ ಮ್ಯಾನೆಜ್ಮೆಂಟ್ ಸಂಸ್ಥೆ ನಡೆಸುವ ಫಜಿ, ಅಲ್-ಹಿಂದ್ ಸಂಘಟನೆ ಮತ್ತು ಐಸಿಸ್ ಸಂಘಟನೆಯ ಕರ್ನಾಟಕ ಮತ್ತು ತಮಿಳುನಾಡು ವಿಭಾಗದ ಮುಖ್ಯಸ್ಥ ಮೆಹಬೂಬ್ ಪಾಷಾನ ಆತ್ಯಾಪ್ತರ ಲ್ಲೊಬ್ಬನಾಗಿದ್ದಾನೆ. ಪಾಷಾನ ಸೂಚನೆ ಮೇರೆಗೆ ವಿಧ್ವಂಸಕ ಕೃತ್ಯಕ್ಕೆ ಬೇಕಾಗಿರುವ ಎಲ್ಲ ಸಾಮಗ್ರಿಗಳನ್ನು ಸರಬರಾಜು ಮಾಡುತ್ತಿದ್ದ.
ಜನವರಿ ಎರಡನೇ ವಾರದಲ್ಲಿ ತಮಿಳುನಾಡಿನ ಕ್ಯೂಬ್ರಾಂಚ್ ಪೊಲೀಸರು ಮತ್ತು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಸುದ್ದುಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಸುಮಾರು ಐದಾರು ಮಂದಿ ಶಂಕಿತರನ್ನು ಬಂಧಿಸಲಾಗಿತ್ತು. ಈ ವಿಚಾರ ತಿಳಿದ ಇತರೆ ನಾಲ್ವರು ಶಂಕಿತರು ತಲೆಮರೆಸಿಕೊಂಡಿದ್ದರು. ಈ ಪೈಕಿ ಫಜಿ ಕೂಡ ಒಬ್ಬ.
ಒಂದು ತಿಂಗಳ ಹಿಂದಷ್ಟೇ ಮತ್ತೆ ಬೆಂಗಳೂರಿಗೆ ಬಂದು ನಾನಾ ಪ್ರದೇಶಗಳಲ್ಲಿ ವಾಸವಾಗಿದ್ದುಕೊಂಡು ಗ್ಯಾರೆಜ್ ಕೆಲಸ ಮಾಡುವುದು, ಗೌಪ್ಯವಾಗಿ ಇವೆಂಟ್ ಮ್ಯಾನೆಜ್ಮೆಂಟ್ ಸಂಸ್ಥೆಯನ್ನು ತನ್ನ ಸಹಚರರ ಮೂಲಕ ನಡೆಸುತ್ತಿದ್ದ. ಈತ ಬೆಂಗಳೂರಿಗೆ ಬಂದಿರುವ ವಿಚಾರ ತಿಳಿದ ಬೆಂಗಳೂರು ಎನ್ಐಎ ಮತ್ತು ಐಎಸ್ಡಿ ಅಧಿಕಾರಿಗಳು ಹತ್ತು ದಿನಗಳಿಂದ ಈತನ ಚಲನವಲನಗಳ ಮೇಲೆ ನಿಗಾವಹಿಸಿದ್ದು, ಮಾರುವೇಷದಲ್ಲಿ ಮಾಹಿತಿ ಸಂಗ್ರಹಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಪಾಷಾ ಹೇಳಿಕೆ ಆಧರಿಸಿ ಕಾರ್ಯಾಚರಣೆ: ಈಗಾಗಲೇ ಬಂಧನಕ್ಕೊಳಗಾಗಿರುವ ಮೆಹಬೂಬ್ ಪಾಷಾನ ಹೇಳಿಕೆಯನ್ನಾಧರಿಸಿ ಆರೋಪಿಯನ್ನು ಹಿಂಬಾಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಮುಂಜಾನೆ ಎನ್ಐಎ ಮತ್ತು ಐಎಸ್ಡಿ ಅಧಿಕಾರಿಗಳು ಆರೋಪಿಯನ್ನು ಡಿ.ಜಿ.ಹಳ್ಳಿಯ ಟ್ಯಾನರಿ ರಸ್ತೆಯಲ್ಲಿ ಬಂಧಿಸಲು ಮಂದಾಗಿದ್ದರು. ಪೊಲೀಸರನ್ನು ಕಂಡು ದಂಗಾದ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿ ಟ್ಯಾನರಿಯೊಳಗೆ ನುಗ್ಗಿದ್ದಾನೆ.
ಪ್ರಾಣಿಗಳ ಚರ್ಮ ಸುಲಿಯುವ ಜಾಗವಾದರಿಂದ ಅಲ್ಲಲ್ಲಿ ಅವಿತುಕೊಂಡು ಸುಮಾರು ಒಂದೂವರೆ ಗಂಟೆಗಳ ಕಾಲ ಅಲೆದಾಡಿಸಿದ್ದಾನೆ. ಈ ಮಧ್ಯೆ ಅಲ್ಲಿನ ದುರ್ವಾಸನೆ ಮತ್ತು ಕತ್ತಲು ಅಧಿಕವಾದ್ದರಿಂದ ಪೊಲೀಸರು ಒಳ ಹೋಗಲು ಒದ್ದಾಡಿದ್ದಾರೆ. ಬಳಿಕ ಹೆಚ್ಚಿನ ಪೊಲೀಸ್ ಸಿಬ್ಬಂದಿ ಕರೆಸಿ ಕೊಂಡು ಇಡೀ ಟ್ಯಾನರಿಯನ್ನು ಸುತ್ತುವರಿಯ ಲಾಗಿತ್ತು. ನಂತರ ಒಂದಷ್ಟು ಅಧಿಕಾರಿಗಳು ಟ್ಯಾನರಿಯೊಳಗೆ ನುಗ್ಗಿದ್ದಾರೆ. ಈ ವೇಳೆ ಯಾವ ಕಾರಣಕ್ಕೆ ಬಂಧಿಸುತ್ತಿದ್ದಿರಾ ಎಂದು ಫಜಿ ಗಲಾಟೆ ಮಾಡಿದ್ದಾನೆ.
ಕೊನೆಗೆ ಟ್ಯಾನರಿಯಿಂದ ಹೊರಬಂದು ಓಡುವಾಗ ಒಂದು ಕಿ.ಮೀ ದೂರ ಬೆನ್ನಟ್ಟಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಜತೆಗೆ ಜೀಪ್ ಹತ್ತಿಸುವಾಗಲೂ ಸ್ಥಳೀಯರ ನೆರವು ಕೋರಿದ್ದಾನೆ. ಅನಂತರ ಪೊಲೀಸರು ಸಾರ್ವಜನಿಕರಿಗೆ ಮನವರಿಕೆ ಮಾಡಿ ಬಂಧಿಸಿ ಕರೆದೊಯ್ಯುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರ ಎನ್ಐಎ ಅಧಿಕಾರಿಗಳು ಈತನ ಮನೆ ಮತ್ತು ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಿ ಪರಿಶೀಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ