ಆಸೀಂ ಷರೀಪ್ ಜಾಮೀನು ಅರ್ಜಿ ವಜಾ
Team Udayavani, Dec 4, 2018, 11:58 AM IST
ಬೆಂಗಳೂರು: ಆರ್ಎಸ್ಎಸ್ ಮುಖಂಡ ರುದ್ರೇಶ್ ಹತ್ಯೆ ಪ್ರಕರಣದ ಐದನೇ ಆರೋಪಿ ಆಸೀಂ ಷರೀಪ್ಗೆ ಜಾಮೀನು ನೀಡಲು ಜಾಮೀನು ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.
ನ್ಯಾಯಾಂಗ ಬಂಧನದಲ್ಲಿರುವ ಆಸೀಂ ಷರೀಪ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಧೀಶರಾದ ಸಿದ್ದಲಿಂಗ ಪ್ರಭು ವಜಾಗೊಳಿಸಿ ಆದೇಶಿಸಿದ್ದಾರೆ. ಪ್ರಕರಣದಲ್ಲಿ ತಮ್ಮ ಪಾತ್ರವೇನಿಲ್ಲ. ವಿನಾಕಾರಣ ಕೆಲವು ದೂರವಾಣಿ ಕರೆಗಳ ಆಧಾರದಲ್ಲಿ ಪ್ರಕರಣದ ಆರೋಪಿಯನ್ನಾಗಿ ಸಿಲುಕಿಸಲಾಗಿದೆ. ಹೀಗಾಗಿ ಜಾಮೀನು ನೀಡಬೇಕು ಎಂದು ಕೋರಿದ್ದ ಆರೋಪಿಯ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಪ್ರಕರಣದಲ್ಲಿ ಎನ್ಐಎ ಪರ ವಿಶೇಷ ಅಭಿಯೋಜಕರಾಗಿ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.ಆರೋಪಿ ಮನೆಯಲ್ಲಿ ಕೃತ್ಯದ ಸಂಚು ರೂಪಿತವಾಗಿದ್ದು, ಇತರೆ ಆರೋಪಿಗಳ ಬ್ರೈನ್ ವಾಶ್ ಮಾಡಿ ನಿರ್ದಿಷ್ಟ ಸಂಸ್ಥೆಯ ಆರ್ಎಸ್ಎಸ್ ವ್ಯಕ್ತಿಯ ಹತ್ಯೆಗೆ ಪ್ರಚೋದನೆ ನೀಡಿದ್ದು, ಹತ್ಯೆ ನಡೆದಿದೆ. ಆರೋಪಿಗಳ ಕೃತ್ಯ ಶೈಲಿ ಜಾಮೀನಿಗೆ ಅರ್ಹವಾಗಿಲ್ಲ.
ಕಾನೂನು ಬಾಹಿರ ಚಟುವಟಿಕೆಗಳ ಪ್ರತಿಬಂಧಕ ಕಾಯಿದೆ ಅನ್ವಯ ಆರೋಪಿಗಳ ಅನ್ವಯ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿದ್ದಾರೆ ಎಂಬ ಅಂಶಗಳನ್ನು ಪರಿಗಣಿಸಿ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ಪ್ರಸನ್ನಕುಮಾರ್ ತಿಳಿಸಿದರು.
ಕಮರ್ಷಿಯಲ್ ಸ್ಟ್ರೀಟ್ನ ಶಿವಾಜಿ ಸರ್ಕಲ್ನಲ್ಲಿ 2016 ಅಕ್ಟೋಬರ್ 16ರಂದು ನಡೆದ ಆರ್ಎಸ್ಎಸ್ ಮುಖಂಡ ರುದ್ರೇಶ್ ಅವರ ಭೀಕರ ಹತ್ಯೆ ನಡೆದಿತ್ತು. ಈ ಸಂಬಂಧ ತನಿಖೆ ಪೂರ್ಣಗೊಳಿಸಿದ ಎನ್ಐಎ ಪಿಎಫ್ಐ ಸಂಘಟನೆಯ ಐವರು ಆರೋಪಿಗಳಾದ ಇರ್ಫಾನ್ ಪಾಶಾ,
ವಾಸೀಂ ಅಹಮದ್, ಮೊಹಮದ್ ಸಾದಿಕ್, ಮೊಹಮದ್ ಮುಜೀಬುಲ್ಲಾ ಹಾಗೂ ಆಸೀಂ ಷರೀಪ್ ವಿರುದ್ಧ ಐಪಿಸಿ ಕಲಂ 302,120 ಬಿ, ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಪ್ರತಿಬಂಧಕ ಕಾಯಿದೆ ಕಲಂ 16(ಎ) 18,20 ಅನ್ವಯ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ