ಸ್ಲಂನಲ್ಲಿ ಅಪಾರ್ಟ್ಮೆಂಟ್ ಕಟ್ಟಲು ನೆರವು
Team Udayavani, Sep 26, 2019, 3:08 AM IST
ಬೆಂಗಳೂರು: “ಕೊಳಗೇರಿ ಪ್ರದೇಶಗಳಲ್ಲಿ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಲು ಮುಂದೆಬರುವ ಬಿಲ್ಡರ್ಗಳು, ಡೆವಲಪರ್ಗಳಿಗೆ ಸರ್ಕಾರ ಆರ್ಥಿಕ ನೆರವು ನೀಡಲಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ನಗರದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆವರಣದಲ್ಲಿ ಬುಧವಾರ ರಾಷ್ಟ್ರೀಯ ರಿಯಲ್ ಎಸ್ಟೇಟ್ ಅಭಿವೃದ್ಧಿ ಪರಿಷತ್ತು, ಕರ್ನಾಟಕ (ಎನ್ಆರ್ಇಡಿಸಿಒ) ಹಮ್ಮಿಕೊಂಡಿದ್ದ ಕರ್ನಾಟಕ ಬಿಲ್ಡರ್ ಮತ್ತು ಡೆವಲಪರ್ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವು ಪ್ರತಿಯೊಬ್ಬರಿಗೂ ಸೂರು ಕಲ್ಪಿಸಲು ಹಲವು ಯೋಜನೆ ರೂಪಿಸಿದೆ. ಇದಕ್ಕೆ ಪೂರಕವಾಗಿ ರಾಜ್ಯದ ಕೊಳಗೇರಿಗಳಲ್ಲಿ 2 ಬಿಎಚ್ಕೆ ಫ್ಲಾಟ್ಗಳಿರುವ ಬಹುಮಹಡಿ ವಸತಿ ಸಮುತ್ಛಯಗಳನ್ನು ನಿರ್ಮಿಸಲು ಮುಂದೆ ಬಂದರೆ, ಅಗತ್ಯವಿರುವ ಹಣ ನೀಡಲು ಸರ್ಕಾರ ಸಿದ್ಧವಿದೆ ಎಂದರು.
ಸೂರು ಇಲ್ಲದವರು ಮನೆ ನಿರ್ಮಿಸಿಕೊಳ್ಳಲು ರಾಜ್ಯದಲ್ಲಿ ಈಗಾಗಲೇ ಇಂದಿರಾ ಆವಾಸ್, ಬಸವ ವಸತಿ, ಅಂಬೇಡ್ಕರ್ ವಸತಿ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಕೊಳಗೇರಿಗಳ ನೂರಾರು ಕುಟುಂಬಗಳಿಗೆ ಸೂರಿಲ್ಲ. ಇದ್ದರೂ ಸುಸ್ಥಿತಿಯಲ್ಲಿ ಇರುವುದಿಲ್ಲ. ಅಂತಹ ಕಡೆಗಳಲ್ಲಿ ಬಹುಮಹಡಿ ವಸತಿ ಸಮುತ್ಛಯಗಳ ನಿರ್ಮಾಣಕ್ಕೆ ಬಿಲ್ಡರ್ಗಳು ಮುಂದೆಬರಬೇಕು. ರಿಯಲ್ ಎಸ್ಟೇಟ್ ಉದ್ಯಮದ ಬೆಳವಣಿಗೆಗೆ ಪೂರಕವಾದ ಯಾವುದೇ ರೀತಿಯ ಸಲಹೆಗಳನ್ನು ಸರ್ಕಾರ ತಕ್ಷಣ ಅನುಷ್ಠಾನಗೊಳಿಸಲು ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಕಿರುಕುಳ ನೀಡಿದರೆ ಕ್ರಮ: ಭೂಮಿ ಪರಿವರ್ತನೆ, ಕಟ್ಟಡ ನಿರ್ಮಾಣ ಯೋಜನೆಗಳಿಗೆ ಅನುಮತಿ ನೀಡುವಲ್ಲಿ ಇರುವ ವಿಳಂಬ ಧೋರಣೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಮೂಲಕ ರಿಯಲ್ ಎಸ್ಟೇಟ್ ಉದ್ಯಮವನ್ನು ಪ್ರೋತ್ಸಾಹಿಸಲಾಗುವುದು. ಅಧಿಕಾರಿಗಳು ಬಿಲ್ಡರ್ಗಳಿಗೆ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಸಿದರು.
ಎನ್ಆರ್ಇಡಿಸಿಒ ಅಧ್ಯಕ್ಷ ಡಾ.ನಿರಂಜನ್ ಹೀರಾನಂದಾನಿ ಮಾತನಾಡಿ, ನಿರ್ಮಾಣ ಯೋಜನೆಗಳಿಗೆ ಅನುಮೋದನೆ, ಭೂಮಿ ಪರಿವರ್ತನೆಗೆ ಮಂಜೂರಾತಿ ಸೇರಿದಂತೆ ಹಲವು ವಿಭಾಗಗಳಲ್ಲಿ ನೂರಾರು ಪ್ರಕರಣಗಳು ಎರಡು-ಮೂರು ವರ್ಷಗಳಿಂದ ವಿಲೇವಾರಿ ಆಗುತ್ತಿಲ್ಲ. ಈ ವಿಳಂಬ ಧೋರಣೆಯು ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬೇಸರ ಉಂಟುಮಾಡಿದೆ. ತ್ವರಿತಗತಿಯಲ್ಲಿ ಅನುಮತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಕೇಂದ್ರ ಸರ್ಕಾರ ಈಗಾಗಲೇ ನಿರ್ಮಾಣ ಯೋಜನೆಗಳಿಗಿದ್ದ ತೆರಿಗೆ, ಕಾರ್ಪೊರೇಟ್ ಕಂಪನಿಗಳಿಗೆ ವಿಧಿಸುತ್ತಿದ್ದ ತೆರಿಗೆ ಪ್ರಮಾಣ ಸಾಕಷ್ಟು ಕಡಿತಗೊಳಿಸಿದೆ. ಗೃಹ ಸಾಲದ ಮೇಲಿನ ಬಡ್ಡಿ ದರ ಕಡಿಮೆ ಮಾಡುವುದು ಸೇರಿದಂತೆ ಉದ್ಯಮದ ಚೇತರಿಕೆಗೆ ಹಲವು ಕ್ರಮಗಳನ್ನು ಕೈಗೊಂಡಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರಗಳು ಕೂಡ ಉತ್ತೇಜನಕಾರಿ ಕ್ರಮ ಕೈಗೊಳ್ಳಬೇಕು.
ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಅಭಿವೃದ್ಧಿ ಶುಲ್ಕವನ್ನು ಶೇ.33ರಷ್ಟು ಕಡಿಮೆ ಮಾಡಿದೆ. ನೋಂದಣಿ ಮುದ್ರಾಂಕ ಶುಲ್ಕ ಕಡಿಮೆ ಮಾಡಲು ಚಿಂತನೆ ನಡೆಸಿದೆ. ಕರ್ನಾಟಕವೂ ಈ ದಿಸೆಯಲ್ಲಿ ಚಿಂತನೆ ನಡೆಸಬೇಕು ಎಂದು ಹೇಳಿದರು. ಎನ್ಆರ್ಇಡಿಸಿಒ ಕರ್ನಾಟಕ ವೃತ್ತದ ಅಧ್ಯಕ್ಷ ಎಂ. ಸತೀಶ್ ಕುಮಾರ್, ಗೌರವ ಕಾರ್ಯದರ್ಶಿ ಡಾ.ಸುಜಿತ್ ಕುಮಾರ್, ಎಫ್ಕೆಸಿಸಿಐ ಅಧ್ಯಕ್ಷ ಸಿ.ಆರ್. ಜನಾರ್ದನ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!