ಆಸ್ತಿ ದಾಖಲೆ ಮರಳಿಸಿದ ಆಟೋ ಚಾಲಕ


Team Udayavani, Jun 7, 2018, 11:58 AM IST

blore-5.jpg

ಬೆಂಗಳೂರು: ಮಹಿಳೆಯೊಬ್ಬರು ಆಟೋದಲ್ಲಿ ಮರೆತು ಹೋಗಿದ್ದ ಲಕ್ಷಾಂತರ ರೂ. ಮೌಲ್ಯದ ಆಸ್ತಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಪೊಲೀಸರಿಗೆ ತಲುಪಿಸುವ ಮೂಲಕ ಆಟೋ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಈ ದಾಖಲೆಗಳನ್ನು ಪೊಲೀಸ್‌ ಸಿಬ್ಬಂದಿ, ಮಾಲೀಕರಿಗೆ ತಲುಪಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಖಾಸಗಿ ಕಂಪನಿ ಉದ್ಯೋಗಿ ಸುನೀತಾ ಟೆಕ್ಕಂ ಎಂಬುವರು ಟ್ವೀಟರ್‌ ಹಾಗೂ ಫೇಸ್‌ಬುಕ್‌ನಲ್ಲಿ ಹೈಗ್ರೌಂಡ್ಸ್‌ ಸಂಚಾರ ಠಾಣೆ ಮುಖ್ಯ ಪೇದೆ ದಿನೇಶ್‌ಗೌಡ ಹಾಗೂ ಆಟೋ ಚಾಲಕ ಸೈಯದ್‌ ಮೊಹಮ್ಮದ್‌ರ ಪ್ರಾಮಾಣಿಕತೆ ಹಾಗೂ ಕರ್ತವ್ಯ ಪ್ರಜ್ಞೆಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಕಲ್ಯಾಣ ನಗರ ನಿವಾಸಿ ಸುನೀತಾ, ವಸಂತ ನಗರ ಮುಖ್ಯ ರಸ್ತೆಯಲ್ಲಿರುವ “ಜನಾಗ್ರಹ’ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಸೋಮವಾರ ಬೆಳಗ್ಗೆ ಕಲ್ಯಾಣನಗರದಿಂದ ವಸಂತನಗರಕ್ಕೆ ಸೈಯದ್‌ ಮೊಹಮ್ಮದ್‌ ಅವರ ಆಟೋದಲ್ಲಿ ಪ್ರಯಾಣಿಸಿದ್ದರು. ಕೆಲಸದೊತ್ತಡದಲ್ಲಿದ್ದ ಸುನೀತಾ ಅವರು, ಆಟೋದಿಂದ ಇಳಿಯುವಾಗ ತಮ್ಮ ಆಸ್ತಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಮರೆತು ಆಟೋದಲ್ಲೇ ಬಿಟ್ಟು ಹೋಗಿದ್ದಾರೆ. 

ಇತ್ತ ಆಟೋ ಚಾಲಕ ಸೈಯದ್‌ ಕೂಡ ಗಮನಿಸಿಲ್ಲ. ಮನೆಗೆ ಹೋದ ನಂತರ ದಾಖಲೆಗಳು ದೊರೆತಿವೆ. ಇತ್ತ ಸುನೀತಾ ಅವರು ಎಲ್ಲೆಡೆ ಹುಡುಕಾಟ ನಡೆಸಿದರೂ ದಾಖಲೆಗಳು ದೊರೆತಿರಲಿಲ್ಲ. ಮಂಗಳವಾರ ಬೆಳಗ್ಗೆ ಎಂದಿನಂತೆ ಚಾಲಕ ಸೈಯದ್‌ ಮೊಹಮ್ಮದ್‌ ಆಟೋ ಹೊರಗೆ ತೆಗೆದು ಬಾಡಿಗೆ ಅರಸಿ ಹೊರಟಿದ್ದಾರೆ. ಈ ವೇಳೆ ವಸಂತನಗರ ಮುಖ್ಯ ರಸ್ತೆಯಿಂದ ಪ್ಯಾಲೇಸ್‌ ರಸ್ತೆ ಕಡೆ ಹೋಗವ ಮಾರ್ಗ ಮಧ್ಯೆ ರಸ್ತೆ ಬದಿಯ ಹೋಟೆಲ್‌ವೊಂದರಲ್ಲಿ ತಿಂಡಿಗೆ ನಿಲ್ಲಿಸಿದ್ದರು.

ಇದೇ ವೇಳೆ ಅಲ್ಲೇ ಇದ್ದ ಹೈಗ್ರೌಂಡ್ಸ್‌ ಸಂಚಾರ ಠಾಣೆ ಮುಖ್ಯ ಪೇದೆ ದಿನೇಶ್‌ ಗೌಡಗೆ ತಮ್ಮ ಆಟೋದಲ್ಲಿ ಪತ್ತೆಯಾದ ದಾಖಲೆಗಳನ್ನು ನೀಡಿ, ಬಳಿಕ ಇಂದು (ಮಂಗಳವಾರ) ಯಾರೂ ಆಟೋ ಹತ್ತಿಲ್ಲ. ನಿನ್ನೆ (ಸೋಮವಾರ) ಯಾರೋ ಬಿಟ್ಟು ಹೋಗಿರುವ ಸಾಧ್ಯತೆಯಿದೆ. ದಯವಿಟ್ಟು ಅವರಿಗೆ ಹಿಂದಿರುಗಿಸಿ ಎಂದು ಮನವಿ ಮಾಡಿದ್ದರು. ಆ ದಾಖಲೆಗಳನ್ನು ಪರಿಶೀಲಿಸಿದಾಗ ಸುನೀತಾ ಅವರ ಪತಿ ಮೊಬೈಲ್‌ ನಂಬರ್‌ ಸಿಕ್ಕಿದ್ದು, ದಿನೇಶ್‌ ಆ ಸಂಖ್ಯೆಗೆ ಕರೆ ಮಾಡಿದ್ದಾರೆ.

ಬಳಿಕ ಹತ್ತಿರದಲ್ಲೇ ಇರುವ ಜನಾಗ್ರಹ ಕಚೇರಿಯಲ್ಲೇ ಸುನಿತಾ ಅವರು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದ ಮುಖ್ಯ ಪೇದೆ ದಿನೇಶ್‌ ಗೌಡ, ಎಲ್ಲ ದಾಖಲೆಗಳನ್ನು ಸುನೀತಾ ಅವರಿಗೆ ವಾಪಸ್‌ ಕೊಟ್ಟು, ಮತ್ತೂಮ್ಮೆ ಈ ರೀತಿ ಕಳೆದುಕೊಳ್ಳದಂತೆ ತಿಳಿ ಹೇಳಿದ್ದಾರೆ.

ಸುನೀತಾ ರಿಂದ ಅಭಿನಂದನೆ: ಇತ್ತ ಕಳೆದು ಕೊಂಡಿದ್ದ ದಾಖಲೆಗಳು ಸಿಕ್ಕ ಖುಷಿಯಲ್ಲಿದ್ದ ಸುನೀತಾ ಅವರು, ಮುಖ್ಯ ಪೇದೆ ದಿನೇಶ್‌ ಗೌಡ ಹಾಗೂ ಆಟೋ ಚಾಲಕ ಸೈಯದ್‌ ಮೊಹ  ಮ್ಮದ್‌ ಅವರ ಕರ್ತವ್ಯ ಪ್ರಜ್ಞೆ ಬಗ್ಗೆ ಮೆಚ್ಚುಗೆ
ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಸಮೇತ ಪೋಸ್ಟ್‌ ಹಾಕಿ, ಅಭಿನಂದನೆ ಸಲ್ಲಿಸಿದ್ದಾರೆ. ಹಾಗೇ, ಈ ಪೋಸ್ಟನ್ನು ಬೆಂಗಳೂರು ನಗರ ಪೊಲೀಸರು ಹಾಗೂ ಪೊಲೀಸ್‌ ಆಯುಕ್ತರ ಫೇಸ್‌ಬುಕ್‌, ಟ್ವಿಟರ್‌ ಖಾತೆಗಳಿಗೆ ಟ್ಯಾಗ್‌ ಮಾಡಿದ್ದಾರೆ.

ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ಸುನೀತಾ ಅವರು, “ಸಮಾಜದಲ್ಲಿ ಮಾನವೀಯ ಗುಣಗಳನ್ನು ಹೊಂದಿರುವ ಜನ ಇನ್ನು ಇದ್ದಾರೆ ಎಂಬುದಕ್ಕೆ ಈ ಇಬ್ಬರು ವ್ಯಕ್ತಿಗಳೇ ಸಾಕ್ಷಿ. ಈ ಇಬ್ಬರಿಗೂ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ,’ ಎಂದಿದ್ದಾರೆ.

ಡಿಎಲ್‌ ಕಳೆದುಕೊಂಡಿರುವ ಸೈಯದ್‌ ಈ ಹಿಂದೆಯೂ ಆಟೋ ಚಾಲಕ ಸೈಯದ್‌ ಮೊಹಮ್ಮದ್‌ ಪ್ರಾಮಾಣಿಕತೆ ಮರೆದಿದ್ದರು. ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಮೊಬೈಲ್‌, ಬ್ಯಾಗ್‌ ಹಾಗೂ ಕೆಲ ದಾಖಲೆಗಳನ್ನು ಸ್ಥಳೀಯ ಠಾಣೆಗೆ ಒಪ್ಪಿಸಿ ಬದ್ಧತೆ ತೋರಿದ್ದರು. ಆದರೆ, ವಿಪರ್ಯಾಸವೆಂದರೆ ಕಳೆದ ತಿಂಗಳು ಅವರೇ ತಮ್ಮ
ಚಾಲನಾ ಪರವಾನಿಗೆ ಹಾಗೂ ಇತರೆ ದಾಖಲೆಗಳನ್ನು ಕಳೆದುಕೊಂಡಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಗೆ ದೂರು ಸಹ ನೀಡಿದ್ದಾರೆ. ಆದರೆ, ಇದುವರೆಗೂ ಸಿಕ್ಕಿಲ್ಲ. ಒಂದು ವೇಳೆ ಪತ್ತೆಯಾದರೆ ಕೂಡಲೇ ಹತ್ತಿರದ ಠಾಣೆಗೆ ನೀಡವಂತೆ ಸುನೀತಾ ಅವರು ಕಾರ್ಯನಿರ್ವಹಿಸುತ್ತಿರುವ ಜನಾಗ್ರಹ ಸಂಸ್ಥೆ ತನ್ನ “ಐ ಚೆಂಜ್‌ ಮೈ ಸಿಟಿ’ ಎಂಬ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆ ಮೂಲಕ ಮನವಿ ಮಾಡಿದೆ.

ಟಾಪ್ ನ್ಯೂಸ್

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.