ಜನಸಂಖ್ಯೆ ಹೆಚ್ಚಾದಂತೆ ಸಮಸ್ಯೆಗಳು ಸಹಜ
Team Udayavani, Sep 14, 2019, 3:05 AM IST
ಬೆಂಗಳೂರು: ಮಹಾನಗರದಲ್ಲಿ ದಿನೇ ದಿನೆ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಸಹಜವಾಗೇ ಸಮಸ್ಯೆಗಳೂ ಹೆಚ್ಚಾಗುತ್ತಿವೆ ಎಂದು ಬಿಬಿಎಂಪಿ ಮೇಯರ್ ಗಂಗಾಂಬಿಕೆ ಅಭಿಮತ ವ್ಯಕ್ತಪಡಿಸಿದರು. ನಗರದ ಮಹಾಲಕ್ಷ್ಮೀಪುರ ವಾರ್ಡ್-68ರಲ್ಲಿ ಶುಕ್ರವಾರ ಶ್ರೀ ನಾಗಮ್ಮದೇವಿ ಶ್ರೀ ನಾಗಲಿಂಗೇಶ್ವರ ಸ್ವಾಮಿ ದೇವಸ್ಥಾನದ ರಸ್ತೆ ಹಾಗೂ ಬೆಂಗಳೂರು ಒನ್ ಕಚೇರಿ ಉದ್ಘಾಟಿಸಿ ಮಾತನಾಡಿದರು.
ನಗರಕ್ಕೆ ದೇಶದ ನಾನಾ ಕಡೆಗಳಿಂದ ಜನ ಬಂದು ನೆಲೆಸುತ್ತಿರುವುದರಿಂದ ಜನಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕನುಗುಣವಾಗಿ ಸಮಸ್ಯೆಗಳೂ ಉದ್ಭವಿಸುತ್ತಿವೆ. ಸಾರ್ವಜನಿಕರ ಸಮಸ್ಯೆಗಳ ನಿವಾರಣೆಗೆ ತಕ್ಷಣ ಸ್ಪಂದಿಸಿ, ಸಮಸ್ಯೆಗಳನ್ನು ದೂರಾಗಿಸುವಲ್ಲಿ ಬಿಬಿಎಂಪಿ ಸದಸ್ಯರು, ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಬೆಂಗಳೂರು ಒನ್ ಕಚೇರಿ ತೆರೆದಿರುವುದರಿಂದ ವಾರ್ಡ್ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.
ಮಹಾಲಕ್ಷ್ಮೀಪುರ ವಾರ್ಡ್ ಪಾಲಿಕೆ ಸದಸ್ಯ ಕೇಶವಮೂರ್ತಿ ಮಾತನಾಡಿ, ಭಕ್ತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಶ್ರೀನಾಗಮ್ಮ, ನಾಗಲಿಂಗೇಶ್ವರ ದೇವಸ್ಥಾನದ ರಸ್ತೆ ನಾಮಕರಣ ಮಾಡಲಾಗಿದೆ. ಅಲ್ಲದೆ, ನಮ್ಮ ವಾರ್ಡ್ನಲ್ಲಿ ಬೆಂಗಳೂರು ಒನ್ ಕಚೇರಿ ತೆರೆಯುವ ಮೂಲಕ ಸಾರ್ವಜನಿಕರಿಗೆ ಬೆಸ್ಕಾಂ, ಜಲಮಂಡಳಿ, ಮೊಬೈಲ್ ಬಿಲ್ಲು ಹಣ ಪಾವತಿ ಅನುಕೂಲ ಮತ್ತಿತರ 105 ಸೌಲಭ್ಯಗಳು ದೊರೆಯಲಿವೆ ಎಂದರು.
ಕಾರ್ಯಕ್ರಮದಲ್ಲಿ ಅನರ್ಹಗೊಂಡ ಶಾಸಕ ಗೋಪಾಲಯ್ಯ, ಉಪಮೇಯರ್ ಭದ್ರೇಗೌಡ, ತೆರಿಗೆ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಗೋಪಾಲಯ್ಯ, ಶಂಕರಮಠ ವಾರ್ಡ್ ಸದಸ್ಯ ಎಂ.ಶಿವರಾಜು, ನಂದಿನಿ ಲೇಔಟ್ ವಾರ್ಡ್ ಸದಸ್ಯ ರಾಜೇಂದ್ರಕುಮಾರ್, ಸುಬ್ರಹ್ಮಣ್ಯನಗರ ವಾರ್ಡ್ ಸದಸ್ಯ ಎಚ್. ಮಂಜುನಾಥ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ