Arrested: ಪೋಷಕರ ನಿಂದಿಸಿದ್ದಕ್ಕೆ ನೆರೆಮನೆಯವರಿಗೆ ಜೀವ ಬೆದರಿಕೆ ಹಾಕಿದ್ದವ ಬಂಧನ
Team Udayavani, Jan 16, 2024, 12:20 PM IST
ಬೆಂಗಳೂರು: ಪೋಷಕರನ್ನು ನಿಂದಿಸಿದ ಕಾರಣಕ್ಕೆ ಮಾರಕಾಸ್ತ್ರಗಳಿಂದ ನೆರೆ ಮನೆಯವರಿಗೆ ಬೆದರಿಕೆ ಹಾಕಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ವರ್ತೂರು ಪಣತ್ತೂರು ದಿಣ್ಣೆ ನಿವಾಸಿ ಮುತ್ತು ಮುರಳಿ ಅಲಿಯಾಸ್ ಮುರಳಿ(27) ಬಂಧಿತ. ಆರೋಪಿ ವಾಟರ್ ಟ್ಯಾಂಕರ್ ಚಾಲಕನಾಗಿದ್ದಾನೆ. ಭಾನುವಾರ ಸಂಜೆ 6 ಗಂಟೆಗೆ ಆರೋಪಿ ತಂದೆ ಸಂಪಂಗಿ ಮತ್ತು ನೆರೆ ಮನೆಯ ರಾಜಪ್ಪ ಎಂಬವರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಈ ವೇಳೆ ಎರಡೂ ಕುಟುಂಬದವರ ನಡುವೆ ವಾಗ್ವಾದ ನಡೆದಿದೆ. ಈ ವಿಚಾರವಾಗಿ ಆರೋಪಿ ಮಾರಕಾಸ್ತ್ರ ಹಿಡಿದು ನೆರೆ ಮನೆಯ ರಾಜಪ್ಪ ಕುಟುಂಬದ ಜತೆಗೆ ಗಲಾಟೆ ಮಾಡಿ ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದ. ಈ ಸಂಬಂಧ ರಾಜಪ್ಪ ನೀಡಿದ ದೂರಿನ ಮೇರೆಗೆ ವರ್ತೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ