ಪಿಒಪಿ ಮೂರ್ತಿ ತಯಾರಿ ಘಟಕಗಳ ಮೇಲೆ ದಾಳಿ

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಸುಧಾಕರ್‌ ನೇತೃತ್ವದಲ್ಲಿ ದಾಳಿ | ಲಕ್ಷಾಂತರ ಮೂರ್ತಿಗಳು ವಶಕ್ಕೆ

Team Udayavani, Aug 18, 2019, 9:11 AM IST

bng-tdy-1

ನಗರದಲ್ಲಿ ಹೆಚ್ಚುತ್ತಿರುವ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಘಟಕಗಳ ಮೇಲೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ್‌ ಅವರ ನೇತೃತ್ವದಲ್ಲಿ ಅಧಿಕಾರಿಗಳು ಶನಿವಾರ ದಿಢೀರ್‌ ದಾಳಿ ನಡೆಸಿದರು.

ಕೆಂಗೇರಿ: ನಗರದಲ್ಲಿ ಹೆಚ್ಚುತ್ತಿರುವ ಪಿಒಪಿ ಗಣೇಶಮೂರ್ತಿ ತಯಾರಿಕೆ ಘಟಕಗಳ ಮೇಲೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ್‌ ಅವರ ನೇತೃತ್ವದಲ್ಲಿ ಅಧಿಕಾರಿಗಳು ಶನಿವಾರ ದಿಢೀರ್‌ ದಾಳಿ ನಡೆಸಿ, ಲಕ್ಷಾಂತರ ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಘಟಕಗಳಲ್ಲಿ ನಿಯಮ ಮೀರಿ ನಿಷೇಧಿತ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ (ಪಿಒಪಿ) ಗಣೇಶ ಮೂರ್ತಿಗಳನ್ನು ತಯಾರಿಸುತ್ತಿದ್ದುದನ್ನು ಕಂಡು ಕೆಂಡಾಮಂಡಲರಾದ ಮಂಡಳಿ ಅಧ್ಯಕ್ಷರು, ಕೂಡಲೆ ಘಟಕಗಳನ್ನು ಮುಚ್ಚಿಸಿ, ಬೀಗಮುದ್ರೆ ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೆಂಗೇರಿ ಉಪನಗರ ಸೇರಿ ನಗರದ ಹಲವೆಡೆ ನಿಯಮ ಮೀರಿ ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿರುವ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಕುಂಬಳಗೋಡು-ಕೆ.ಗೊಲ್ಲಹಳ್ಳಿ, ಪೆಪ್ಸಿ ಫ್ಯಾಕ್ಟರಿ ಸಮೀಪದ ಘಟಕಗಳು ಹಾಗೂ ಮೈಸೂರು ರಸ್ತೆ ಆರ್‌.ವಿ ಎಂಜನಿಯರಿಂಗ್‌ ಕಾಲೇಜು ಬಳಿ ಇರುವ ಪಿಒಪಿ ಗಣೇಶ ಮೂರ್ತಿಗಳನ್ನು ಇರಿಸಿದ್ದ ಗೋಡನ್‌ ಮೇಲೆ ಶನಿವಾರ ದಾಳಿ ನಡೆಸಿ, ಪರಿಶೀಲಿಸಲಾಯಿತು.

ಪರಿಶೀಲನೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ್‌, ಘಟಕಗಳಲ್ಲಿ ಪಿಒಪಿ ಗಣೇಶ ವಿಗ್ರಹಗಳನ್ನು ತಯಾರಿಸಿ, ನಗರದ ನಾನಾ ಭಾಗ ಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಮೂರ್ತಿಗಳನ್ನು ಕೆರೆಯಲ್ಲಿ ವಿಸರ್ಜಿಸಿದರೆ ಕೆರೆ ನೀರು ಕಲುಷಿತಗೊಂಡು ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಮೂರ್ತಿ ತಯಾರಿಕೆ ನಿಲ್ಲಿಸುವಂತೆ ಈ ಘಟಕಗಳಿಗೆ ಹಲವು ಬಾರಿ ನೋಟಿಸ್‌ ನೀಡಿ, ಮುಚ್ಚಿಸಲಾಗಿತ್ತು. ಆದರೂ ಮತ್ತೆ ಘಟಕ ತೆರೆದು ಪಿಒಪಿ ಮೂರ್ತಿಗಳನ್ನು ತಯಾರಿಸುತ್ತಿದ್ದರು ಎಂದು ಹೇಳಿದರು.

ಪ್ರಸ್ತುತ ಘಟಕಗಳನ್ನು ಮುಚ್ಚಿಸಿದ್ದು, ಮಾಲೀಕರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಇಲ್ಲಿ ತಯಾರಿಸಿರುವ ಗಣೇಶ ಮೂರ್ತಿಗಳನ್ನು ಯಲಹಂಕದ ಸಂಸ್ಥೆಯೊಂದು ವೈಜ್ಞಾನಿಕ ವಿಧಾನದಲ್ಲಿ ಮರಳಾಗಿ ಪರಿವರ್ತಿಸಲಿದೆ. ಪ್ರಸ್ತುತ ವಶಕ್ಕೆ ಪಡೆದಿರುವ ಮೂರ್ತಿಗಳನ್ನು ಬಿಬಿಎಂಪಿ ಮೂಲಕ ಸಂಸ್ಥೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಮಾಲಿನ್ಯ ನಿಯಂತ್ರಣ ಮಂಡಳಿ, ಕಂದಾಯ, ಬಿಬಿಎಂಪಿ, ಪೊಲೀಸ್‌ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಗೋಡನ್‌ ನಲ್ಲಿರುವ ಪಿಒಪಿ ಗಣೇಶ ಮೂರ್ತಿಗಳನ್ನು ಲೆಕ್ಕ ಹಾಕಿ, ಮುಟ್ಟುಗೋಲು ಹಾಕಿಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಪಿಒಪಿ ಮೂರ್ತಿ ಧಿಕ್ಕರಿಸಿ: ಸಾರ್ವಜನಿಕರು ಸಹ ಪಿಒಪಿ ಗಣೇಶನ ಮೂರ್ತಿಗಳ ಬದಲು ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಬೇಕು. ಇದರಿಂದ ಪರಿಸರ ಮಾಲಿನ್ಯ ಮತ್ತು ಜಲ ಮಾಲಿನ್ಯ ಆಗುವುದನ್ನು ತಪ್ಪಿಸಬಹುದು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಇಲಾಖೆಗಳು ಮಾಡಲಿವೆ ಎಂದು ಸುಧಾಕರ್‌ ತಿಳಿಸಿದರು.

ಗ್ರಾಮಾಂತರ ಪ್ರದೇಶಗಳಲ್ಲಿರುವ ಪಿವಿಪಿ ಗಣೇಶ ತಯಾರಿಕೆ ಘಟಕಗಳ ಮೇಲೆ ನಿಗಾ ವಹಿಸಲು ಜಿಲ್ಲಾಧಿಕಾರಿ ಮತ್ತು ಹಿರಿಯ ಅಧಿಕಾರಿಗಳಿಗೆ ಮೌಖೀಕವಾಗಿ ಸೂಚಿಸಲಾಗಿದೆ. ಈ ಕುರಿತು ಇಂದೇ ಆದೇಶ ಹೊರಡಿಸಿ ಘಟಕಗಳನ್ನು ಶಾಶ್ವತವಾಗಿ ಮುಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.