ಬಾಡಿಗೆ ಮನೆ ಕೇಳುವ ನೆಪದಲ್ಲಿ ಮಾಲೀಕರ ಕೈ-ಕಾಲು ಕಟ್ಟಿ ಚಿನ್ನಾಭರಣ ಲೂಟಿ: ಮೂವರ ಬಂಧನ
Team Udayavani, May 23, 2022, 2:44 PM IST
ಬೆಂಗಳೂರು: ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಮನೆಗೆ ಹೋಗಿ ಮಾಲೀಕರ ಕೈ-ಕಾಲು ಕಟ್ಟಿ, ಬಾಯಿಗೆ ಗಮ್ಟೇಪ್ ಸುತ್ತಿ ಚಿನ್ನಾಭರಣ ಸುಲಿಗೆ ಮಾಡಿದ್ದ ಮೂವರು ನಂದಿನಿ ಲೇಔಟ್ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪಟ್ಟೇಗಾರ್ ಪಾಳ್ಯದ ಜಿಯಾವುಲ್ಲಾ (36), ನಂದನ್ (27) ಮತ್ತು ಶರತ್ (27) ಬಂಧಿತರು. ಆರೋಪಿಗಳಿಂದ 1.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಎರಡು ದ್ವಿಚಕ್ರ ವಾಹನಗಳು ಹಾಗೂ ಇತರೆ ವಸ್ತಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ನಂದಿನಿ ಲೇಔಟ್ನ 2ನೇ ಕ್ರಾಸ್ನ 2ನೇ ಬ್ಲಾಕ್ ಮನೆಗೆ ಮೂವರು ಆರೋಪಿಗಳು ಬಾಡಿಗೆಗೆ ಕೇಳುವ ನೆಪದಲ್ಲಿ ಮೇ 9ರಂದು ಬೆಳಗ್ಗೆ ಬಂದಿದ್ದಾರೆ. ನಂತರ 2ನೇ ಮಹಡಿಯಲ್ಲಿರುವ ಬಾಡಿಗೆ ಮನೆ ನೋಡಲು ಹೋಗಿದ್ದಾರೆ. ಈ ವೇಳೆ ಮನೆ ಇಷ್ಟೊಂದು ಗಲೀಜಾಗಿದೆ ಎಂದಿದ್ದಾರೆ. ಆಗ ಮನೆಯ ಮಹಿಳಾ ಮಾಲೀಕರು ಒಳಗಡೆ ಹೋಗುತ್ತಿದ್ದಂತೆ ಹಿಂದಿನಿಂದ ಹೋದ ಆರೋಪಿಗಳು, ಮಹಿಳೆಯ ಕೈ-ಕಾಲು ಕಟ್ಟಿ ಹಾಕಿ, ಬಾಯಿಗೆ ಗಮ್ ಟೇಪ್ ಸುತ್ತಿದ್ದಾರೆ. ಮೈಮೇಲಿದ್ದ 48 ಗ್ರಾಂ ತೂಕದ ಚಿನ್ನದ ಸರ, ಮುತ್ತಿನ ಓಲೆ ಎತ್ತಿಕೊಂಡು ಪರಾರಿಯಾಗಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ಪೈಕಿ ಜಿಯಾವುಲ್ಲಾ ವಿರುದ್ಧ ವಿಜಯನಗರ, ಮಲ್ಲೇಶ್ವರಂ, ನಂದಿನಿಲೇಔಟ್, ಕಾಮಾಕ್ಷಿಪಾಳ್ಯ ಸೇರಿ ವಿವಿಧ ಠಾಣೆಗಳಲ್ಲಿ ಸುಲಿಗೆ, ದ್ವಿಚಕ್ರ ವಾಹನ ಕಳವು, ಗಾಂಜಾ ಮಾರಾಟ ಪ್ರಕರಣಗಳು ದಾಖಲಾಗಿದೆ. ಎರಡನೇ ಅರೋಪಿ ನಂದನ್ ವಿರುದ್ಧ ವಿಜಯನಗರ ಠಾಣೆ ಸೇರಿ ವಿವಿಧೆಡೆ ಸುಲಿಗೆ, ದರೋಡೆ ಪ್ರಕರಣಗಳು ದಾಖಲಾಗಿದೆ.
ಮೂರನೇ ಆರೋಪಿ ಶರತ್ 2016ರಲ್ಲಿ ಎರಡು ಸುಲಿಗೆ ಪ್ರಕರಣಗಳಲ್ಲಿ ಜೈಲು ಸೇರಿದ್ದ. ಮೂವರು ಜೈಲಿ ನಲ್ಲಿ ಪರಿಚಯವಾಗಿದ್ದು, ಬಿಡುಗಡೆ ಬಳಿಕ ಮತ್ತೆ ಅದೇ ಕೃತ್ಯ ಮುಂದುವರಿಸಿದ್ದಾರೆ ಎಂದು ಪೊಲೀಸರು ಹೇಳಿದರು. ನಂದಿನಿಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
MUST WATCH
ಹೊಸ ಸೇರ್ಪಡೆ
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ