ಸಚಿವ ಲಾಡ್ ವಿರುದ್ಧ ಬಂಧನ ವಾರೆಂಟ್
Team Udayavani, May 19, 2017, 11:29 AM IST
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಸಂತೋಷ್ ಲಾಡ್ ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಸಚಿವ ಸಂತೋಷ್ ಲಾಡ್ ವಿರುದ್ಧ 2015ರಲ್ಲಿ ಚೆಕ್ ಬೌನ್ಸ್ ವಂಚನೆ ಸಂಬಂಧ ನೀಡಿದ್ದ ಖಾಸಗಿ ದೂರಿನ ಅನ್ವಯ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರೂ ಲಾಡ್ ಅಥವಾ ಅವರ ಪರ ವಕೀಲರು ಗುರುವಾರ ಹಾಜರಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಲಾಡ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿ ಈ ತಿಂಗಳ 22 ರಂದು ಆರೋಪಿಯನ್ನ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶಿಸಿ ವಿಚಾರಣೆ ಮುಂದೂಡಿದೆ. ನಿರ್ಮಾಪಕ ರಾಕ್ಲೈನ್ ವೆಂಕಟೇಶ್ರಿಂದ 2014ರಲ್ಲಿ 6 ಕೋಟಿ ರೂ. ಡಿಡಿ ಪಡೆದುಕೊಂಡಿದ್ದ ಸಚಿವ ಸಂತೋಷ್ ಲಾಡ್, ಇದಕ್ಕೆ ಪ್ರತಿಯಾಗಿ ಹಲವು ಚೆಕ್ಗಳನ್ನು ನೀಡಿದ್ದರು.
ಆದರೆ ರಾಕ್ಲೈನ್ ವೆಂಕಟೇಶ್, ಲಾಡ್ ನೀಡಿದ್ದ ಚೆಕ್ಗಳನ್ನು ನಿಗದಿತ ಅವಧಿಯಲ್ಲಿ ಬ್ಯಾಂಕ್ ಖಾತೆಗೆ ಹಾಕಿಕೊಂಡರೂ ಎಲ್ಲಾ ಚೆಕ್ಗಳು ಬೌನ್ಸ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಸಂತೋಷ್ ಲಾಡ್ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ