Arrest : ಮುಖ್ಯಪೇದೆಗೆ ಚಾಕು ಇರಿದ ಕಳ್ಳನ ಬಂಧನ
Team Udayavani, Oct 19, 2023, 2:46 PM IST
ಬೆಂಗಳೂರು: ಹಲವು ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಬಂಧಿಸಲು ತೆರಳಿದ್ದ ಸದಾಶಿವನಗರ ಠಾಣೆ ಹೆಡ್ಕಾನ್ಸ್ಟೆàಬಲ್ಗೆ ಕಳ್ಳನೊಬ್ಬ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ಈ ಸಂಬಂಧ ಹಸನ್ಖಾನ್ ಎಂಬಾತನನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕೆಲ ದಿನಗಳ ಹಿಂದೆ ತನ್ನನ್ನು ಬಂಧಿಸಲು ಬಂದಿದ್ದ ಸದಾಶಿವನಗರ ಠಾಣೆಯ ಹೆಡ್ಕಾನ್ಸ್ಟೆàಬಲ್ ಸೈಯದ್ ಸಮೀವುಲ್ಲಾ ಎಂಬವರಿಗೆ ಚಾಕುವಿನಿಂದ ಇರಿದಿದ್ದ. ಆರೋಪಿ ಹಸನ್ಖಾನ್ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ. ಹೀಗಾಗಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಕೆಲ ದಿನಗಳ ಹಿಂದೆ ಶಿವಾಜಿನರದ ಎಚ್ಕೆಪಿ ದರ್ಗಾ ಸರ್ಕಲ್ನ ಸರಕು ಸಾಗಣೆ ಆಟೋ ನಿಲ್ದಾಣದ ಬಳಿ ನಿಂತಿದ್ದ ಹಸನ್ಖಾನ್ನನ್ನು ಸೈಯದ್ ಸಮೀವುಲ್ಲಾ ಬಂಧಿಸಲು ಮುಂದಾಗಿದ್ದಾರೆ. ಆಗ ಆರೋಪಿ ಅವರ ಮೇಲೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
Housefull 5: ಕಾಮಿಡಿ ಜರ್ನಿಯ ʼಹೌಸ್ ಫುಲ್ʼ ಕುಟುಂಬಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ
T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ