ಆಸ್ತಿಗಾಗಿ ಜಮೀನಿನಲ್ಲಿಯೇ ಹಲ್ಲೆ; ಇಬ್ಬರು ಉದ್ಯಮಿಗಳ ಹತ್ಯೆ


Team Udayavani, Jul 17, 2019, 3:05 AM IST

murder

ಬೆಂಗಳೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಜನರ ಗುಂಪು ದೊಣ್ಣೆಗಳಿಂದ ಇಬ್ಬರು ರಿಯಲ್‌ ಎಸ್ಟೇಟ್‌ ಉದ್ಯಮಿಗಳನ್ನು ಹೊಡೆದು ಕೊಲೆಮಾಡಿರುವ ಘಟನೆ ದೇವರಚಿಕ್ಕನಹಳ್ಳಿಯಲ್ಲಿ ಮಂಗಳವಾರ ನಡೆದಿದೆ.

ಆನಂದ್‌ ರೆಡ್ಡಿ (66), ಪ್ರಕಾಶ್‌ ರೆಡ್ಡಿ (46) ಮೃತರು. ಕೊಲೆ ಆರೋಪಿಗಳಾದ ರಾಮಯ್ಯ ರೆಡ್ಡಿ, ಅವರ ಮಕ್ಕಳಾದ ಸತೀಶ್‌ ರೆಡ್ಡಿ, ನಾಗರಾಜ್‌ ರೆಡ್ಡಿ, ಶ್ರೀನಿವಾಸ್‌ ರೆಡ್ಡಿ, ರೇಣುಕಾ ಅವರನ್ನು ಬಂಧಿಸಿರುವ ಬೇಗೂರು ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇಂದಿರಾನಗರದ ಆನಂದ್‌ ರೆಡ್ಡಿ ಹಾಗೂ ಬಾಣಸವಾಡಿಯ ಪ್ರಕಾಶ್‌ ರೆಡ್ಡಿ ಪರಸ್ಪರ ಸ್ನೇಹಿತರು. ಕಳೆದ 25 ವರ್ಷಗಳ ಹಿಂದೆ ದೇವರ ಚಿಕ್ಕನಹಳ್ಳಿಯ ರಾಮಯ್ಯ ರೆಡ್ಡಿ ಅವರ ಕುಟುಂಬದಿಂದ ಎರಡು ಎಕರೆ ಜಮೀನು ಖರೀದಿ ಮಾಡಿದ್ದರು.

ಜಮೀನು ಬಿಟ್ಟುಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವರ್ಷಗಳಿಂದ ರಾಮರೆಡ್ಡಿ ಹಾಗೂ ಆನಂದ್‌ ರೆಡ್ಡಿ, ಪ್ರಕಾಶ್‌ ರೆಡ್ಡಿ ಪರಸ್ಪರ ಕೋರ್ಟ್‌ನಲ್ಲಿ ಸಿವಿಲ್‌ ಮೊಕದ್ದಮೆಗಳನ್ನು ದಾಖಲಿಸಿದ್ದರು. ಆದರೆ, ಭೂ ವ್ಯಾಜ್ಯ ಬಗೆಹರಿದಿರಲಿಲ್ಲ. ಇತ್ತ ರಾಮಯ್ಯ ರೆಡ್ಡಿ ಕುಟುಂಬ ಕೂಡ ಜಮೀನು ಬಿಟ್ಟುಕೊಟ್ಟಿರಲಿಲ್ಲ.

ಹೊಡೆದು ಕೊಂದರು: ಇಬ್ಬರ ನಡುವಿನ ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕಳೆದ ಶುಕ್ರವಾರ ಕೋರ್ಟ್‌, ಎರಡು ಎಕರೆ ಜಮೀನನ್ನು ಆನಂದ್‌ ರೆಡ್ಡಿ ಹಾಗೂ ಪ್ರಕಾಶ್‌ ರೆಡ್ಡಿ ಅವರಿಗೆ ಬಿಟ್ಟುಕೊಡಬೇಕು ಎಂದು ರಾಮಯ್ಯ ರೆಡ್ಡಿ ಕುಟುಂಬಕ್ಕೆ ಆದೇಶಿಸಿತ್ತು.

ಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನ 12.30ರ ಸುಮಾರಿಗೆ ಆನಂದ್‌ ರೆಡ್ಡಿ ಹಾಗೂ ಪ್ರಕಾಶ್‌ ರೆಡ್ಡಿ ಎರಡು ಎಕರೆ ಜಮೀನಿನ ಬಳಿ ತೆರಳಿದ್ದರು. ಈ ವೇಳೆ ಅಲ್ಲಿಯೇ ಇದ್ದ ರಾಮಯ್ಯ ರೆಡ್ಡಿ ಹಾಗೂ ಕುಟುಂಬ ಜಗಳ ನಡೆಸಿದ್ದು ಕಲ್ಲುಗಳು, ದೊಣ್ಣೆಗಳನ್ನು ತೆಗೆದುಕೊಂಡು ಇಬ್ಬರನ್ನು ಹೊಡೆದು ಕೊಲೆ ಮಾಡಿದ್ದಾರೆ. ಬಳಿಕ ಎರಡೂ ಮೃತದೇಹಗಳನ್ನು ರಸ್ತೆಗೆ ಎಸೆದಿದ್ದಾರೆ.

ರಸ್ತೆಯಲ್ಲಿ ಶವ: ರಸ್ತೆಯಲ್ಲಿ ರಕ್ತಸಿಕ್ತ ಮೃತದೇಹಗಳನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬೇಗೂರು ಠಾಣೆ ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದಾರೆ. ಪರೀಕ್ಷಿಸಿದ ವೈದ್ಯರು ಇಬ್ಬರೂ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆನಂದ್‌ ರೆಡ್ಡಿ ಹಾಗೂ ಪ್ರಕಾಶ್‌ ರೆಡ್ಡಿ ರಿಯಲ್‌ ಎಸ್ಟೇಟ್‌ ಉದ್ಯಮ ನಡೆಸುತ್ತಿದ್ದು ಹಲವು ವರ್ಷಗಳಿಂದ ನಗರದಲ್ಲಿಯೇ ನೆಲೆಸಿದ್ದಾರೆ. ಮರಣೋತ್ತರ ಪರೀಕ್ಷೆ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿ ಹೇಳಿದರು.

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿಗಳಾದ ರಾಮಯ್ಯ ರೆಡ್ಡಿ ಹಾಗೂ ಇತರೆ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರಿಸಲಾಗಿದೆ. ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ಇಬ್ಬರ ಮೇಲೂ ದಾಳಿ ನಡೆಸಿ ಕೊಲೆಗೈದಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
-ಇಶಾ ಪಂಥ್‌, ಡಿಸಿಪಿ, ಆಗ್ನೇಯ ವಿಭಾಗ

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.