ಆಟೋ ಚಾಲಕರು, ತರಕಾರಿ ಮಾರಾಟಗಾರರಿಗೆ ನಿವೇಶನ
Team Udayavani, Mar 3, 2017, 12:35 PM IST
ಬೆಂಗಳೂರು: ಬಡ ಸಮುದಾಯದ ಆಟೋ ಚಾಲಕರು ಮತ್ತು ತರಕಾರಿ ಮಾರಾಟ ಮಾಡುವವರಿಗೆ ಮನೆ ಮತ್ತು ನಿವೇಶನಗಳನ್ನು ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ವಸತಿ ಸಚಿವ ಎಂ.ಕೃಷ್ಣಪ್ಪ ಹೇಳಿದ್ದಾರೆ.
ಬಾಪೂಜಿನಗರ ವಾರ್ಡ್ನ ನಾಯ್ಡು ರಂಗಮಂದಿರದ ಆವರಣದಲ್ಲಿ ಗುರುವಾರ “ಬೆಂಗಳೂರು ಒನ್’ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಆಟೋ ಚಾಲಕರು ಮತ್ತು ತರಕಾರಿ ಮಾರಾಟ ಮಾಡುವವರಿಗೆ ನಿವೇಶನ ಮತ್ತು ಮನೆಗಳನ್ನು ನೀಡುವ ಬಗ್ಗೆ ಮುಖ್ಯಮಂತ್ರಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ. ಕೊಳಗೇರಿಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.
ಬಾಪೂಜಿನಗರ ವಾರ್ಡ್ನಲ್ಲಿ ಒಳಚರಂಡಿ, ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಡಾಂಬರೀಕರಣ ಆಗದೆ ಇರುವ ರಸ್ತೆಗಳಲ್ಲಿ ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿ ದರು. ಮೇಯರ್ ಜಿ.ಪದ್ಮಾವತಿ ಮಾತನಾಡಿ, ನೂತನ “ಬೆಂಗಳೂರು ಒನ್’ ಕೇಂದ್ರದಲ್ಲಿ ಕಂದಾಯ, ಸಕಾಲ, ಆಧಾರ್, ಟೆಲಿಪೋನ್, ವಿದ್ಯುತ್ ಬಿಲ್ ಪಾವತಿ ಸೇರಿ 112 ಸೇವೆಗಳು ದೊರೆಯಲಿದ್ದು, ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ