ಎಟಿಎಂ ಹಣದ ವಾಹನ ಸಮೇತ ಪರಾರಿ ಯತ್ನ


Team Udayavani, Oct 12, 2018, 10:25 AM IST

blore-2.jpg

ಬೆಂಗಳೂರು: ಎಟಿಎಂಗೆ ಹಣ ತುಂಬುವ ವಾಹನ ಸಮೇತ ಪರಾರಿಯಾಗಲು ಇಬ್ಬರು ಕಳ್ಳರು ವಿಫ‌ಲ ಯತ್ನ ನಡೆಸಿರುವ ಸಿನಿಮೀಯ ಮಾದರಿ ಘಟನೆ ಕಲ್ಯಾಣನಗರದ 80 ಅಡಿ ರಸ್ತೆಯಲ್ಲಿ ಬುಧವಾರ ನಡೆದಿದೆ.

ಹಣ ದರೋಡೆ ಮಾಡುವ ಉದ್ದೇಶದ ಹಿನ್ನೆಲೆಯಲ್ಲಿ ವಾಹನ ಕದ್ದೊಯ್ಯುವ ಸಂಚು ರೂಪಿಸಿದ ಶಂಕೆ ಹಿನ್ನೆಲೆಯಲ್ಲಿ ಖಾಸಗಿ ಬ್ಯಾಂಕ್‌ ಗಳ ಎಟಿಎಂಗಳಿಗೆ ಹಣ ತುಂಬಿಸುವ ಏಜೆನ್ಸಿ ವಾಹನದ ಚಾಲಕ ಸುಮನ್‌, ಸೆಕ್ಯೂರಿಟಿ ಮಂಜು, ಕಸ್ಟೋಡಿಯನ್‌ಗಳಾದ ದೀಪಕ್‌, ಸತೀಶ್‌ ಕುಮಾರ್‌ನನ್ನು ವಶಕ್ಕೆ ಪಡೆದಿರುವ ಬಾಣಸವಾಡಿ ಠಾಣೆ ಪೊಲೀಸರು ತೀವ್ರ
ವಿಚಾರಣೆ ನಡೆಸುತ್ತಿದ್ದಾರೆ. 

ಖಾಸಗಿ ಬ್ಯಾಂಕ್‌ಗಳ ಎಟಿಎಂಗಳಿಗೆ ಹಣ ತುಂಬಿಸುವ ರೇಡಿಯಂಟ್‌ ಏಜೆನ್ಸಿ ವಾಹನದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಲ್ಯಾಣನಗರದ ಓಂ ಶಕ್ತಿ ದೇವಾಲಯದ ಸಮೀಪದ ಎಚ್‌ಡಿಎಫ್ಸಿ ಬ್ಯಾಂಕ್‌ ಎಟಿಎಂಗೆ ಹಣ ತುಂಬಲು ರೇಡಿಯಂಟ್‌ ಏಜೆನ್ಸಿ ಸಿಬ್ಬಂದಿ ಆಗಮಿಸಿದ್ದರು. ಈ ವೇಳೆ ಕಸ್ಟೋಡಿಯನ್‌ ಗಳಾದ ದೀಪಕ್‌ ಹಾಗೂ ಸತೀಶ್‌ ಹಣ ತುಂಬಲು ಎಟಿಎಂ ಕೇಂದ್ರಕ್ಕೆ ಹೋಗಿದ್ದಾರೆ, ಸೆಕ್ಯೂರಿಟಿ ಗಾರ್ಡ್‌ ಕೂಡ ಅವರ ಹಿಂದೆಯೇ ಹೋಗಿದ್ದಾನೆ. ವಾಹನದಲ್ಲಿದ್ದ ಚಾಲಕ ಸುಮನ್‌ ಕೂಡ ಕೆಳಗಿಳಿದು, ಪೋನ್‌ ಸಂಭಾಷಣೆಯಲ್ಲಿ ನಿರತನಾಗಿದ್ದಾನೆ.

ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಆಗಮಿಸಿ ವಾಹನ ಹತ್ತಿ ಸ್ಟಾರ್ಟ್‌ ಮಾಡಿಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಇದನ್ನು ಗಮನಿಸಿದ ಚಾಲಕ ಸುಮನ್‌ ಕಿರುಚಿಕೊಂಡು ಹಿಂಬಾಲಿಸಿದ್ದಾನೆ. ಜತೆಗೆ, ಎಟಿಎಂ ಭದ್ರತಾ ಸಿಬ್ಬಂದಿ ಕೂಡ ಓಡಿಬಂದಿದ್ದು ವಾಹನ ಹಿಂಬಾಲಿಸಿದ್ದರು. ಸಿನಿಮಾ ಮಾದರಿಯಲ್ಲಿ ಕೆಲವೇ ನಿಮಿಷಗಳಲ್ಲಿ ನಡೆದ ಈ
ದರೋಡೆ ದೃಶ್ಯ ನೋಡಿ ಸ್ಥಳೀಯರು ಹಾಗೂ ಸ್ಥಳದಲ್ಲಿದ್ದ ಬಾಣಸವಾಡಿ ಬೀಟ್‌ ಸಿಬ್ಬಂದಿಯ ಇಬ್ಬರು ಪೊಲೀಸ್‌ ಪೇದೆಗಳು ಹಿಂಬಾಲಿಸುತ್ತಿದ್ದಂತೆ, ಆರೋಪಿ ಕಾರು ನಿಲ್ಲಿಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 7 ಲಕ್ಷ ರೂ. ಹಣವಿದ್ದ ವಾಹನ ದರೋಡೆ ಯತ್ನ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಏಜೆನ್ಸಿಯ ಸೆಕ್ಯೂರಿ ಗಾರ್ಡ್‌ ವಾಹನದ ಬಳಿ ಇರದೇ ಹೋಗಿದ್ದು, ಚಾಲಕ ಕೀ ಬಿಟ್ಟು ಹೋಗಿದ್ದಾನೆ. ದರೋಡೆ ಸಂಚಿನಲ್ಲಿ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಏಜೆನ್ಸಿ ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಾಹನ ಕದ್ದೊಯ್ಯಲು ಯತ್ನಿಸಿದ ಆರೋಪಿ ಬಂಧನಕ್ಕೆ ಕ್ರಮ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.