ಎಟಿಎಂ ಕಾರ್ಡ್‌ ಪಡೆದು ವಂಚನೆ; ಇಬ್ಬರ ಸೆರೆ


Team Udayavani, Feb 6, 2019, 6:40 AM IST

atm-card.jpg

ಬೆಂಗಳೂರು: ಮಾಲೀಕರ ನಂಬಿಕೆ ಗಳಿಸಿ ಅವರ ಎಟಿಎಂ ಕಾರ್ಡ್‌ ಪಡೆದು ಆನ್‌ಲೈನ್‌ ಮೂಲಕ ಸಾವಿರಾರು ರೂ. ಹಣ ವಂಚಿಸಿದ ಇಬ್ಬರು ಕಾರು ಚಾಲಕರು ಸೈಬರ್‌ ಕ್ರೈಂ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಳ್ಳಿ ತಾಲೂಕಿನ ಸಿ.ನಾಗರಾಜ (30) ಮತ್ತು ಚನ್ನಪಟ್ಟಣ ತಾಲೂಕಿನ ಎಚ್‌.ಎಸ್‌.ಸಚಿನ್‌(23) ಬಂಧಿತರು. ಆರೋಪಿಗಳು ದೇವಿನಗರದ ನಿವಾಸಿ 79 ವರ್ಷದ ಮಹಿಳೆಗೆ ವಂಚಿಸಿದ್ದು, ಬಂಧಿತರಿಂದ 47 ಸಾವಿರ ರೂ. ಹಣ ವಶಪಡಿಸಿಕೊಳ್ಳಲಾಗಿದೆ.

ನಾಗರಾಜ್‌ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡಿದ್ದು, ಸಚಿನ್‌ ಡಿಪ್ಲೊಮಾ ಓದಿದ್ದಾನೆ. ದೇವಿನಗರದಲ್ಲಿ ವಾಸವಾಗಿದ್ದಾರೆ. ಇಬ್ಬರು ಪರಸ್ಪರ ಸ್ನೇಹಿತರಾಗಿದ್ದು, ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ಪೈಕಿ ನಾಗರಾಜ್‌ ದೇವಿನಗರದ ನಿವಾಸಿ ದೂರುದಾರ ಮಹಿಳೆಯ ಕಾರು ಚಾಲಕನಾಗಿ ಕಳೆದ ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಈ ವೇಳೆ ಅವರ ವಿಶ್ವಾಸಗಳಿಸಿಕೊಂಡಿದ್ದ.

ಮತ್ತೂಂದೆಡೆ ಮಹಿಳೆ ಕೂಡ ತಮ್ಮ ಎಟಿಎಂ ಕಾರ್ಡ್‌ ಮತ್ತು ಮೊಬೈಲ್‌ನ್ನು ಆರೋಪಿ ಬಳಿ ಕೊಟ್ಟಿದ್ದರು. ಇದನ್ನೆ ದುರುಪಯೋಗ ಪಡಿಸಿಕೊಂಡ ನಾಗರಾಜ, ಮಹಿಳೆಯ ಲಕ್ಷಿ ವಿಲಾಸ ಬ್ಯಾಂಕಿನ ಎಟಿಎಂ ಕಾರ್ಡ್‌ನ ಎರಡು ಬದಿಯ ಫೋಟೋವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು, ತನ್ನ ಸ್ನೇಹಿತ ಸಚಿನ್‌ಗೆ ಕಳುಹಿಸಿದ್ದ.

ಪೇಟಿಯಂ ಮೂಲಕ ಹಣ ವರ್ಗಾವಣೆ: ಈ ಮಧ್ಯೆ ನಾಗರಾಜು ಪ್ರತಿನಿತ್ಯ ಕಾರ್ಯಚಟುವಟಿಕೆಗಳಿಗಾಗಿ ಮಹಿಳೆಯ ಎಟಿಎಂ ಕಾರ್ಡ್‌ ಹಾಗೂ ಮೊಬೈಲ್‌ನ್ನು ತನ್ನ ಬಳಿಯೇ ಇಟ್ಟುಕೊಳ್ಳುತ್ತಿದ್ದ. ಈ ವೇಳೆ ಮತ್ತೂಬ್ಬ ಆರೋಪಿ ಸಚಿನ್‌, ಮಹಿಳೆಯ ಎಟಿಎಂ ಕಾರ್ಡ್‌ ಬಳಸಿಕೊಂಡು ತನ್ನ ಪೇಟಿಯಂ ಖಾತೆಗೆ ಒಂದು ತಿಂಗಳ ಅವಧಿಯಲ್ಲಿ ಒಂಬತ್ತು ಬಾರಿ ಒಟ್ಟು 47 ಸಾವಿರ ರೂ. ಹಣ ವರ್ಗಾಹಿಸಿಕೊಂಡಿದ್ದಾನೆ.

ಮತ್ತೂಂದೆಡೆ ಪ್ರತಿ ಬಾರಿ ಹಣ ವರ್ಗಾವಣೆ ವೇಳೆ ಮಹಿಳೆ ಮೊಬೈಲ್‌ ನಂಬರ್‌ಗೆ ಬರುತ್ತಿದ್ದ ಓಟಿಪಿ ನಂಬರ್‌ ಅನ್ನು ಆರೋಪಿ ನಾಗರಾಜು ಸ್ನೇಹಿತ ಸಚಿನ್‌ ತಿಳಿಸುತ್ತಿದ್ದ. ಈ ಮೂಲಕ ಇಬ್ಬರು ಆರೋಪಿಗಳು ಮಹಿಳೆಗೆ ವಂಚಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ಈ ಸಂಬಂಧ ವಂಚನೆಗೊಳಗಾದ ಮಹಿಳೆ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಬಳಿಕ ತನಿಖೆ ನಡೆಸಿದ ಪೊಲೀಸರಿಗೆ ಆರೋಪಿ ನಾಗರಾಜ ಮೇಲೆ ಅನುಮಾನಗೊಂಡು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.

ಸೈಬರ್‌ ಕ್ರೈಂ ಪೊಲೀಸರ ಮನವಿ: ಸಾರ್ವಜನಿಕರು ಯಾವುದೇ ವ್ಯಕ್ತಿಗೆ ಯಾವುದೇ ಕಾರಣಕ್ಕೂ ತಮ್ಮ ಬ್ಯಾಂಕ್‌ನ ಖಾತೆಯ ವಿವರ, ಎಟಿಎಂ ಕಾರ್ಡ್‌, ಆನ್‌ಲೈನ್‌ ಬ್ಯಾಂಕಿಗೆ ಅಧಿಕೃತವಾಗಿ ನೊಂದಣಿಯಾದ ಮೊಬೈಲ್‌ ಸಂಖ್ಯೆಯುಳ್ಳ ಮೊಬೈಲ್‌ ನೀಡಬಾರದು. ಕೆಲವೊಮ್ಮೆ ನಿಮ್ಮ ಗಮನಕ್ಕೆ ಬಾರದೆ ನಂಬಿಕೆ ದ್ರೋಹವೆಸಗಿ ಹಣ ವರ್ಗಾವಣೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸೈಬರ್‌ ಕ್ರೈಂ ಪೊಲೀಸರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.