ವೇತನಾನುದಾನಕ್ಕಾಗಿ ಅಹೋರಾತ್ರಿ ಸತ್ಯಾಗ್ರಹ
Team Udayavani, Jul 23, 2018, 7:00 AM IST
ಬೆಂಗಳೂರು: ದಶಕಗಳ ಹಿಂದೆ ಆರಂಭವಾಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವಲ್ಲಿ
ರಾಜ್ಯ ಸರ್ಕಾರ ತಾರತಮ್ಯ ಮಾಡಿರುವುದು ಸರಿಯಲ್ಲ. ಎಲ್ಲ ಅರ್ಹ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಿ, ಅಲ್ಲಿನ
ಶಿಕ್ಷಕರಿಗೆ ಸೂಕ್ತ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿನೊಂದ ಶಿಕ್ಷಕರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್) ಅಹೋರಾತ್ರಿ ಸತ್ಯಾಗ್ರಹ ಆರಂಭಿಸಿದ್ದಾರೆ.
1987ರಿಂದ 1994-95ರ ಅವಧಿಯಲ್ಲಿ ಆರಂಭವಾಗಿರುವ ಸಾವಿರಾರು ಶಾಲೆಗಳಿಗೆ ಸರ್ಕಾರ ವೇತನಾನುದಾನ ನೀಡಿದೆ. ಆದರೆ, ಇದೇ ಅವಧಿಯಲ್ಲಿ ಆರಂಭವಾದ ಸುಮಾರು 87 ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಲು ಸರ್ಕಾರ ಇಲ್ಲಸಲ್ಲದ ಆಕ್ಷೇಪಣೆ ಒಡ್ಡುತ್ತಿದೆ. 87 ಶಾಲೆಗಳ ಕಡತಕ್ಕೆ ಆರ್ಥಿಕ ಅನುಮೋದನೆ ನೀಡದೆ ಹಿಂದಕ್ಕೆ ಕಳುಹಿಸಿದೆ ಎಂದು ರಾಜ್ಯ ಅನುದಾನಕ್ಕೆ ಒಳಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ವರದರಾಜ್ ಹೇಳಿದ್ದಾರೆ.
87 ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಸಂಬಂಧ 2017ರ ಸೆ.15 ಮತ್ತು 27ರಂದು ನಡೆದ ಸಭೆಯಲ್ಲಿ ಅಂದಿನ
ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದರು. ತನ್ವೀರ್ ಸೇಠ್ ಕೂಡ ಸಮಸ್ಯೆಗೆ ಪರಿಹಾರ ನೀಡುವುದಾಗಿ ಹೇಳಿದ್ದರು.
87 ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವವರೆಗೂ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ