ಅಮಾಯಕನ ಕೊಂದವರ ಬಂಧನಕ್ಕೆ ಗುಂಡೇಟು


Team Udayavani, Nov 12, 2018, 11:55 AM IST

amayakana.jpg

ಬೆಂಗಳೂರು: ದಾರಿ ಕೇಳಿದ ಯುವಕನನ್ನು ವೈರಿ ಗುಂಪಿನ ಕಡೆಯವನು ಎಂದು ಭಾವಿಸಿ ಕೊಲೆಗೈದು ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳಿಗೆ ಗುಂಡೇಟಿನ ರುಚಿ ತೋರಿಸಿರುವ ಕೆ.ಆರ್‌ ಪುರಂ ಠಾಣೆ ಪೊಲೀಸರು ಆರೋಪಿಗಳಿಬ್ಬರನ್ನು ಭಾನುವಾರ ಬಂಧಿಸಿದ್ದಾರೆ. 

ರೌಡಿಶೀಟರ್‌ ನವೀನ್‌ ಕುಮಾರ್‌ ಅಲಿಯಾಸ್‌ ಅಪ್ಪು, ಗಿರೀಶ್‌ ಅಲಿಯಾಸ್‌ ಗಿರಿ ಬಂಧಿತರು. ಕಳೆದ ಜನವರಿಯಿಂದ ಅಪರಾಧಿಕ ಕೃತ್ಯಗಳಲ್ಲಿ ತೊಡಗಿ ಬಂಧಿಸಲು ಹೋದ ವೇಳೆ ಪೊಲೀಸರ, ಮೇಲೆಯೇ ಹಲ್ಲೆಗೆ ಮುಂದಾದ ಆರೋಪಿಗಳ ಮೇಲೆ ಗುಂಡು ಹಾರಿಸಿ ಬಂಧಿಸಿದ 16ನೇ ಪ್ರಕರಣ ಇದಾಗಿದೆ. 

ಸೆ. 13ರಂದು ಚೇತನ್‌ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನವೀನ್‌ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕೆ ಕೆಆರ್‌ಪುರಂ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಭಾನುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ನವೀನ್‌ ಹಾಗೂ ಗಿರಿ ಕಾಟಿನಲ್ಲೂರ್‌ ಗೇಟ್‌ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್‌ ಜಯರಾಜು ನೇತೃತ್ವದ ತಂಡ ಬಂಧಿಸಲು ತೆರಳಿತ್ತು.

ಪೊಲೀಸರನ್ನು ಕಂಡ ಕೂಡಲೇ ಆರೋಪಿ ನವೀನ್‌ ತನ್ನ ಬಳಿಯಿದ್ದ ಪಿಸ್ತೂಲ್‌ನಿಂದ ಪೊಲೀಸ್‌ ವಾಹನದ ಮೇಲೆ ಮೂರು ಸುತ್ತು ಗುಂಡುಹೊಡೆದಿದ್ದಾನೆ. ಈ ವೇಳೆ ಇನ್ಸ್‌ಪೆಕ್ಟರ್‌ ಜಯರಾಜು, ತಮ್ಮ ಪಿಸ್ತೂಲ್‌ನಿಂದ ನವೀನ್‌ ಬಲಗಾಲಿಗೆ ಗುಂಡು ಹಾರಿಸಿದ್ದಾರೆ ಕೂಡಲೇ ಕೆಳಗೆ ಕುಸಿದು ಬಿದ್ದ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೂಬ್ಬ ಆರೋಪಿ ಗಿರೀಶ್‌ನನ್ನು ಹಿಡಿಯಲು ಹೋದ ಪೊಲೀಸ್‌ ಪೇದೆ ಮುನಿರಾಜುಗೆ ಡ್ರ್ಯಾಗರ್‌ನಿಂದ ಇರಿಯಲು ಯತ್ನಿಸಿದ್ದಾನೆ.

ಹೀಗಾಗಿ ಇನ್ಸ್‌ಪೆಕ್ಟರ್‌ ಪುನ: ಗಿರೀಶ್‌ ಕಾಲಿಗೂ ಗುಂಡು ಹೊಡೆದಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ಇಬ್ಬರು ಆರೋಪಿಗಳನ್ನು ಕೆ.ಆರ್‌ ಪುರಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಾಯಾಳು ಪೇದೆ ಮುನಿರಾಜು ಸತ್ಯ ಸಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾರಿ ಕೇಳಿದ್ದಕ್ಕೆ ಕೊಲೆಗೈದ ನವೀನ್‌ ಅಂಡ್‌ ಟೀಂ!” ಸೆ. 13ರಂದು ತುಮಕೂರು ಮೂಲದ ಚೇತನ್‌ (22) ಹೆಬ್ಟಾಳದ ”ಇಂಟರ್‌ನೆಟ್‌ ಗ್ಲೋಬಲ್‌ ಸರ್ವೀಸ್‌” ಕಂಪನಿಯ ಉದ್ಯೋಗಿ ತನ್ನ ಸ್ನೇಹಿತ ವಿನಯ್‌ನನ್ನು ಬಸವನಪುರದಲ್ಲಿ ಬಿಟ್ಟು ವಾಪಾಸ್‌ ಬರುವಾಗ ದಾರಿ ತಿಳಿಯದ ಚೇತನ ದೇವಸಂದ್ರ ರಸ್ತೆಗೆ ತೆರಳಿ ಅಲ್ಲೇ ಮದ್ಯ ಸೇವಿಸುತ್ತಾ ಕುಳಿತಿದ್ದ ನವೀನ್‌ ಹಾಗೂ ಆತನ ಸಹಚರರನ್ನು ದಾರಿ ಕೇಳಿದ್ದ.

ಅದೇ ದಿನ ಎದುರಾಳಿ ಗುಂಪಿನ ಹರೀಶ್‌ ಜತೆ ಜಗಳವಾಡಿಕೊಂಡಿದ್ದ ನವೀನ್‌, ಚೇತನ್‌ ನವೀನ್‌ ಕಡೆಯವನಿರಬಹುದು ಎಂದು ಭಾವಿಸಿ ಆತನ ಮೇಲೆ ಹಲ್ಲೆ ನಡೆಸಿದ್ದ. ಜತೆಗೆ, ತನ್ನ ಮನೆಗೆ ಕರೆತಂದು ಸ್ನೇಹಿತರ ಜತೆಗೂಡಿ ಚೇತನ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದು ದೊಡ್ಡದೇನಹಳ್ಳಿಯ ನೀಲಗಿರಿ ತೋಪಿನಲ್ಲಿ ಮೃತದೇಹವನ್ನು ಸುಟ್ಟು ಹಾಕಿದ್ದರು. ಸೆ.15 ವಾಯುವಿಹಾರಕ್ಕೆ  ಬಂದ ಸ್ಥಳೀಯರು ಅರೆ ಬೆಂದ ಮೃತದೇಹ ನೋಡಿ ಪೊಲೀಸರಿಗೆ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದರು.

ಕಾರ್ಪೋರೇಟರ್‌ ಪತಿ ಹತ್ಯೆ ಆರೋಪಿ ನವೀನ್‌!: ಆರೋಪಿ ನವೀನ್‌ ಕುಮಾರ್‌, ಬಿಬಿಎಂಪಿಯ ಮಾಜಿ ಸದಸ್ಯೆ ಮಂಜುಳಾದೇವಿ ಪತಿ ಸಿರ್‌ಪುರ ಶ್ರೀನಿವಾಸ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದ. ಆತನ ಎರಡು ಹಲ್ಲೆ ಪ್ರಕರಣಗಳು ದಾಖಲಾಗಿವೆ.

ಮತ್ತೂಬ್ಬ ಆರೋಪಿ ಗಿರಿ, ಬನಶಂಕರಿ 3ನೇ ಹಂತದ ಬಡಾವಣೆ ವಾಸವಾಗಿದ್ದ ಉದ್ಯಮಿ ನವಮಣಿಯನ್ನು ಬರ್ಬರವಾಗಿ ಕೊಲೆಗೈದ ಪ್ರಕರಣದಲ್ಲಿ ಮೂರು ವರ್ಷ ಜೈಲಿನಲ್ಲಿದ್ದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಬಳಿಕ ನವೀನ್‌ ಜತೆ ಸೇರಿಕೊಂಡು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.