Bangalore: ಡ್ಯಾನ್ಸ್ ವೇಳೆ ಕಾಲು ತಾಗಿದ್ದಕ್ಕೆ ಹತ್ಯೆಗೈದಿದ್ದ ಮೂವರ ಬಂಧನ
Team Udayavani, Mar 12, 2024, 10:12 AM IST
ಬೆಂಗಳೂರು: ಶಿವರಾತ್ರಿಯಂದು ದೇವಾಲಯವೊಂದರ ಮುಂದೆ ಹಾಡಿಗೆ ಹೆಜ್ಜೆ ಹಾಕುತ್ತಿದ್ದಾಗ ಮೈ ತಗುಲಿದ್ದಕ್ಕೆ ಯುವಕನನ್ನು ಕೊಲೆ ಮಾಡಿದ ಹಂತಕರನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬ್ಯಾಟರಾಯನಪುರದ ನಿವಾಸಿ ಚೇತನ್, ರಂಗಾ, ಪವನ್ ಬಂಧಿತರು. ಶ್ರೀನಗರ ನಿವಾಸಿ ಯೋಗೇಶ್ (23) ಕೊಲೆಯಾದವ.
ಯೋಗೇಶ್ ಹಾಗೂ ಆರೋಪಿಗಳು ಪರಿಚಿತರಾಗಿ ಇರಲಿಲ್ಲ. ಇಬ್ಬರಿಗೂ ಹಳೆ ದ್ವೇಷವೂ ಇರಲಿಲ್ಲ. ನೃತ್ಯ ಮಾಡುವ ವೇಳೆ ಕಾಲು ತಾಗಿದ್ದಕ್ಕೆ ಆಕ್ರೋಶಗೊಂಡು ಆರೋಪಿಗಳು ಹತ್ಯೆ ಮಾಡಿರುವುದು ತನಿಖೆಯಲ್ಲಿ ಕಂಡು ಬಂದಿದೆ. ಯೋಗೇಶ್ ಹನುಮಂತನಗರದ ಬೈಕ್ ಸರ್ವಿಸ್ ಸೆಂಟರ್ವೊಂದರಲ್ಲಿ ಕೆಲಸ ಮಾಡುತಿದ್ದ. ಹಬ್ಬದ ಹಿನ್ನೆಲೆಯಲ್ಲಿ ಗಿರಿನಗರದ ದೇವಸ್ಥಾನಕ್ಕೆ ತೆರಳಿ ಮನರಂಜನೆಯ ಕಾರ್ಯಕ್ರಮದಲ್ಲಿ ಯುವಕರ ಜೊತೆ ಹಾಡಿಗೆ ಹೆಜ್ಜೆ ಹಾಕಿದ್ದ. ಈ ನಡುವೆ ಅಲ್ಲೇ ಬಂದಿದ್ದ ಮತ್ತೂಂದು ಗುಂಪಿನ ಯುವಕರಿಗೆ ಯೋಗೀಶ್ ಕಾಲು ತಾಗಿತ್ತು. ಈ ವಿಚಾರಕ್ಕೆ ಆರೋಪಿಗಳು ಹಾಗೂ ಯೋಗೇಶ್ ನಡುವೆ ಜಗಳ ಶುರುವಾಗಿತ್ತು. ಆ ವೇಳೆ ಸ್ಥಳದಲ್ಲಿ ನೆರೆದಿದ್ದವರು ಇವರನ್ನು ಸಮಾಧಾನಪಡಿಸಿ ಕಳುಹಿಸಿದ್ದರು. ಯೋಗೇಶ್ ಸಂಭ್ರಮ ಮುಗಿಸಿ ತಡರಾತ್ರಿ 2 ಗಂಟೆಗೆ ಬೈಕ್ನಲ್ಲಿ ಮನೆ ಕಡೆಗೆ ಹೊರಟಿದ್ದ. ಆತನನ್ನು ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಆತನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್