ಪ್ರೀತಿಸಿದ ಯುವತಿ ಅತ್ಯಾಚಾರ; ಹತ್ಯೆ ಯತ್ನ
Team Udayavani, Apr 27, 2020, 3:47 PM IST
ಬೆಂಗಳೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಕೊಲೆಗೆ ಯತ್ನಿಸಿರುವ ಘಟನೆ ಮಾರತ್ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ
ನಡೆದಿದೆ. ಮಾರತ್ಹಳ್ಳಿ ನಿವಾಸಿ 29 ವರ್ಷದ ಯುವತಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಸಂಜಯನಗರ ನಿವಾಸಿ ಅರ್ಕ್ ಬಕ್ಷಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಒಂದು ವರ್ಷದ ಹಿಂದೆ ಮಾರತ್ಹಳ್ಳಿಯಲ್ಲಿ ನೆಲೆಸಿದ್ದ ಯುವತಿ, ತನ್ನ ಮನೆ ಸಮೀಪದ ಎನ್ ಜಿಒದಲ್ಲಿ ಕೆಲಸ ಮಾಡುತ್ತಿದ್ದರು. ಅದೇ ವೇಳೆ ಅರ್ಕ್ ಬಕ್ಷಿ ಪರಿಚಯವಾಗಿದ್ದ. ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿತ್ತು. ಪ್ರೀತಿಸುತ್ತಿದ್ದ ವಿಚಾರವನ್ನು ಯುವತಿಯ ಪಾಲಕರಿಗೆ ತಿಳಿಸಿ, ಮದುವೆಯಾಗುವುದಾಗಿ ಹೇಳಿದ್ದ. ಬಳಿಕ ಆತ ಕೆಲಸ ಮಾಡುತ್ತಿದ್ದ ಕಚೇರಿ ಸಂಜಯನಗರಕ್ಕೆ ಸ್ಥಳಾಂತರವಾಗಿತ್ತು. ಈ ಹಿನ್ನೆಲೆಯಲ್ಲಿ ಅರ್ಕ್ ಬಕ್ಷಿ ಕೂಡ ಸಂಜಯನಗರಕ್ಕೆ ಬಂದು ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಭೇಟಿ ಮಾಡಬೇಕೆಂದು ಹೇಳಿ ಆಕೆಯನ್ನು ಮನೆಗೆ ಕರೆಸಿಕೊಂಡು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಫೆ.14ರಂದು ಕಾಡು ಬೀಸನಹಳ್ಳಿಯಲ್ಲಿರುವ ಪಬ್ಗೆ ಕರೆದೊಯ್ದಿದ್ದ. ಈ ವೇಳೆ ಸ್ನೇಹಿತರಿಗೆ ಯುವತಿಯನ್ನು ಪರಿಚಯಿಸಿಕೊಂಡಿದ್ದ. ಅಲ್ಲದೇ, ಸ್ನೇಹಿತರ ಮುಂದೆ ಮದುವೆಯಾಗುವುದಾಗಿ ಹೇಳಿ ಕೈ ಬೆರಳಿಗೆ ಉಂಗುರ ಹಾಕಿದ್ದಾನೆ.
ವಿವಾಹದ ವಿಚಾರ ಅರ್ಕ್ ಬಕ್ಷಿಯ ಪಾಲಕರಿಗೆ ಗೊತ್ತಾಗಿತ್ತು. ಆದರೆ, ಅವರು ಅದಕ್ಕೆ ವಿರೋಧ ವ್ಯಕ್ತಪಡಿಸಿ ಬೆದರಿಕೆ ಸಂದೇಶ ಕಳುಹಿಸಿದ್ದರು. ಅಲ್ಲದೇ, ಅರ್ಕ್ ಬಕ್ಷಿಗೆ ಕರೆ ಮಾಡಿ, ಯುವತಿ
ಜತೆಗಿನ ಸಂಬಂಧ ಬಿಟ್ಟುಬಿಡು. ಇಲ್ಲವಾದರೆ ನಿನ್ನನ್ನು ಮನೆಯಿಂದ ಹೊರಹಾಕುವುದಾಗಿ ಬೆದರಿಸಿದ್ದಾರೆ. ಹೀಗಾಗಿ ಆರೋಪಿ ಮಾ.23ರಂದು ಮನೆಯಿಂದ ಹೊರ ಹೋಗುವಂತೆ ಯುವತಿಗೆ ಒತ್ತಾಯಿಸಿದ್ದ. ಅದಕ್ಕೆ ನಿರಾಕರಿಸಿದಾಗ, ಹಲ್ಲೆ ನಡೆಸಿ, ಕೊಲೆ ಯತ್ನ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖೀಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ