Bangalore: ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಹಲ್ಲೆ


Team Udayavani, Feb 21, 2024, 12:19 PM IST

Bangalore: ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಹಲ್ಲೆ

ಬೆಂಗಳೂರು: ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಆಕೆಯನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರ ಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿರುವ ಘಟನೆ ಜೀವನ್‌ಭೀಮಾನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಆರೋಪಿ ಪತಿಯನ್ನು ಬಂಧಿಸಲಾಗಿದೆ.

ಆರ್‌. ಟಿ.ನಗರ ನಿವಾಸಿ ನಿಗರ್‌ (28) ಹಲ್ಲೆಗೊಳಗಾದವರು. ಕೃತ್ಯ ಎಸ ಗಿದ ಆಕೆಯ ಪತಿ ಶೇಕ್‌ ಮುಜೀಬ್‌(35) ಎಂಬಾತನನ್ನು ಬಂಧಿಸಲಾ ಗಿದೆ. ಸೋಮವಾರ ರಾತ್ರಿ 7 ಗಂಟೆಗೆ ಜೀವನಭೀಮಾ ನಗರ ಮುರಗೇಶ ಪಾಳ್ಯದ ವಿಂಡ್‌ ಟನಲ್‌ ರಸ್ತೆಯಲ್ಲಿ ಘಟನೆ ನಡೆದಿದೆ.

ಏನಿದು ಘಟನೆ?: ಆರೋಪಿ ಶೇಕ್‌ ಮುಜೀಬ್‌ ಮತ್ತು ನಿಗರ್‌ 6 ವರ್ಷ ಹಿಂದೆ ವಿವಾಹವಾಗಿದ್ದರು. ಆರ್‌.ಟಿ.  ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿ ದ್ದರು. ವೃತ್ತಿಯಲ್ಲಿ ಚಾಲಕ ನಾಗಿರುವ ಶೇಕ್‌ ಮುಜೀಬ್‌ಗ, ಪತ್ನಿ ನಿಗರ್‌ಗೆ ಸಲೀಂ ಎಂಬಾತನ ಜತೆಗೆ ಅನೈತಿಕ ಸಂಬಂಧ ಇರುವ ಬಗ್ಗೆ ಅನುಮಾ ನವಿತ್ತು. ಈ ವಿಚಾರವಾಗಿ ದಂಪತಿ ನಡುವೆ ಪದೇ ಪದೆ ಮನೆಯಲ್ಲಿ ಗಲಾಟೆ ಆಗುತ್ತಿತ್ತು. ಅದರಿಂದ ಮನನೊಂದಿದ್ದ ನಿಗರ್‌ ಪತಿ ಯಿಂದ ಪ್ರತ್ಯೇಕಗೊಂಡು ಪೇಯಿಂಗ್‌ ಗೆಸ್ಟ್‌ನಲ್ಲಿ ವಾಸವಾ ಗಿದ್ದು, ಊಬರ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಪೊಲೀಸರು ಹೇಳಿದರು.

ನಿಗರ್‌ ಪ್ರತ್ಯೇಕವಾಗಿ ವಾಸವಾಗಿದ್ದರೂ ಶೇಕ್‌ ಮುಜೀಬ್‌ಗ ಆಕೆ ಮೇಲೆ ಕೋಪವಿತ್ತು. ಹೀಗಾಗಿ ನಿಗರ್‌ ಉಳಿದುಕೊಂಡಿದ್ದ ಪೇಯಿಂಗ್‌ ಗೆಸ್ಟ್‌ ಬಳಿ ಸೋಮ ವಾರ ಸಂಜೆ ಹುಡುಕಿಕೊಂಡು ಬಂದಿದ್ದ ಆರೋಪಿ, ಆಕೆ ಇನ್ನು ಪೇಯಿಂಗ್‌ ಗೆಸ್ಟ್‌ಗೆ ಬಂದಿಲ್ಲ ಎಂದು ತಿಳಿದು, ಸಮೀಪದಲ್ಲೇ ಕಾದುಕುಳಿತ್ತಿದ್ದ. ಸಂಜೆ 7 ಗಂಟೆಗೆ ಪತ್ನಿ ನಿಗರ್‌ ಪೇಯಿಂಗ್‌ ಗೆಸ್ಟ್‌ ಬಳಿ ಬರುವುದನ್ನು ಕಂಡ ಕೂಡಲೇ ಏಕಾಏಕಿ ಆಕೆಯ ಮೇಲೆ ಎರಗಿದ್ದಾನೆ. ಆಕೆ ತಪ್ಪಿಸಿಕೊಂಡು ರಸ್ತೆಯಲ್ಲಿ ಓಡು ವಾಗ ಅಟ್ಟಾಡಿಸಿ ಕೊಂಡು ಮಾರಕಾಸ್ತ್ರ ದಿಂದ ಮನಸೋಇಚ್ಛೆ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಆಕೆ ಯನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿ ಸಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೈಬೆರಳು ಕತ್ತರಿಸಲು ಆಗದೇ 20ಕ್ಕೂ ಹೆಚ್ಚು ಕಡೆ ಹಲ್ಲೆ :

ದಂಪತಿ ನಡುವೆ ಗಲಾಟೆ ನಡೆಯುವಾಗ, ಪತ್ನಿ ನಿಗರ್‌ ನಾನು ದುಡಿಯುತ್ತಿದ್ದೇನೆ. ನನ್ನದೇ ಸಂಪಾದನೆಯಲ್ಲಿ ಬದುಕುತ್ತಿದ್ದೇನೆ ಎಂದು ಹೇಳಿದ್ದಳು ಎನ್ನಲಾಗಿದೆ. ಅದರಿಂದ ಆಕ್ರೋಶಗೊಂಡಿದ್ದ ಆರೋಪಿ ಆಕೆಯ ಕೈ ಬೆರಳುಗಳನ್ನು ಕತ್ತರಿಸಲು ನಿರ್ಧರಿಸಿದ್ದ. ಕೈ ಬೆರಳು ಇದ್ದರೆ ದುಡಿಯುತ್ತಾಳೆ. ಕೈ ಬೆರಳುಗಳೇ ಇಲ್ಲವಾದರೆ, ನಾನು ಹೇಳಿದ ಹಾಗೆ ಕೇಳಿಕೊಂಡು ಮನೆಯಲ್ಲೇ ಇರುತ್ತಾಳೆ ಎಂದು ಭಾವಿಸಿದ್ದ ಆರೋಪಿ, ಆಕೆಯ ಮೇಲೆ ಹಲ್ಲೆಗೆ ಮುಂದಾಗಿದ್ದ. ಆದರೆ, ಕೈ ಬೆರಳುಗಳ ಕತ್ತರಿಸಲು ಸಾಧ್ಯವಾಗದೆ, ಆಕೆಯ ತಲೆ ಮತ್ತು ದೇಹದ 20 ಕಡೆಗಳ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.

 

 

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.