ಹಳ್ಳಿ ಸೊಗಡು ನೆನಪಿಸಿದ ಆಟಿಡೊಂಜಿ ಕೂಟ


Team Udayavani, Aug 12, 2019, 3:05 AM IST

halli

ಬೆಂಗಳೂರು: ಅಲ್ಲಿ ಹಳ್ಳಿಗಾಡಿನ ಸೊಗಡು ಮೇಳೈಸಿತ್ತು. ತುಳುನಾಡಿನ ಜಾನಪದ ಕಲೆಗಳು ಅನಾವರಣಗೊಂಡಿತ್ತು. ಒಂದು ಕಡೆ ಹಿರಿಯರು ಚೆನ್ನೆಮನೆ ಆಟವಾಡಿ ಹಳ್ಳಿ ಸಂಸ್ಕೃತಿ ನೆನಪಿಸಿದರೆ ಮತ್ತೂಂದು ಕಡೆ ಯುವ ಸಮೂಹ ಲಗೋರಿ ಆಟವಾಡಿ ಸಂಭ್ರಮಿದರು. ಇಂತಹ ಅಪರೂಪದ ಸಂಭ್ರಮಕ್ಕೆ ಬೆಂಗಳೂರಿನ ತುಳುವೆರೆಂಕುಲ ಸಂಸ್ಥೆ, ಭಾನುವಾರ ವಿಜಯಾ ಬ್ಯಾಂಕ್‌ ಲೇ ಔಟ್‌ನಲ್ಲಿ ಹಮ್ಮಿಕೊಂಡಿದ್ದ “ಆಟಿಡೊಂಜಿ ಕೂಟ-2019′ ಸಾಕ್ಷಿಯಾಯಿತು. ಬೆಂಗಳೂರಿನ ವಿವಿಧಡೆಗಳಲ್ಲಿ ನೆಲೆಸಿರುವ ತುಳು ಬಾಂಧವರನ್ನು ಒಂದೆಡೆ ಸೇರಿಸುವಲ್ಲಿ ಯಶಸ್ವಿಯಾಯಿತು.

ಬೆಳಗ್ಗೆಯಿಂದ ಸಂಜೆವರೆಗೂ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ತುಳುನಾಡಿನ ಸಾಂಸ್ಕೃತಿ ಸಿರಿವಂತಿಕೆಯನ್ನು ಮತ್ತೆ ನೆನಪಿಸಿತು. ಹಿರಿಯರಿಂದ ಹಿಡಿದು ಪುಟಾಣಿ ಮಕ್ಕಳು ಕೂಡ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಜಾಗತೀಕರಣದಿಂದಾಗಿ ಇಂದು ಅನೇಕ ರೀತಿಯ ಜಾನಪದ ಆಟಗಳು ಮಾಯವಾಗುತ್ತಿವೆ. ಇದರಲ್ಲಿ ಚೆನ್ನೆಮನೆ ಆಟ ಕೂಡ ಒಂದಾಗಿದೆ. ಇತ್ತೀಚಿನ ದಿನಗಳಲ್ಲಿ ಕಣ್ಮರೆಯಾಗುತ್ತಿರುವ ಈ ಆಟವನ್ನು “ಆಟಿಡೊಂಜಿ ಕೂಟ’ ನೆನಪಿಸಿತು. ಹಿರಿಯರು ಆಟವಾಡುತ್ತಿದ್ದದನ್ನು ಪುಟಾಣಿ ಮಕ್ಕಳು ಆಸಕ್ತಿಯಿಂದ ಆಟವನ್ನು ವೀಕ್ಷಿಸಿ, ಆನಂದಿಸಿದರು.

ಖುಷಿಕೊಟ್ಟ ಲಗೋರಿಯಾಟ: ದೊಡ್ಡ ಸಂಖ್ಯೆಯಲ್ಲಿ ಯುವಕರು ಲಗೋರಿಯಾಟದಲ್ಲಿ ಕಾಣಿಸಿಕೊಂಡರು. ಬೆಂಗಳೂರಿನ ವಿವಿಧ ಕಡೆಗಳಲ್ಲಿ ನೆಲೆಸಿರುವ ಕರಾವಳಿ ಭಾಗದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಆಟದಲ್ಲಿ ಭಾಗವಹಿಸಿದ್ದರು. ಅಲ್ಲದೆ ಆಶುಭಾಷಣ, ಭಾಗತಿಕೆ ಹಾಡುವ ಸ್ಪರ್ಧೆ, ಮದಿಪು ಸ್ಪರ್ಧೆ ಸೇರಿದಂತೆ ಹಲವು ಗ್ರಾಮೀಣ ಜಾನಪ ಕ್ರೀಡಾಕೂಟಗಳಲ್ಲಿ ಉತ್ಸಾಹದಿಂದ ಯುವಕರು ಪಾಲ್ಗೊಂಡಿದ್ದರು.

ಕಳೆತಂದ ಮಾನಿನಿಯರು: ಆಟಿಡೊಂಜಿ ಕೂಟದಲ್ಲಿ ಮಾನಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜಾನಪದ ಕ್ರೀಡಾ ಕೂಟಕ್ಕೆ ಮತ್ತಷ್ಟು ಕಳೆ ತಂದರು. ಯುವತಿಯರ ಜತೆಗೆ ಮಹಿಳೆಯರು ಕೂಡ ಲಗೋರಿ ಆಟದಲ್ಲಿ ಪಾಲ್ಗೊಂಡು ಕ್ರೀಡೆಯ ಸವಿಯುಂಡರು. ಹಗ್ಗಜಗ್ಗಾಟ, ರಂಗೋಲಿ ಸ್ಪರ್ಧೆ, ನಿಂಬೆ ಹಣ್ಣಿನ ಓಟ, ಸೂಜಿಗೆದಾರ ಪೋಣಿಸುವುದು ಸೇರಿಂದತೆ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗ್ರಾಮೀಣ ಕ್ರೀಡೆಗಳನ್ನು ಯುವ ಸಮೂಹಕ್ಕೆ ನೆನಪಿಸಿದರು.

ಮೈದಾ ಹಿಟ್ಟಿನಲ್ಲಿ ನಾಣ್ಯ ಹುಡುಕುವ ಸ್ಪರ್ಧೆಯಲ್ಲಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಆಹಾರ ಪ್ರಿಯರು ಖಾದ್ಯ ಮೇಳದಲ್ಲಿ ಹಲಸಿನ ಕಡಬು, ಕೊಟ್ಟೆಕಡಬು, ಗೋಲಿಬಜೆ, ಪತ್ರವಡೆ, ನೀರ್‌ ದೋಸೆಗಳ ಸವಿಯುಂಡರು. ಮಧ್ಯಾಹ್ನ ನಡೆದ “ಕರ್ಣಾರ್ಜುನ ಕಾಳಗ’, ಯಕ್ಷಗಾನ ತಾಳಮದ್ದಳೆ ಯಕ್ಷಗಾನ ಪ್ರಿಯರನ್ನು ರಂಜಿಸಿತು.

ತುಳು ಭವನಕ್ಕೆ ನಿರ್ಮಾಣಕ್ಕೆ ಮನವಿ: ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷ ವೇದಕುಮಾರ್‌, ಬೆಂಗಳೂರಿನಲ್ಲಿ ಹಲವು ಸಂಖ್ಯೆಯಲ್ಲಿ ತುಳುವರಿದ್ದಾರೆ. ಆ ಹಿನ್ನೆಲೆಯಲ್ಲಿ ತುಳುವ ಭವನದ ಅವಶ್ಯಕತೆಯಿದ್ದು, ಸರ್ಕಾರ ತುಳು ಭವನ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು. ತುಳುನಾಡು ತನ್ನದ ಆದ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ.

ಆ ನೆಲದ ಜಾನಪದ ಕಲೆಗಳನ್ನು ನಮ್ಮ ಯುವ ಸಮುದಾಯಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತಸ ತಂದಿದೆ ಎಂದು ಹೇಳಿದರು. ಬೆಂಗಳೂರು ದಕ್ಷಿಣ ಕನ್ನಡಿಗರ ಸಂಘದ ಅಧ್ಯಕ್ಷ ಬಾ.ರಾಮಚಂದ್ರ ಉಪಾಧ್ಯ, ಬೆಂಗಳೂರು ತುಳುವರೆ ಚಾವಡಿ ಅಧ್ಯಕ್ಷ ಆಶಾನಂದ ಕುಲಶೇಖರ, ವಕೀಲೆ ಶಕುಂತಳಾ ಶೆಟ್ಟಿ, ವಿಜಯಕುಮಾರ್‌ ಕುಲಶೇಖರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಗರೀಕರಣದಿಂದಾಗಿ ಜಾನಪದ ಕಲೆಗಳು ಮರೆಯಾಗುತ್ತಿದ್ದು, ಅವುಗಳನ್ನು ನಮ್ಮ ಯುವ ಸಮೂಹಕ್ಕೆ ಪರಿಚಯಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
-ಪಳ್ಳಿ ವಿಶ್ವನಾಥ ಶೆಟ್ಟಿ, ತುಳುವೆರೆಂಕುಲು ಬೆಂಗಳೂರು ಸಂಸ್ಥೆ ಪ್ರ.ಕಾರ್ಯದರ್ಶಿ

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.