ಬಿಸು ಸಡಗರದಲ್ಲಿ ಕಲೆ, ಸಂಸ್ಕೃತಿ ಅನಾವರಣ


Team Udayavani, Apr 15, 2019, 3:00 AM IST

bisu-sdada

ಬೆಂಗಳೂರು: ದಕ್ಷಿಣ ಕನ್ನಡದ ಕಲೆ, ಸಂಸ್ಕೃತಿ ಪ್ರತಿಬಿಂಬಿಸುವ ವೇಷ-ಭೂಷಣ, ಭೂತಾರಾಧನೆ, ನಾಗಾರಾಧನೆಗಳ ಮಹತ್ವ ತಿಳಿಸುವ ಪ್ರದರ್ಶನಗಳು, ಬಿಸು ಪರ್ಬ ಇತಿಹಾಸದ ಜತೆಗೆ, ಸರ್ಜಿಕಲ್‌ ಸ್ಟ್ರೈಕ್‌, ಗಡಿಯಲ್ಲಿ ಸೈನಿಕರ ಹೋರಾಟ, ಕುಟುಂಬದವರ ಮನಸ್ಥಿತಿ ತಿಳಿಸುವ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಭಾನುವಾರ ಅನಾವರಣಗೊಂಡವು.

ಬಂಟರ ಸಂಘ ಬೆಂಗಳೂರು ವತಿಯಿಂದ ಅತ್ತಿಗುಪ್ಪೆಯ ಬಂಟರ ಸಂಘದಲ್ಲಿ ಹಮ್ಮಿಕೊಂಡಿದ್ದ “ಬಿಸು ಸಡಗರ’ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಬಂದ ಬಂಟ ಸಮುದಾಯದ ಯುವಕರ ಕಲಾ ತಂಡಗಳು ವಿವಿಧ ಕಲಾ ಪ್ರದರ್ಶನಗಳನ್ನು ನೀಡಿದವು.

ಬೆಳಗ್ಗೆ 10 ಗಂಟೆಗೆ ಶಶಿರೇಖಾ ಆನಂದ ಶೆಟ್ಟಿ ಹಾಗೂ ಆನಂದ್‌ ಎಂ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದರೊಂದಿಗೆ ಅಂತಾರಾಷ್ಟ್ರೀಯ ಖ್ಯಾತಿಯ ಉದಯ್‌ ಜಾದೂಗಾರ್‌ ಅವರ “ಜಾದೂ ಕಾರ್ಯಕ್ರಮ’, ಗಿರೀಶ ಜೈಪ್ರಕಾಶ್‌ ಆರಾಧ್ಯ ಅವರ “ನಗೆ ಕಡಲು’ ಕಾರ್ಯಕ್ರಮಗಳು ನೆರೆದಿದ್ದವರನ್ನು ರಂಜಿಸಿದವು. ಸಂಜೆ ವೇದಿಕೆ ಕಾರ್ಯಕ್ರಮದ ನಂತರ ಅಂತಾರಾಷ್ಟ್ರೀಯ ಖ್ಯಾತಿಯ ಜ್ಞಾನ ಹೈತಾಳ್‌ ನೇತೃತ್ವದ ಹೆಜ್ಜೆನಾದ ತಂಡವು “ಸಾಂಸ್ಕೃತಿಕ ವಿಸ್ಮಯ’ ಕಾರ್ಯಕ್ರಮ ನೀಡಿದರು.

ಕಾರ್ಯಕ್ರಮದಲ್ಲಿ ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾ ಸಿಇಒ ಹಾಗೂ ಮ್ಯಾನೇಜಿಂಗ್‌ ಡೈರೆಕ್ಟರ್‌ ರಾಜ್‌ಕಿರಣ್‌ ರೈ ಅವರಿಗೆ ಸಂಘದಿಂದ ದಿವಂಗತ ಮುಲ್ಕಿ ಸುಂದರ ರಾಂ ಶೆಟ್ಟಿ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬಳಿಕ ಮಾತನಾಡಿದ ರಾಜ್‌ಕಿರಣ್‌ ರೈ ಅವರು, ಬಂಟ ಸಮುದಾಯದವರು ಎಲ್ಲ ಕ್ಷೇತ್ರಗಳಿಗೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಐಎಎಸ್‌ ಮಾಡಿ ಸರ್ಕಾರದ ಪ್ರಮುಖ ಹುದ್ದೆಗಳಲ್ಲಿರುವವರ ಸಂಖ್ಯೆ ತುಂಬಾ ಕಡಿಮೆಯಿದೆ. ಹೀಗಾಗಿ ಹೆಚ್ಚಿನ ಯುವಕರು ಐಎಎಸ್‌ ಮಾಡಲು ಸಂಘ ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ಎಫ್ಕೆಸಿಸಿಐ ಅಧ್ಯಕ್ಷ ಸುಧಾಕರ ಎಸ್‌.ಶೆಟ್ಟಿ ಮಾತನಾಡಿ, ಬಂಟರು ಇಲ್ಲದಿರುವ ಜಾಗ ಹಾಗೂ ಕ್ಷೇತ್ರ ಈ ಪ್ರಪಂಚದಲ್ಲಿ ಯಾವುದು ಇಲ್ಲ. ನಮಗೆ ಯಾವುದೇ ರಾಜಕೀಯ ಅಥವಾ ಜನಪ್ರತಿನಿಧಿಗಳ ಬೆಂಬಲವಿಲ್ಲ. ಬದಲಿಗೆ ನಮ್ಮ ಸ್ವ-ಸಾಮರ್ಥ್ಯದ ಮೇಲೇ ಎಲ್ಲವನ್ನೂ ಸಾಧಿಸುತ್ತೇವೆ. ಹೀಗಾಗಿ ನಮ್ಮ ಕಲೆ, ಸಂಸ್ಕೃತಿ ಹಾಗೂ ಭಾಷೆಗಳನ್ನು ಎಂದಿಗೂ ಬಿಡಬಾರದು ಎಂದು ಯುವಕರಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಂ.ಎಸ್‌.ರಾಮಯ್ಯ ನಾರಾಯಣ ಹೃದಯಾಲಯದ ವೈದ್ಯರಾದ ಡಾ.ರವಿಶಂಕರ್‌ ಶೆಟ್ಟಿ ಕೆ. ಅವರನ್ನು ಸನ್ಮಾನಿಸಲಾಯಿತು. ಜತೆಗೆ ಬಂಟ ಕೋ-ಅಪರೇಟಿವ್‌ ಸೊಸೈಟಿಯ ಲೋಗೋ ಬಿಡುಗಡೆಗೊಳಿಸಲಾಯಿತು. ಇದೇ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದವರಿಗೆ ಬಹುಮಾನ ನೀಡಲಾಯಿತು. ಸಂಘದ ಅಧ್ಯಕ್ಷ ಆರ್‌.ಉಪೇಂದ್ರ ಶೆಟ್ಟಿ, ಗೌರವ ಕಾರ್ಯದರ್ಶಿ ಮಧುಕರ ಎಂ. ಶೆಟ್ಟಿ ಸೇರಿದಂತೆ ಪ್ರಮುಖರು ಹಾಜರಿದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.