ಜೈಲಿಂದ ಬಂದು ಕನ್ನ ಹಾಕುತ್ತಿದ್ದ ಮೂವರ ಸೆರೆ

ಕದ್ದ ಚಿನ್ನ ತಾಯಿ ಮೂಲಕ ಮಾರಾಟ

Team Udayavani, Mar 9, 2022, 11:37 AM IST

ಜೈಲಿಂದ ಬಂದು ಕನ್ನ ಹಾಕುತ್ತಿದ್ದ ಮೂವರ ಸೆರೆ

ಬೆಂಗಳೂರು: ಜೈಲಿನಲ್ಲಿ ಪರಿಚಯಿಸಿಕೊಂಡು ಸಮೀಪದ ನಿರ್ಮಾಣದ ಹಂತದ ಕಟ್ಟಡಗಳಲ್ಲಿವಾಸವಾಗಿ ಮನೆಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ನಂದಿನಿಲೇಔಟ್‌ ಪೊಲೀಸರು ಬಂಧಿಸಿದ್ದಾರೆ.

ರಾಜಾನುಕುಂಟೆಯ ಸತೀಶ್‌ ಕುಮಾರ್‌(34), ಯಶವಂತಪುರದ ಶ್ರೀನಿವಾಸ (38), ಬಸವೇಶ್ವರನಗರದ ತೇಜಸ್‌ (23) ಬಂಧಿತರು. ಆರೋಪಿಗಳಿಂದ 55.18 ಲಕ್ಷ ರೂ. ಮೌಲ್ಯದ1.12 ಕೆ.ಜಿ. ಚಿನ್ನಾಭರಣ, 1.96 ಕೆ.ಜಿ. ಬೆಳ್ಳಿವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನದಿಂದ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿದಾಖಲಾಗಿದ್ದ 14 ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು. ಇತ್ತೀಚೆಗೆ ಆರೋಪಿಗಳು, ನಂದಿನಿ ಲೇಔಟ್‌ನ ಜೈಮಾರುತಿ ನಗರದಲ್ಲಿ ಗ್ಯಾರೆಜ್‌ ನಡೆಸುತ್ತಿರುವವ್ಯಕ್ತಿಯೊಬ್ಬರು ಕುಟುಂಬ ಸಮೇತ ಫೆ.15ರಂದುಸಂಬಂಧಿಕರ ಪುತ್ರನ ಮದುವೆಗೆ ಹೋಗಿದ್ದರು.

ಮಧ್ಯಾಹ್ನದ ವೇಳೆಗೆ ವಾಪಸ್‌ ಬಂದಾಗ ಕಳ್ಳತನಬೆಳಕಿಗೆ ಬಂದಿತ್ತು. ಈ ಸಂಬಂಧ ನಂದಿನಿ ಲೇಔಟ್‌ ಠಾಣೆಗೆ ದೂರು ನೀಡಿದ್ದರು. ಆರಂಭದಲ್ಲಿ ಮನೆಮಾಲಿಕರ ಸಂಬಂಧಿಕರೇ ಕಳ್ಳತನ ಎಸಗಿದ್ದಾರೆ ಎಂದು ಭಾವಿಸಲಾಗಿತ್ತು. ನಂತರ ತನಿಖೆಯಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ಪತ್ತೆಯಾಗಿತ್ತು. ಆರೋಪಿಗಳ ಪೈಕಿ ಸತೀಶ್‌ ಗಾರೆ ಕೆಲಸ ಮಾಡುತ್ತಿದ್ದ. ಶ್ರೀನಿವಾಸ್‌ ಬಾರ್‌ ಬೆಂಡಿಂಗ್‌ ಕೆಲಸಮಾಡುತ್ತಿದ್ದ. ತೇಜಸ್‌ ಕ್ಯಾಬ್‌ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮೋಜಿನ ಜೀವನಕ್ಕಾಗಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.

ಜೈಲಿನಲ್ಲಿ ಪರಿಚಯ: ಸತೀಶ್‌ ಈ ಹಿಂದೆ ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿದರೋಡೆ ಹಾಗೂ ಹಗಲು-ರಾತ್ರಿ ಕನ್ನಹಾಕಿ ಕಳವುಪ್ರಕರಣದಲ್ಲಿ ಜೈಲು ಸೇರಿದ್ದ. ಶ್ರೀನಿವಾಸ್‌ ಕೂಡಕಳವು ಪ್ರಕರಣದಲ್ಲಿ ಜೈಲು ಸೇರಿದ್ದ. ತೇಜಸ್‌ನನ್ನೂಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಹೀಗಾಗಿ ಮೂವರು ಜೈಲಿನಲ್ಲಿಯೇ ಪರಿಚಯಸ್ಥರಾಗಿದ್ದರು. 2021ರಲ್ಲಿ ಜಾಮೀನು ಪಡೆದು ಹೊರಬಂದು ಮನೆ ಕಳವು, ದರೋಡೆಗೆ ಸಂಚುರೂಪಿಸಿದ್ದರು. ತೇಜಸ್‌ ಬಸವೇಶ್ವರನಗರದ ಕಮಲಾನಗರದಲ್ಲಿ ತಾಯಿ ಜತೆ ವಾಸವಾಗಿದ್ದ.

ಆಗ ಸತೀಶ್‌ ಮತ್ತು ಶ್ರೀನಿವಾಸ್‌ನನ್ನು ಸ್ನೇಹಿತರೆಂದು ಪರಿಚಯಿಸಿದ್ದ. ಅಲ್ಲದೇ, ಅದೇಮನೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದ.ಮೂವರು ಒಂದೇ ಮನೆಯಲ್ಲಿ ಕುಳಿತುಮನೆಗಳ್ಳತನಕ್ಕೆ ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದರು.

ನಿರ್ಮಾಣ ಹಂತದ ಕಟ್ಟಡಗಳಲ್ಲಿ ಬಚ್ಚಿಟ್ಟು ಕೊಂಡು ಕಳವು: ಬೀಗ ಹಾಕಿರುವ ಮನೆಗಳನ್ನು ಗುರುತಿಸುತ್ತಿದ್ದ ಆರೋಪಿಗಳು ಕಳ್ಳತನಕ್ಕೂ ಐದಾರು ಗಂಟೆ ಮೊದಲು ಬೀಗ ಹಾಕಿರುವಮನೆಯ ಅಕ್ಕ- ಪಕ್ಕದಲ್ಲಿರುವ ನಿರ್ಮಾಣ ಹಂತದ ಖಾಲಿ ಕಟ್ಟಡಗಳಲ್ಲಿ ಅವಿತುಕೊಳ್ಳುತ್ತಿದ್ದರು. ಆ ಭಾಗದ ಜನರ ಚಲನವಲನ ಗಳನ್ನುಗಮನಿಸುತ್ತಿದ್ದ ಮೂವರು,ಮಧ್ಯರಾತ್ರಿ ನಕಲಿ ಕೀ ಬಳಸಿ ಅಥವಾ ರಾಡ್‌ನಿಂದಬಾಗಿಲು ಮುರಿದು ಕಳವುಮಾಡಿದ್ದರು ಎಂದು ಪೊಲೀಸರು ಹೇಳಿದರು.

ಇನ್ನು ಕದ್ದಚಿನ್ನಾಭರಣವನ್ನು ತೇಜಸ್‌ ತನ್ನ ತಾಯಿ ಬಳಿ ಸ್ನೇಹಿತ ಸತೀಶ್‌ ಹಾಗೂ ಶ್ರೀನಿವಾಸ್‌ಕಷ್ಟದಲ್ಲಿದ್ದಾರೆ. ಹೀಗಾಗಿ, ಚಿನ್ನಾಭರಣವನ್ನು ಗಿರವಿಯಲ್ಲಿ ಇಟ್ಟು ಹಣಕೊಡಿಸು ಕೊಡು ಎಂದು ಹೇಳುತ್ತಿದ್ದ. ಅದನ್ನುನಂಬುತ್ತಿದ್ದ ಆತನ ತಾಯಿ ತನ್ನ ಹೆಸರಿನಲ್ಲಿ ನಾನಾ ಗಿರವಿ ಅಂಗಡಿಗಳಲ್ಲಿ ಚಿನ್ನಾಭರಣ ಗಿರವಿ ಇಟ್ಟು ಹಣ ಕೊಡಿಸುತ್ತಿದ್ದರು. ಇದೀಗ ಗಿರವಿ ಇಟ್ಟಿದ್ದ ಬಹುತೇಕ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ನಂದಿನಿಲೇಔಟ್‌ ಠಾಣೆ ಇನ್‌ಸ್ಪೆಕ್ಟರ್‌ ವೆಂಕಟೇಗೌಡ ಅವರ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

 

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.