ಎಎಸ್‌ಐ ಎದೆಗೆ ಒದ್ದ ಆಟೋ ಚಾಲಕ ಸೆರೆ


Team Udayavani, Mar 9, 2019, 6:27 AM IST

arrest.jpg

ಬೆಂಗಳೂರು: ಆಟೋಗೆ ದುಪ್ಪಟ್ಟು ಬಾಡಿಗೆ ಕೇಳಿದ್ದನ್ನು ಪ್ರಶ್ನಿಸಿದ್ದಕ್ಕೆ ಆಟೋ ಚಾಲಕನೊಬ್ಬ ಎಎಸ್‌ಐ ಎದೆಗೆ ಕಾಲಿನಿಂದ ಒದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರ್ಚ್‌ 6ರಂದು ರಾತ್ರಿ ಬಾಳೆಕುಂದ್ರಿ ಸರ್ಕಲ್‌ನಲ್ಲಿ ಘಟನೆ ನಡೆದಿದೆ.

ಈ ಕುರಿತು ನಗರ ಅಪರಾಧ ದಾಖಲಾತಿಗಳ ಸಂಗ್ರಹ ಘಟಕದ (ಸಿಸಿಆರ್‌ಬಿ) ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ ಕರಿಯಣ್ಣ ವಿ. (57)  ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿ ಮುಜಾಹಿದ್‌ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಎಎಸ್‌ಐ ಕರಿಯಣ್ಣ ಶಿವಾಜಿನಗರದಲ್ಲಿ ವಾಸವಿದ್ದು, ಬುಧವಾರ ರಾತ್ರಿ 8.30ರ ಸುಮಾರಿಗೆ ತಮ್ಮ ಸೊಸೆಯನ್ನು ಬಾಣಸವಾಡಿಯ ಆಸ್ಪತ್ರೆಗೆ ಕರೆದೊಯ್ಯಲು ಬಾಳೆಕುಂದ್ರಿ ಸರ್ಕಲ್‌ಗೆ ಬಂದು, ಮುಜಾಹಿದ್‌ನ ಆಟೋ ಹತ್ತಿದ್ದರು. ಈ ವೇಳೆ ಮುಜಾಹಿದ್‌, 200 ರೂ. ಆಗುತ್ತದೆ ಎಂದಿದ್ದಾನೆ. ನಿಗದಿತ ಬಾಡಿಗೆಗಿಂತ ದುಪ್ಪಟ್ಟು ಹಣ ಕೇಳುವುದೇಕೆ ಎಂದು ಎಎಸ್‌ಐ ಪ್ರಶ್ನಿಸಿದ್ದಾರೆ.

ಇಷ್ಟಕ್ಕೇ ಎಎಸ್‌ಐ ಮೇಲೆರಗಿದ ಮುಜಾಯಿದ್‌, ಕರಿಯಣ್ಣ ಅವರ ಎದೆಗೆ ಎರಡು ಬಾರಿ ಕಾಲಿನಿಂದ ಒದ್ದಿದ್ದಾನೆ. ಇದನ್ನು ಗಮನಿಸಿದ ಇನ್ನಿಬ್ಬರು ಆಟೋಚಾಲಕರು ಅಲ್ಲಿಗೆ ಬಂದು ಎಎಸ್‌ಐಗೇ ದಬಾಯಿಸಿ ಮುಜಾಯಿದ್‌ನನ್ನು ಅಲ್ಲಿಂದ ಕರೆದೊಯ್ದಿದ್ದಾರೆ.

ಘಟನೆಯಿಂದ ಆತಂಕಗೊಂಡ  ಕರಿಯಣ್ಣ ಅವರ ಸೊಸೆ, ಮನೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕುಟುಂಬ ಸದಸ್ಯರು, ಕರಿಯಣ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆಸ್ಪತ್ರೆಯಿಂದ ಬಂದ ಬಳಿಕ ಎಎಸ್‌ಐ ನೀಡಿದ ದೂರು ಆಧರಿಸಿ, ಆರೋಪಿ ಡಿ.ಜೆ.ಹಳ್ಳಿಯ ನಿವಾಸಿ ಮುಜಾಯಿದ್‌ನನ್ನು ಬಂಧಿಸಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಕುಡಿತದ ಅಮಲಿನಲ್ಲಿ ಕೃತ್ಯ: ಘಟನೆ ನಡೆದಾಗ ಆರೋಪಿ, ಮುಜಾಯಿದ್‌ ಮದ್ಯ ಸೇವಿಸಿದ್ದ. ದುಪ್ಪಟ್ಟು ಹಣ ಕೊಡಲು ಒಪ್ಪದೆ ಎಎಸ್‌ಐ ಕರಿಯಣ್ಣ ಅವರು ಬೇರೆ ಆಟೋದಲ್ಲಿ ಹೋಗಲು ಸಿದ್ಧರಾದರೂ ಬಿಟ್ಟಿರಲಿಲ್ಲ. ಜತೆಗೆ, “ಇವರನ್ನು ಆಟೋ ಹತ್ತಿಸಬೇಡಿ’ ಎಂದು ಇತರೆ ಆಟೋ ಚಾಲಕರಿಗೆ ಹೇಳಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಅಧಿಕಾರಿ ಹೇಳಿದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.