“ಇ-ಬುಕ್‌’ ವ್ಯವಸ್ಥೆಗೆ ಮೊರೆ ಹೋದ ಪ್ರಾಧಿಕಾರ


Team Udayavani, Mar 2, 2019, 6:12 AM IST

e-book.jpg

ಬೆಂಗಳೂರು: ಇ-ಓದುಗರಿಗೆ ಈಗ ಸುಗ್ಗಿಕಾಲ. ದೇಶ-ವಿದೇಶದ ಯಾವುದೇ ಮೂಲೆಗಳಲ್ಲಿ ಓದುಗರಿದ್ದರೂ ಅವರನ್ನು ಕ್ಷಣ ಮಾತ್ರದಲ್ಲಿ ತಲುಪುವ ಸಾಮರ್ಥಯ ಇ-ಪುಸ್ತಕಗಳಿಗಿದೆ. ಇದನ್ನು ಮನಗಂಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಮತ್ತು ತನ್ನ ವ್ಯಾಪ್ತಿಯ ಕೆಲವು ಪ್ರಾಧಿಕಾರಗಳು “ಇ-ಬುಕ್‌’ ವ್ಯವಸ್ಥೆಯನ್ನು ಕನ್ನಡ ಸಾಹಿತ್ಯವಲಯದಲ್ಲೂ ಜಾಗೃತಗೊಳಿಸಲು ಮುಂದಾಗಿದೆ. 

ಇದೀಗ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಕೂಡ ಅದೇ ದಾರಿಯಲ್ಲಿ ಸಾಗಲು ನಿರ್ಧರಿಸಿದೆ. ಪ್ರಾಧಿಕಾರ ಕನ್ನಡದ ಉತ್ತಮ ಕೃತಿಗಳನ್ನು ತೆಲಗು, ತಮಿಳು, ಬಂಗಾಳಿ, ಮಲೆಯಾಳಂ, ಕೊಂಕಣಿ, ಹಿಂದಿ ಮತ್ತು ಇಂಗ್ಲಿಷ್‌ ಸೇರಿದಂತೆ ಹಲವು ಭಾಷೆಗಳಿಗೆ ತರ್ಜುಮೆ ಮಾಡಲಾಗಿದೆ.

ಆದರೆ ಅಂಥ ಪುಸ್ತಕಗಳಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ  ರೂಪುಗೊಂಡಿಲ್ಲ. ಆ ಹಿನ್ನೆಲೆಯಲ್ಲಿಯೇ “ಇ -ಬುಕ್‌’ ರೂಪದಲ್ಲಿ ಪುಸ್ತಕಗಳನ್ನು ನೀಡಿದರೆ ವಿಶ್ವವ್ಯಾಪಿ ಸಹೃದಯರನ್ನು ತಲುಪುವ ಮತ್ತು ಆ ಮೂಲಕ ಆನ್‌ಲೈನ್‌ನಲ್ಲಿ ಪ್ರಾಧಿಕಾರ ಜಾಗೃತವಾಗಲು ಮನಸ್ಸು ಮಾಡಿದಂತಿದೆ.

 25 ವಿವಿಧ ಶೀರ್ಷಿಕೆಯ 35 ಸಾವಿರಕ್ಕೂ ಹೆಚ್ಚು ಪುಸ್ತಕಗಳು ಮಾರಾಟವಾಗದೇ ಪ್ರಾಧಿಕಾರದ ಮಳಿಗೆಯಲ್ಲಿ ಉಳಿದಿವೆ.  ಇದನ್ನು ಈ ಹಿಂದೆ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಸರ್ಕಾರದ ಗಮನಕ್ಕೆ ತಂದಿದ್ದರು. ಆದರೆ  ಪ್ರಯೋಜನವಾಗಿರಲಿಲ್ಲ. ಆ ಹಿನ್ನೆಲೆಯಲ್ಲಿಯೇ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಈಗ ಓದುಗರನ್ನು ಸೆಳೆಯಲು ವಿನೂತನ ಪ್ರಯತ್ನಕ್ಕೆ ಸಜ್ಜಾಗಿದೆ.

ಹೊಸ ವೆಬ್‌ ಸೈಟ್‌: ಇ-ಪುಸ್ತಕಕ್ಕಾಗಿಯೇ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹೊಸ ವೆಬ್‌ಸೈಟ್‌ ವಿನ್ಯಾಸಗೊಳಿಸಿದೆ. ಅಲ್ಲಿ ಹಲವು ಭಾಷೆಯ ಕೃತಿಗಳು ಇರಲಿದ್ದು, ಆಯಾ ಭಾಷೆಯ ಸಾಹಿತ್ಯಾಸಕ್ತರು ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಿ, ತಮಗೆ ಬೇಕಾದ ಪುಸ್ತಕ ಓದುವುದರ ಜತೆಗೆ ಅವುಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಹೀಗೆ ಮಾಡುವುದರಿಂದ ಪುಸ್ತಕಗಳ ಮಾರಾಟದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂಬುದು ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಅಭಿಪ್ರಾಯ.

ಶೀಘ್ರದಲ್ಲಿ ಸಮಿತಿ ರಚನೆ: ಹೊಸ ವೆಬ್‌ಸೈಟ್‌ ರಚನೆ ಸಂಬಂಧ ಶೀಘ್ರದಲ್ಲಿ ಸಮಿತಿಯೊಂದು ರಚನೆಯಾಗಲಿದೆ. ಈಗಾಗಲೇ ನಾಲ್ಕೈದು ಕಂಪನಿಗಳು ವೆಬ್‌ಸೈಟ್‌ ವಿನ್ಯಾಸಕ್ಕೆ ಮುಂದೆ ಬಂದಿದ್ದು, ತಾಂತ್ರಿಕ ನಿಪುಣರನ್ನೊಳಗೊಂಡ ಸಮಿತಿ, ಕಂಪನಿಯನ್ನು ಆಯ್ಕೆ ಮಾಡಲಿದೆ.

ಈ ಕಾರ್ಯಕ್ಕಾಗಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ 4 ಲಕ್ಷ ರೂ.ಗಳನ್ನು ಮೀಸಲಿಟ್ಟಿದ್ದು, ಕೆಲವೇ ತಿಂಗಳಲ್ಲಿ ಹೊಸ ವೆಬ್‌ಸೈಟ್‌ ಹೊರತರಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಮರುಳಸಿದ್ಧಪ್ಪ ಹೇಳಿದ್ದಾರೆ. “ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, ಕಥೆ, ಕಾದಂಬರಿ, ಕವಿತೆ, ನಾಟಕ ಸೇರಿದಂತೆ ಎಲ್ಲ ಕೃತಿಗಳನ್ನು ಇ-ಪುಸ್ತಕ ರೂಪದಲ್ಲಿ ತರುವ ಆಲೋಚನೆ ಇದೆ. ಓದುಗರ ಪ್ರತಿಕ್ರಿಯೆ ನೋಡಿ ಮತ್ತಷ್ಟು ಪುಸ್ತಕಗಳನ್ನು ಸೇರಿಸುವುದಾಗಿ ತಿಳಿಸಿದರು.

“ಇಂದಿರಾಬಾಯಿ’ ಇ-ಬುಕ್‌: ಕನ್ನಡದ ಮೊದಲ ಸಾಮಾಜಿಕ ಕಾದಂಬರಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಗುಲ್ವಾಡಿ ವೆಂಕಟರಾವ್‌ ಅವರ “ಇಂದಿರಾಬಾಯಿ’ ಕಾದಂಬರಿಗೆ ಕನ್ನಡ ಪುಸ್ತಕ ಪ್ರಾಧಿಕಾರ ಈಗಾಗಲೇ ಇ-ಬುಕ್‌ ರೂಪ ನೀಡಿದೆ. ಬೆಳ್ಳಿಹಬ್ಬದ ಹಿನ್ನೆಲೆಯಲ್ಲಿ ಇ-ಬುಕ್‌ ರೂಪ ನೀಡಿದ್ದು ಓದುಗರಿಂದ ಮೆಚ್ಚುಗೆ ಪಡೆದಿದೆ. ಆ ಹಿನ್ನೆಲೆಯಲ್ಲಿಯೇ ಮತ್ತಷ್ಟು ಪುಸ್ತಕಗಳಿಗೆ ಇ-ಬುಕ್‌ ರೂಪ ನೀಡುವ ಆಲೋಚನೆ ಇದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಹೇಳಿದ್ದಾರೆ.

ಓದುಗರನ್ನು ತಲುಪಬೇಕು ಎಂಬ ಉದ್ದೇಶದಿಂದ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಉತ್ತಮ ಹೆಜ್ಜೆ ಇರಿಸಿದೆ.
-ಕುಂ.ವೀರಭದ್ರಪ್ಪ, ಕಾದಂಬರಿಕಾರ.

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.