ದುಬಾರಿ ಬಾಡಿಗೆ ಹಣ ಕೊಡದಿದ್ದಕ್ಕೆ ಪ್ರಯಾಣಿಕನ ಕೊಂದ ಆಟೋ ಡ್ರೈವರ್‌


Team Udayavani, Jun 13, 2023, 2:31 PM IST

tdy-9

ಬೆಂಗಳೂರು: ಹೆಚ್ಚಿನ ಬಾಡಿಗೆ ಹಣ ನೀಡಲು ನಿರಾಕರಿಸಿದ ಪ್ರಯಾಣಿಕನ ಮೇಲೆ ಆಟೋ ಚಾಲಕನೊಬ್ಬ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಸುಬ್ರಮಣ್ಯನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯಶವಂತಪುರದ ಅಮೋದ್‌ ಕರೋಡ್‌(28) ಕೊಲೆಯಾದವರು.

ಈತನ ಸಹೋದರ ಅಯೂಬ್‌ (25) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ತಡರಾತ್ರಿ ಯಶವಂತಪುರ ಸೋಪ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದೆ.

ಘಟನೆ ಸಂಬಂಧ ಆಟೋ ಚಾಲಕ ಸುಂಕದಕಟ್ಟೆ ನಿವಾಸಿ ಅಶ್ವತ್ಥ್ (29) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಅಸ್ಸಾಂ ಮೂಲದ ಸಹೋದರರಾದ ಅಮೋದ್‌ ಮತ್ತು ಅಯೂಬ್‌ ಉದ್ಯೋಗ ಬಯಸಿ ಬೆಂಗಳೂ ರಿಗೆ ಬಂದಿದ್ದು, ಯಶವಂತಪುರದಲ್ಲಿ ಬಾಡಿಗೆ ಮನೆ ಯಲ್ಲಿ ವಾಸವಾಗಿದ್ದರು. ಭಾನುವಾರ ಕೆಲಸಕ್ಕೆ ರಜೆ ಹಿನ್ನೆಲೆಯಲ್ಲಿ ಚಂದಾಪುರದಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದರು. ಅಸ್ಸಾಂನಿಂದ ರೈಲಿನಲ್ಲಿ ಹೊರಟ್ಟಿದ್ದ ಚಿಕ್ಕಪ್ಪನ ಮಗ ಭಾನುವಾರ ಮುಂಜಾನೆ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಬರಲಿದ್ದ. ಹೀಗಾಗಿ ಆತನನ್ನು ರೈಲು ನಿಲ್ದಾಣದಿಂದ ಮನೆಗೆ ಕರೆದೊಯ್ಯುವ ಸಲುವಾಗಿ ಚಂದಾಪುರದಿಂದ ಬಿಎಂಟಿಸಿ ಬಸ್‌ನಲ್ಲಿ ರಾತ್ರಿ 11 ಗಂಟೆಗೆ ಮೆಜೆಸ್ಟಿಕ್‌ಗೆ ಬಂದಿದ್ದರು. ಮೆಜೆಸ್ಟಿಕ್‌ನಿಂದ ಯಶವಂತಪುರ ರೈಲು ನಿಲ್ದಾಣಕ್ಕೆ ಆಟೋದಲ್ಲಿ ತೆರಳಿ ಆಟೋ ಬಾಡಿಗೆ ವಿಚಾರಿಸಿದಾಗ ಚಾಲಕನೊಬ್ಬ 300 ರೂ. ಬಾಡಿಗೆ ಕೇಳಿದ್ದಾನೆ. ಬಾಡಿಗೆ ದುಬಾರಿ ಆಯಿತು ಎಂದು ಬೇರೆ ಆಟೋ ವಿಚಾರಿಸಲು ಮುಂದಾಗಿದ್ದಾರೆ.

ಇದೇ ವೇಳೆ ಆರೋಪಿ ಅಶ್ವತ್ಥ್ ಆಟೋದೊಂದಿಗೆ ಅಲ್ಲಿಗೆ ಬಂದಿದ್ದಾನೆ. ತಲಾ 50 ರೂ. ಹೆಚ್ಚುವರಿ ಕೊಟ್ಟರೆ ರೈಲು ನಿಲ್ದಾಣಕ್ಕೆ ಬಿಡುವುದಾಗಿ ಹೇಳಿದ್ದಾನೆ. ಅದಕ್ಕೆ ಸಮ್ಮತಿಸಿದ ಸಹೋದರರು ಆಟೋ ಹತ್ತಿದ್ದಾರೆ. ಆಟೋ ಯಶವಂತಪುರ ಸೋಪ್‌ ಫ್ಯಾಕ್ಟರಿ ಬಳಿ ಬಂದಾಗ, ಆಟೋ ಚಾಲಕ ತಲಾ 1,500 ರೂ. ನಂತೆ ಇಬ್ಬರಿಗೆ 3 ಸಾವಿರ ರೂ. ಕೊಡಬೇಕು ಎಂದಿದ್ದಾನೆ. ಅದರಿಂದ ಗಾಬರಿಗೊಂಡ ಸಹೋದರರು, ಅಷ್ಟೊಂದು ಕೊಡಲು ಸಾಧ್ಯವಿಲ್ಲ. ಮೊದಲು ಹೇಳಿದಂತೆ ತಲಾ 50 ರೂ. ಹೆಚ್ಚುವರಿ ಕೊಡುವುದಾಗಿ ಹೇಳಿದ್ದಾರೆ.

ಅದರಿಂದ ಕೋಪಗೊಂಡ ಅಶ್ವತ್ಥ್ ಏಕಾಏಕಿ ಸಹೋದರರ ಮೇಲೆ ಹಲ್ಲೆಗೆ ಮಾಡಲು ಆರಂಭಿಸಿದ್ದಾನೆ. ಅಮೋದ್‌ ಸಹೋದರರು ಆಟೋ ಇಳಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಬೆನ್ನಟ್ಟಿ ಹಿಡಿದು ಕೈಯಿಂದಲೇ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ವಿಚಾರ ತಿಳಿದ ಆರ್‌ಎಂಸಿ ಯಾರ್ಡ್‌ ಪೊಲೀಸರು ಸ್ಥಳಕ್ಕೆ ಬಂದು ಗಾಯಾಳುಗಳನ್ನು ಕೆ.ಸಿ.ಜನರಲ್‌ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅಮೋದ್‌ ಚಿಕಿತ್ಸೆ ಫ‌ಲಿಸದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ. ಬಳಿಕ ಸುಬ್ರಮಣ್ಯ ನಗರ ಠಾಣೆ ಪೊಲೀಸರು ಆಸ್ಪತ್ರೆಗೆ ಧಾವಿಸಿ ಆರೋಪಿ ಆಟೋ ಚಾಲಕ ಅಶ್ವತ್ಥ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.