ಪರ್ಸ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋಚಾಲಕ


Team Udayavani, May 27, 2019, 4:14 PM IST

benglre-tdy-7..

ಆಟೋದಲ್ಲಿ ಬಿಟ್ಟುಹೋಗಿದ್ದ ಪರ್ಸ್‌ ಅನ್ನು ಚಾಲಕ ಶ್ರೀಕಂಠಯ್ಯ, ಭಕ್ತಿಮಂತ್ರಿ ಅವರಿಗೆ ವಾಪಸ್‌ ನೀಡಿದರು.

ಬೆಂಗಳೂರು: ಯುವತಿಯೊಬ್ಬರು ಆಟೋದಲ್ಲಿ ಬಿಟ್ಟು ಹೋಗಿದ್ದ ಪರ್ಸ್‌ನ್ನು ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ತಲುಪಿಸಿ ಆಟೋಚಾಲಕ ಶ್ರೀಕಂಠಯ್ಯ ಪ್ರಾಮಾಣಿಕತೆ ಮೆರೆದಿದ್ದಾರೆ.

ಶ್ರೀಕಂಠಯ್ಯ ಅವರ ಪ್ರಾಮಾಣಿಕತೆಯನ್ನು ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್ ಕುಮಾರ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಶ್ಲಾಘಿಸಿದ್ದಾರೆ. ಅಲ್ಲದೆ, ಕಳೆದುಹೋಗಿದ್ದ ಪರ್ಸ್‌ ಹಿಂತಿರುಗಿಸಿದ್ದಕ್ಕೆ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿನಿ ಭಕ್ತಿಮಂತ್ರಿ ಅವರು ಶ್ರೀಕಂಠಯ್ಯ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಶನಿವಾರ ಸಂಜೆ ಮಹದೇವಪುರದ ಹತ್ತಿರದ ಮಾಲ್ನ ಬಳಿ ಭಕ್ತಿಮಂತ್ರಿ ಅವರು ಶ್ರೀಕಂಠಯ್ಯ ಅವರ ಆಟೋ ಹತ್ತಿ ಪ್ರಯಾಣಿಸಿ ಆಟೋ ಇಳಿದುಹೋಗಿದ್ದರು. ಅವರು ಆಟೋ ಇಳಿದು ಹೋದ ಬಳಿಕ ಶ್ರೀಕಂಠಯ್ಯ ಕೂಡ ಹಾಗೆಯೇ ಆಟೋ ಓಡಿಸಿದ್ದಾರೆ. ಈ ಬೇರೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವಾಗ ಸೀಟ್‌ನಲ್ಲಿಯೇ ಪರ್ಸ್‌ ಇರುವುದನ್ನು ನೋಡಿ, ಆ ಪರ್ಸ್‌ನ್ನು ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ತಲುಪಿಸಿದ್ದರು. ಬಳಿಕ ಪೊಲೀಸರು ಪರ್ಸ್‌ನಲ್ಲಿದ್ದ ಮೊಬೈಲ್ ನಂಬರ್‌ ಪಡೆದು, ಭಕ್ತಿಮಂತ್ರಿ ಅವರಿಗೆ ಕರೆ ಮಾಹಿತಿ ನೀಡಿ ಕರೆಸಿದ್ದಾರೆ. ಬಳಿಕ ಶ್ರೀಕಂಠಯ್ಯ ಅವರಿಂದಲೇ ಪರ್ಸ್‌ ವಾಪಸ್‌ ಕೊಡಿಸಿದ್ದಾರೆ.

ಪ್ರಯಾಣಿಕರ ಪರ್ಸ್‌ ವಾಪಸ್‌ ತಂದುಕೊಟ್ಟು ಪ್ರಾಮಾಣಿಕತೆ ಮೆರೆದ ಶ್ರೀಕಂಠಯ್ಯ ಅವರ ಕಾರ್ಯಯನ್ನು ಪೊಲೀಸರು ಮುಕ್ತಕಂಠದಿಂದ ಶ್ಲಾಘಿಸಿದ್ದು, ಅವರ ಈ ಕಾರ್ಯ ಉಳಿದವರಿಗೂ ಮಾದರಿಯಾಗುವಂತಹದ್ದು ಎಂದು ತಿಳಿಸಿದ್ದಾರೆ.

ಘಟನೆ ಬಗ್ಗೆ ಉದಯವಾಣಿ ಜತೆ ಮಾತನಾಡಿದ ಶ್ರೀಕಂಠಯ್ಯ, ಸುಮಾರು 25 ವರ್ಷಗಳಿಂದ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದೇನೆ. ಬೇರೆಯವರ ವಸ್ತು ನಮ್ಮದಲ್ಲ ಎಂಬ ಧ್ಯೇಯ ಪಾಲಿಸುತ್ತಿದ್ದು, ಪರ್ಸ್‌ ಕಂಡ ಕೂಡಲೇ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ತಲುಪಿಸಿದೆ. ವಿದ್ಯಾರ್ಥಿನಿಗೆ ಪರ್ಸ್‌ ವಾಪಸ್‌ ಕೊಟ್ಟ ತೃಪ್ತಿಯಿದೆ ಎಂದರು.

ಕಳೆದ ಐದು ವರ್ಷಗಳ ಹಿಂದೆ ನಾನು ಆಟೋ ಓಡಿಸುವ ಮಾರ್ಗದಲ್ಲಿಯೇ ಚೆಕ್‌ಬುಕ್‌ ಪುಸ್ತಕವೊಂದು ಬಿದ್ದಿತ್ತು. ಅದನ್ನು ಕೂಡ ಪೊಲೀಸರಿಗೆ ತಲುಪಿಸಿದ್ದೆ. ಈ ಸಂಧರ್ಭದಲ್ಲಿ ಪ್ರಶಂಸನಾ ಪತ್ರ ನೀಡಿದ್ದರು ಎಂದು ನೆನಪು ಹಂಚಿಕೊಂಡರು. ವಿದ್ಯಾರ್ಥಿನಿ ಭಕ್ತಿಮಂತ್ರಿ ಮಾತನಾಡಿ” ಪರ್ಸ್‌ ವಾಪಸ್‌ ನೀಡಿದ ಶ್ರೀಕಂಠಯ್ಯ ಅವರ ಗುಣದೊಡ್ಡದು. ಅವರಿಗೆ ಹೃದಯಪೂರ್ವಕ ಧನ್ಯವಾದ ತಿಳಿಸುತ್ತೇನೆ. ಪರ್ಸ್‌ನಲ್ಲಿ ಡೆಬಿಟ್ ಕಾರ್ಡ್‌ಗಳು ಹಾಗೂ ಗುರುತಿನ ಚೀಟಿಗಳು ಇದ್ದವು ವಾಪಸ್‌ ಸಿಕ್ಕಿದ್ದು ಸಂತಸವಾಯಿತು” ಎಂದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.