ಎಟಿಎಂ ಕಾರ್ಡ್‌ ಎಗರಿಸಿ 2 ಲಕ್ಷ ರೂ. ವಂಚನೆ


Team Udayavani, Mar 18, 2019, 6:35 AM IST

atm-card.jpg

ಬೆಂಗಳೂರು: ಎಟಿಎಂನಲ್ಲಿ ಮಹಿಳೆಯೊಬ್ಬರು ಹಣ ಡ್ರಾ ಮಾಡುವಾಗಲೇ ಕಾರ್ಡ್‌ ಅದಲು ಬದಲು ಮಾಡಿದ ವಂಚಕನೊಬ್ಬ ಬಳಿಕ ಎರಡು ಲಕ್ಷ ರೂ. ಡ್ರಾ ಮಾಡಿಕೊಂಡಿರುವ ಘಟನೆ ಪೀಣ್ಯದಲ್ಲಿ ನಡೆದಿದೆ.

ಖಾಸಗಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುವ ನಾಗರತ್ನ ಮಾ. 13ರಂದು ಜಾಲಹಳ್ಳಿಯಲ್ಲಿರುವ ಆಕ್ಸಿಸ್‌ ಬ್ಯಾಂಕ್‌ ಎಟಿಎಂಗೆ ತೆರಳಿದ್ದರು. ಈ ವೇಳೆ ಮೂವರು ವ್ಯಕ್ತಿಗಳು ಹಿಂದೆ ನಿಂತಿದ್ದರು. ಅವರೂ ಹಣ ಡ್ರಾ ಮಾಡಲು ಬಂದಿರಬಹುದೆಂದು ಭಾವಿಸಿ, 10 ಸಾವಿರ ರೂ. ಡ್ರಾ ಮಾಡಿದ್ದಾರೆ. ಮತ್ತೆ ಪ್ರಯತ್ನಿಸಿದಾಗ ಹಣ ಬಾರದಿರುವುದನ್ನು ಪರಿಶೀಲಿಸಿ ವಾಪಸ್‌ ಬಂದಿದ್ದಾರೆ.

ಇದಾದ ಕೆಲವೇ ಗಂಟೆಗಳಲ್ಲಿ ಅವರ ಅಕೌಂಟ್‌ನಿಂದ 2ಲಕ್ಷ ರೂ. ಡ್ರಾ ಮಾಡಿಕೊಂಡಿರುವ ಬಗ್ಗೆ ಮೊಬೈಲ್‌ಗೆ ಮೆಸೇಜ್‌ನಿಂದ ಬಂದಿದೆ. ಇದರಿಂದ ಅಚ್ಚರಿಗೊಂಡ ಅವರು ಮಾರನೇ ದಿನ ಈ ಬಗ್ಗೆ ಬ್ಯಾಂಕ್‌ಗೆ ವಿಚಾರಿಸಲು ತೆರಳಿದಾಗ, ಅವರ ಬಳಿಯಿದ್ದ ಕಾರ್ಡ್‌ ಅವರದ್ದಲ್ಲ, ಬೇರೆಯವರದು ಎಂಬ ಮಾಹಿತಿ ಬೆಳಕಿಗೆ ಬಂದಿದೆ. 

ಹಣ ಡ್ರಾ ಮಾಡುವಾಗ ಹಿಂದೆ ನಿಂತಿದ್ದವ ವ್ಯಕ್ತಿಯೊಬ್ಬ ಇವರು ಹಣ ಪಡೆದುಕೊಳ್ಳುವಾಗ ಕೆಲವೇ ಕ್ಷಣಗಳಲ್ಲಿ ಅವರ ಕಾರ್ಡ್‌ ಪಡೆದು ಮತ್ತೂಂದು ಆಕ್ಸಿಸ್‌ ಕಾರ್ಡ್‌ನ್ನೇ ಇಟ್ಟಿದ್ದಾರೆ. ಇದನ್ನು ಗಮನಿಸದ ನಾಗರತ್ನ ಅವರು ತಮ್ಮದೇ ಎಟಿಎಂ ಕಾರ್ಡ್‌ ಇರಬಹುದು ಎಂದು ವಾಪಾಸ್‌ ಬಂದಿದ್ದಾರೆ.

2 ಲಕ್ಷ ರೂ. ಕಡಿತಗೊಂಡ ಬಳಿಕವೇ ಅವರಿಗೆ ತಮ್ಮ ಕಾರ್ಡ್‌ ಅದಲು ಬದಲಾಗಿದೆ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದರು. ಈ ಕುರಿತು ನಾಗರತ್ನ ಪೀಣ್ಯ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಎಟಿಎಂ ಕೇಂದ್ರದ ಸಿಸಿಟಿವಿ ಫ‌ೂಟೇಜ್‌ ಪರಿಶೀಲಿಸಿದ್ದು ವಂಚಕನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.