ಮರಗಣತಿಗೆ ಇನ್ನೆಷ್ಟು ವರ್ಷಗಳು ಬೇಕು?


Team Udayavani, Apr 19, 2021, 1:27 PM IST

article about trees

ನಗರದಲ್ಲಿ ಮರಗಣತಿ ನಡೆಸುವಂತೆ ಪಾಲಿಕೆಗೆ ಹೈಕೋರ್ಟ್‌ ಸೂಚನೆ ನೀಡಿ ಮೂರು ವರ್ಷಗಳೇ ಕಳೆದಿವೆ. ಆದರೆ, ಈ ನಿಟ್ಟಿನಲ್ಲಿ ನಿರೀಕ್ಷಿತ ಪ್ರಗತಿ ಆಗಿಲ್ಲ. ಮರಗಳ ಗಣತಿ ವಿಚಾರದಲ್ಲಿ ಅಷ್ಟೇ ಅಲ್ಲ, ಮರಗಳ ಸಂರಕ್ಷಣೆ ಮತ್ತು ಸಸಿಗಳನ್ನು ನೆಡುವ ವಿಚಾರದಲ್ಲೂ ಪಾಲಿಕೆ ಎಡವುತ್ತಲ್ಲೇ ಇದೆ ಎನ್ನುವುದು ತಜ್ಞರ ವಾದ.

ಒಬ್ಬ ವ್ಯಕ್ತಿ ಜೀವಿಸುವುದಕ್ಕೆ ಕನಿಷ್ಠ ಎಂಟು ಮರಗಳು ಅವಶ್ಯ. ಆದರೆ, ನಗರದಲ್ಲಿ ಎಂಟು ವ್ಯಕ್ತಿಗೆ ಒಂದು ಮರದ ಇದೆ. ಈ ಅಂಕಿ- ಅಂಶ ಗಂಭೀರ ಪರಿಸ್ಥಿತಿ ಪರಿಚಯಿಸುತ್ತದೆ ಎನ್ನುತ್ತಾರೆ ಪರಿಸರ ತಜ್ಞ ಡಾ. ಕ್ಷಿತಿಜ್‌ ಅರಸ್‌.

ನಗರದಲ್ಲಿ ತಾಪಮಾನ ಹೆಚ್ಚಾಗುತ್ತಿರುವುದಕ್ಕೆ ಮರಗಳ ಸಂಖ್ಯೆ ಗಣ ನೀಯ ಪ್ರಮಾಣದಲ್ಲಿ ಇಳಿಕೆ ಆಗುತ್ತಿರುವುದು ಸಹ ಒಂದು ಕಾರಣ. ಮರಗಳ ಕೆಳಗೆ ಗರಿಷ್ಠ ತಾಪಮಾನ ಕನಿಷ್ಠ ಮೂರು ಡಿಗ್ರಿ ಸೆಲ್ಸಿಯಸ್‌ ಕಡಿಮೆ ಇರುತ್ತದೆ ಎನ್ನುವುದು ಅಧ್ಯಯನಗಳಿಂದ ಸಾಬೀತಾಗಿದೆ. ನಮ್ಮಲ್ಲಿ ಎಷ್ಟು ಮರಗಳಿವೆ, ಯಾವ ಪ್ರಭೇದದ ಮರ ಮತ್ತು ಯಾವ ಮಾದರಿಯ ಮರ ನಗರದ ವಾತಾವರಣಕ್ಕೆ ಪೂರಕ ಎನ್ನುವ ಬಗ್ಗೆ ಮರಗಳ ಗಣತಿ ಮತ್ತು ಸರ್ವೆ ನಡೆಯದೆ ಇದ್ದರೆ, ಮುಂದಿನ ಯೋಜನೆ ರೂಪಿಸುವುದು ಹೇಗೆ ಎಂದು ಪ್ರಶ್ನೆ ಮಾಡಿದರು.

ಮರಗಳ ಗಣತಿ ವಿಚಾರದಲ್ಲಿ ಪಾಲಿಕೆ ಕ್ರಮ: ಪಾಲಿಕೆ ವ್ಯಾಪ್ತಿಯಲ್ಲಿರುವ ಮರಗಳ ಬಗ್ಗೆ ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಐಡಬ್ಲ್ಯುಎಸ್‌ಟಿ)ಯ ನೇತೃತ್ವದಲ್ಲಿ ಮಾಡಲು ಪಾಲಿಕೆ ಮುಂದಾಗಿತ್ತು. ಆದರೆ, ತಾಂತ್ರಿಕ ಕಾರಣ ಮತ್ತು ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮರಗಣತಿ ಸಾಧ್ಯವಿಲ್ಲ ಎಂದು ಸಂಸ್ಥೆ ಹೇಳಿದೆ ಎನ್ನಲಾಗಿದೆ.

“ನಗರದಲ್ಲಿ ಮರಗಣತಿ ಮಾಡಿಕೊಡುವಂತೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮರಗಣತಿ ಕಾರ್ಯಕ್ಕೆ 2 ಕೋಟಿ ರೂ. ಮೀಸಲಿಡಲಾಗಿದೆ’ ಎಂದು ಬಿಬಿಎಂಪಿ ಅರಣ್ಯ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ರಂಗನಾಥಸ್ವಾಮಿ ತಿಳಿಸಿದ್ದಾರೆ.

ನೀವೂ ಮರಗಣತಿಯಲ್ಲಿ ಭಾಗವಹಿಸಿ: ಮರಗಳ ಸರ್ವೇಗೆ ಟ್ರೀ ಆ್ಯಪ್‌ ಪರಿಚಯಿಸಲಾಗಿದ್ದು, ಇದರಲ್ಲಿ ಸಾರ್ವಜನಿಕರು ಸಹ ಭಾಗವಹಿಸಬಹು ದು. ಈ ಆ್ಯಪ್‌ನ ಮೂಲಕ ನಿರ್ದಿಷ್ಟ ಮರದ ಪೋಟೋ ಕ್ಲಿಕ್ಕಿಸಿ, ಅಪ್‌ ಲೋಡ್‌ ಮಾಡಬಹುದು. ಆ್ಯಪ್‌ನಲ್ಲಿರುವ ಆಯ್ಕೆಯ ಮೂಲಕವೇ ಜಿಯೋ ಮ್ಯಾಪಿಂಗ್‌ ಆಗಲಿದೆ. ಇದನ್ನು ಪರಿಶೀಲನೆ ಮಾಡಿ ಅನುಮತಿ ನೀಡಲಿದ್ದೇವೆ ಎಂದು ಕರ್ನಾಟಕ ಅರಣ್ಯ ಇಲಾಖೆಯ ಬೆಂಗಳೂರು ನಗರ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್‌ ತಿಳಿಸಿ ದರು.

ಎರಡು ವಿಭಾಗವಾಗಿ ಮರಗಣತಿ: ಮರಗಳ ಗಣತಿಗೆ ಎರಡು ವಿಭಾಗಗಳನ್ನಾಗಿ ವಿಂಗಡಿಸಿಕೊಳ್ಳಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಉದ್ಯಾನಗಳು ಮತ್ತು ರಸ್ತೆಗಳಲ್ಲಿರುವ ಮರಗಣತಿ ಬಿಬಿಎಂಪಿ ಅರಣ್ಯ ವಿಭಾಗ ಹಾಗೂ ಸರ್ಕಾರಿ, ಖಾಸಗಿ ಪ್ರದೇಶ ಸೇರಿದಂತೆ ಒಟ್ಟಾರೆ ವ್ಯಾಪ್ತಿಯಲ್ಲಿರುವ ಮರಗಣತಿ ಜವಾಬ್ದಾರಿಯನ್ನು ಕರ್ನಾಟಕ ಅರಣ್ಯ ಇಲಾಖೆಯ ಬೆಂಗಳೂರು ನಗರ ವಿಭಾಗಕ್ಕೆ ನೀಡಲಾಗಿದೆ. 59 ಸಾವಿರ ಮರಗಳ ಗಣತಿ ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಈವರೆಗೆ 59 ಸಾವಿರ ಮರಗಳ ಗಣತಿ ಕಾರ್ಯ ನಡೆದಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ಸಲ್ಲಿಸಿದೆ.

ಬೆಂಗಳೂರು ನಗರ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿ 2021ರ ಫೆ.12ರವರೆಗೆ 40,242 ಮರಗಳ ಗಣತಿ ಪೂರ್ಣಗೊಳಿಸಿದ್ದಾರೆ. ಅದೇ ರೀತಿ ಬಿಬಿಎಂಪಿ ಉಪ ಅರಣ್ಯ ಸಂರಕ್ಷಣಾಧಿಕಾರಿ 18,815 ಮರಗಳ ಗಣತಿ ಕಾರ್ಯ ನಡೆಸಿದ್ದಾರೆ ಎಂದು ಹೈಕೋರ್ಟ್‌ಗೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಸರ್ಕಾರ ಹೇಳಿದೆ. ಕಾಯ್ದೆ ಏನು ಹೇಳುತ್ತೆ ? ಕರ್ನಾಟಕ ಮರಗಳ ಸಂರಕ್ಷಣಾ ಕಾಯ್ದೆ-1976 ಸೆಕ್ಷನ್‌ 7ರಲ್ಲಿ ಮರ ಪ್ರಾಧಿಕಾರದ ಕರ್ತವ್ಯಗಳನ್ನು ವಿವರಿಸಲಾಗಿದೆ. ಸೆಕ್ಷನ್‌ 7ರ ಉಪಕಲಂ ಬಿ ಇದರಲ್ಲಿ “ಅಸ್ತಿತ್ವದಲ್ಲಿರುವ ಮರಗಳ ಗಣತಿ ನಡೆಸುವುದು ಮತ್ತು ಅಗತ್ಯವೆನಿಸಿದಾಗಲೆಲ್ಲ ಮರಗಳ ಸಂಖ್ಯೆಯ ಬಗ್ಗೆ ಎಲ್ಲಾ ಮಾಲೀಕರು ಅಥವಾ ನಿವಾಸಿಗಳಿಂದ ಅವರ ಜಾಗದಲ್ಲಿರುವ ಮರಗಳ ಬಗ್ಗೆ ಘೋಷಣೆ ಪಡೆದುಕೊಳ್ಳುವುದು’ ಮರ ಪ್ರಾಧಿಕಾರದ ಕರ್ತವ್ಯ ಎಂದು ಹೇಳಲಾಗಿದೆ.

ಮರಗಳ ಗಣತಿ ಎಂದರೆ ಕೇವಲ ಸಂಖ್ಯೆ ಎಣಿಕೆ ಮಾಡುವುದಲ್ಲ. ಪ್ರತಿಯೊಂದು ಮರದ ವೈಶಿಷ್ಟéತೆ, ಪ್ರಬೇಧ, ಅದರ ಬಾಳಿಕೆ ಇತ್ಯಾದಿ ವಿಷಯಗಳನ್ನೂ ದಾಖಲಿಸಬೇಕು

 

ಹಿತೇಶ್‌ ವೈ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.