ಜನ್ಮಾಂತರದ ಕಥೆ ಕಟ್ಟಿ ವಂಚಿಸಿದ ಜ್ಯೋತಿಷಿ ಸೆರೆ!


Team Udayavani, Aug 22, 2019, 3:05 AM IST

janmantara

ಬೆಂಗಳೂರು: “ಕಳೆದ ಮೂರು ಜನ್ಮದಲ್ಲೂ ನೀನು ನನ್ನ ಪತ್ನಿಯಾಗಿದ್ದೆ’ ಎಂದು ಲೆಕ್ಕಪರಿಶೋಧಕ ಯುವತಿಯನ್ನು ನಂಬಿಸಿ ಆಕೆಯಿಂದಲೇ 30 ಲಕ್ಷ ರೂ. ಪಡೆದ ಜ್ಯೋತಿಷಿಗೆ ಮಹಿಳಾ ಸಂಘಟನೆಗಳ ಸದಸ್ಯರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿರುವ ಘಟನೆ ಹನುಮಂತನಗರದಲ್ಲಿ ನಡೆದಿದೆ.

ಶ್ರೀನಿವಾಸನಗರದ ಕೃಷ್ಣಚಾರ್ಯ ಥಳಿತಕ್ಕೆ ಒಳಗಾದ ಜ್ಯೋತಿಷಿ. ಆರೋಪಿ, ನಗರದಲ್ಲಿ ವಾಸವಾಗಿರುವ 26 ವರ್ಷದ ಲೆಕ್ಕಪರಿಶೋಧಕಿಯನ್ನು ವಂಚಿಸಲು ಮುಂದಾಗಿದ್ದ. ಅಷ್ಟರಲ್ಲಿ ಪೋಷಕರಿಂದ ಈ ವಿಚಾರ ತಿಳಿದ ಮಹಿಳಾ ಸಂಘಟನೆ ಸದಸ್ಯರು ಆರೋಪಿಯನ್ನು ಆತನ ಮನೆ ಬಳಿಯೇ ಹಿಡಿದು ಧಳಿಸಿ ಪೊಲೀಸರಿಗೊಪ್ಪಿಸಿದ್ದಾರೆ.

ಶ್ರೀನಿವಾಸನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಾಗಿರುವ ಆರೋಪಿ, ಹಲವು ವರ್ಷಗಳಿಂದ ಜ್ಯೋತಿಷ್ಯ, ವಾಸ್ತು ದೋಷ ಸರಿ ಮಾಡುವುದಾಗಿ ಹೇಳಿಕೊಂಡು ಓಡಾಡುತ್ತಿದ್ದ. ಎರಡು ವರ್ಷಗಳ ಹಿಂದೆ ವಿಜಯನಗರದಲ್ಲಿರುವ ಯುವತಿಯ ಮನೆಗೆ ವಾಸ್ತು ದೋಷ ನೋಡಲು ಹೋಗಿದ್ದ. ಈ ವೇಳೆ ಮನೆಯಲ್ಲಿ ಯಾವುದೇ ಶುಭಕಾರ್ಯಗಳು ಆಗುವುದಿಲ್ಲ.

ಅದಕ್ಕಾಗಿ ಹೋಮಗಳನ್ನು ಮಾಡಬೇಕೆಂದು, ಎರಡು ವರ್ಷಗಳಿಂದ ಹತ್ತಾರು ಹೋಮಗಳನ್ನು ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಗೆ ಈಗಾಗಲೇ ಮದುವೆಯಾಗಿ ಒಂದು ಮಗು ಇದ್ದರೂ, ಯುವತಿಗೆ “ನನಗೂ ನಿನಗೂ ಮೂರು ಜನ್ಮಗಳ ಸಂಬಂಧವಿದೆ. ಜನ್ಮ ಜನ್ಮಾನಂತರದ ಅನುಬಂಧವಿದೆ. ಕಳೆದ ಜನ್ಮಗಳಲ್ಲಿ ನೀನು ನನ್ನ ಪತ್ನಿಯಾಗಿದ್ದೆ.

ಈ ಜನ್ಮದಲ್ಲಿ ಕಾರಣಾಂತರಗಳಿಂದ ದೂರ ಆಗಿದ್ದೇವೆ. ನೀನು ನನ್ನನ್ನು ಮದುವೆಯಾದರೆ ಮೋಕ್ಷ ದೊರೆಯುತ್ತದೆ. ಹೀಗಾಗಿ ನಿನಗೆ ಇನ್ನೂ ವಿವಾಹ ನಿಶ್ಚಯವಾಗುತ್ತಿಲ್ಲ’ ಎಂದು ನಂಬಿಸಿದ್ದಾನೆ. ಅಲ್ಲದೆ, ತನ್ನ ಮನೆಗೂ ಕರೆದುಕೊಂಡು ಹೋಗಿ ಪೂಜೆಗಳನ್ನು ನೆರವೇರಿಸಿದ್ದಾನೆ ಎಂದು ಮಹಿಳಾ ಸಂಘಟನೆಯವರು ಆರೋಪಿಸಿದ್ದಾರೆ.

30 ಲಕ್ಷ ರೂ. ಕೊಟ್ಟಿದ್ದರು: “ಕಳೆದ ಜನ್ಮದಲ್ಲಿ ನೀನೊಬ್ಬಳು ದೊಡ್ಡ ಭರತನಾಟ್ಯ ಕಲಾವಿದೆಯಾಗಿದ್ದೆ. ಆಗ ನಿನ್ನ ಸಾವಿಗೆ ನಾನೇ ಕಾರಣನಾಗಿದ್ದೆ. ನೀನು ನನ್ನ ಸ್ವತ್ತು’ ಎಂದಿದ್ದ ಆರೋಪಿ, ನಿಂಬೆಹಣ್ಣು, ಹೆಣ್ಣಿನಗೊಂಬೆ, ಕರ್ಪೂರ ಇಟ್ಟುಕೊಂಡು ಕಚೇರಿಗೆ ಹೋಗುವಂತೆ ಯುವತಿಗೆ ಸೂಚಿಸಿದ್ದ ಎಂದು ಹೇಳಲಾಗಿದೆ. ಈ ನಡುವೆ ನಾನಾ ಕಾರಣಗಳನ್ನು ನೀಡಿ ಯುವತಿಯಿಂದ ಇದುವರೆಗೆ 30 ಲಕ್ಷ ರೂ.ಗಳನ್ನು ಆರೋಪಿ ಪಡೆದಿದ್ದಾನೆ. ಆಕೆ ಹೆಸರಿನಲ್ಲಿ ಕೆಲ ಬ್ಯಾಂಕ್‌ನಲ್ಲಿ ಸಾಲ ಕೊಡ ಪಡೆದುಕೊಂಡಿದ್ದ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದರು.

ಪುತ್ರಿಯ ವರ್ತನೆ ಕಂಡು ವಿಚಾರಿಸಿದಾಗ ಆಕೆ ಜ್ಯೋತಿಷಿ ಬಗ್ಗೆ ಹೇಳಿದ್ದರು. ನಂತರ ಮಹಿಳಾ ಸಂಘಟನೆಗಳ ನೆರವು ಕೋರಿದ್ದು, ಸಂಘಟನೆ ಸದಸ್ಯರು ಆರೋಪಿ ಬಳಿ ಹೋಗಿ ಪ್ರಶ್ನಿಸಿದಾಗ ಬೆದರಿಕೆ ಹಾಕಿದ್ದ. ಇದರಿಂದ ಆಕ್ರೋಶಗೊಂಡ ಸದಸ್ಯರು, ಆತನ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ. ಈ ಕೃತ್ಯಕ್ಕೆ ಆರೋಪಿಯ ಪತ್ನಿ ಕೂಡ ಸಹಕಾರ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹನುಮಂತನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.