- Monday 16 Dec 2019
ಪ್ರಾಮಾಣಿಕತೆ ಮೆರೆದ ಆಟೋ ಚಾಲಕ
Team Udayavani, Jun 12, 2019, 3:03 AM IST
ಬೆಂಗಳೂರು: ಮಹಿಳಾ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಇದ್ದ ಬ್ಯಾಗ್ನ್ನು ಆಟೋ ಚಾಲಕರೊಬ್ಬರು ಪೊಲೀಸರಿಗೊಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಮೈಸೂರು ರಸ್ತೆಯ ಕಸ್ತೂರಿಬಾನಗರ ನಿವಾಸಿ, ಆಟೋ ಚಾಲಕ ಬಸವರಾಜು ಅವರ ಸಮಯ ಪ್ರಜ್ಞೆ ಮೆಚ್ಚಿ ಉತ್ತರ ವಿಭಾಗದ ಡಿಸಿಪಿ ಎನ್.ಶಶಿಕುಮಾರ್ ಹೂಗುಚ್ಚ ನೀಡಿ ಗೌರವಿಸಿದರು. ಅಲ್ಲದೆ, ಆರ್ಎಂಸಿ ಯಾರ್ಡ್ ಠಾಣಾಧಿಕಾರಿ ಕೆ.ಎಚ್.ಮಹೇಂದ್ರ ಕುಮಾರ್ ಐದು ಸಾವಿರ ರೂ. ನಗದು ಬಹುಮಾನ ವಿತರಿಸಿದರು.
ಸೋಮವಾರ ಮಧ್ಯಾಹ್ನ ಯಶವಂತಪುರದಲ್ಲಿ ರೂಪಾ ಎಂಬ ಮಹಿಳೆ ಬಸವರಾಜು ಅವರ ಆಟೋ ಹತ್ತಿದ್ದಾರೆ. ಗೊರಗುಂಟೆಪಾಳ್ಯದಲ್ಲಿ ಇಳಿದುಕೊಂಡ ಮಹಿಳೆ, ತಮ್ಮ ಬ್ಯಾಗ್ನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದರು. ನಂತರ ಬಸವರಾಜು ಶಿವಾಜಿನಗರದಲ್ಲಿ ಮತ್ತೂಬ್ಬ ಪ್ರಯಾಣಿಕರನ್ನು ಹತ್ತಿಸಿಕೊಂಡಾಗ ಮಹಿಳೆ ಬ್ಯಾಗ್ ಬಿಟ್ಟು ಹೋಗಿರುವುದು ಗೊತ್ತಾಗಿದೆ.
ಕೂಡಲೇ ಬ್ಯಾಗ್ನ್ನು ಪರಿಶೀಲಿಸಿದಾಗ ಅದರಲ್ಲಿ 35 ಗ್ರಾಂ ಚಿನ್ನಾಭರಣ, 35 ಸಾವಿರ ರೂ. ನಗದು ಹಾಗೂ ಮೌಲ್ಯಯುತ ದಾಖಲೆಗಳು ಇದ್ದವು. ಅಲ್ಲದೆ, ರೂಪಾ ಅವರ ಮೊಬೈಲ್ ನಂಬರ್ ಕೂಡ ಇತ್ತು. ರೂಪಾ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಅವರು ಕರೆ ಸ್ವೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಚಾಲಕ ಬಸವರಾಜು ಆ ಬ್ಯಾಗ್ನ್ನು ಆರ್ಎಂಸಿ ಯಾರ್ಡ್ ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಹೈದರಾಬಾದ್ ಮತ್ತು ಉತ್ತರ ಪ್ರದೇಶದ ಉನ್ನಾವ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಗಳು ದೇಶವನ್ನು ತಲ್ಲಣಗೊಳಿಸಿವೆ. ಮಹಾನಗರಗಳಲ್ಲಿ...
-
ಬೆಂಗಳೂರು: ನಗರದ ತ್ಯಾಜ್ಯ ಸಂಗ್ರಹದಲ್ಲಿ "ಪರಿಸರ ಸ್ನೇಹಿ' ವಾಹನಗಳನ್ನು ಪರಿಚಯಿಸಲು ಮುಂದಾಗಿರುವ ಬಿಬಿಎಂಪಿ, ಈ ನಿಟ್ಟಿನಲ್ಲಿ ಸಿಎನ್ಜಿ ಆಧಾರಿತ ವಾಹನಗಳನ್ನು...
-
ಬೆಂಗಳೂರು: ಕಬ್ಬನ್ ಉದ್ಯಾನವನದಲ್ಲಿ ರಾತ್ರಿ ಹಾಗೂ ಹಗಲು ವೇಳೆ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅಂತಹ ಚಟುವಟಿಕೆಗಳ ನಿಯಂತ್ರಣಕ್ಕೆ...
-
ಬೆಂಗಳೂರು: ನಗರದ ಪ್ರಮುಖ ಸಂಚಾರ ದಟ್ಟಣೆ ಇರುವ ಮಾರ್ಗ "ಸಿರ್ಸಿ ಫ್ಲೈಓವರ್' (ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ)ನಲ್ಲಿ ವಾಹನ ಸಂಚಾರ ಸೋಮವಾರದಿಂದ ಸುಮಾರು...
-
ಬೆಂಗಳೂರು: "ನಮ್ಮ ಮೆಟ್ರೋ' ಸೇವಾವಧಿ ಮಧ್ಯರಾತ್ರಿವರೆಗೆ ವಿಸ್ತರಣೆ ಮಾಡಲಾಗುತ್ತಿದೆ. ಇದರ ಬೆನ್ನಲ್ಲೇ ಮಾರ್ಗಗಳ ವಿಸ್ತರಣೆ ಹಾಗೂ ಅದಕ್ಕೆ ತಕ್ಕಂತೆ ರೈಲುಗಳ...
ಹೊಸ ಸೇರ್ಪಡೆ
-
ನಾಗರಾಜ ತೇಲ್ಕರ್ ದೇವದುರ್ಗ: ಪಟ್ಟಣದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಸ್ತರಣಾ ಕೇಂದ್ರದ ಕಟ್ಟಡಕ್ಕಾಗಿ 20 ಎಕರೆ ಭೂಮಿ ಕಾಯ್ದಿರಿಸಿದ್ದರೂ, ಕಟ್ಟಡಕ್ಕೆ...
-
ಹೈದರಾಬಾದ್ ಮತ್ತು ಉತ್ತರ ಪ್ರದೇಶದ ಉನ್ನಾವ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಗಳು ದೇಶವನ್ನು ತಲ್ಲಣಗೊಳಿಸಿವೆ. ಮಹಾನಗರಗಳಲ್ಲಿ...
-
ಬಾಗಲಕೋಟೆ: ದೇಶದ ಅತ್ಯುನ್ನತ ಭದ್ರತಾ ಪಡೆ, ಗಣ್ಯಾತಿಗಣ್ಯರಿಗೆ ಭದ್ರತೆ ಒದಗಿಸುವ ನ್ಯಾಷನಲ್ ಸೆಕ್ಯೂರಿಟಿ ಗಾರ್ಡ್ಗೆ (ರಾಷ್ಟ್ರೀಯ ಭದ್ರತಾ ಪಡೆ) ಮುಧೋಳ ನಾಯಿ...
-
ಶಿವಯ್ಯ ಮಠಪತಿ ಚಡಚಣ: ಕರ್ನಾಟಕ-ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಕಟ್ಟಕಡೆಯ ಶಿರನಾಳ ಗ್ರಾಮದ ಬಡ ಜನರು ಸ್ವಂತ ಜಾಗವಿಲ್ಲದೇ ಸರಕಾರಿ ಗೋಮಾಳಿನ ಕತ್ತಲಿನಲ್ಲೇ...
-
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜಾಮೀಯಾ ಮಿಲ್ಲಿಯಾ ಇಸ್ಲಾಮಿಯಾ ಯೂನಿರ್ವಸಿಟಿ ವಿದ್ಯಾರ್ಥಿಗಳು ಮತ್ತು ಪೊಲೀಸರ...