ಆಯುಷ್ 2ನೇ ಸುತ್ತಿನ ಸೀಟು ಹಂಚಿಕೆ
Team Udayavani, Sep 29, 2018, 6:10 AM IST
ಬೆಂಗಳೂರು: ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಉಳಿದಿರುವ, ಹೊಸದಾಗಿ ಸೇರ್ಪಡೆಗೊಂಡಿರುವ ಮತ್ತು ಹಂಚಿಕೆಯ ನಂತರ ರದ್ದಾಗಿರುವ ಆಯುರ್ವೇದ,ಯುನಾನಿ, ಯೋಗ, ನ್ಯಾಚುರೋಪಥಿ ಮತ್ತು ಹೋಮಿಯೋಪಥಿ ಸೀಟುಗಳ ಎರಡನೇ ಸುತ್ತಿನ ಹಂಚಿಕೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಕಾಲೇಜುವಾರು, ಕೋರ್ಸ್ವಾರು ಹಾಗೂ ವರ್ಗವಾರು ಲಭ್ಯವಿರುವ ಸೀಟುಗಳ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅಕ್ಟೋಬರ್ 1ರಿಂದ ದಾಖಲೆ ಪರಿಶೀಲನೆ ನಡೆಯಲಿದೆ. ಅ.10ರ ಬೆಳಗ್ಗೆ 11 ಗಂಟೆ ತನಕ ಆಪ್ಷನ್ ಎಂಟ್ರಿಗೆ ಅವಕಾಶ ಇದೆ. ಅದೇ ದಿನ ಸಂಜೆ 6ಕ್ಕೆ ಸೀಟು ಹಂಚಿಕೆ ನಡೆಯಲಿದೆ.ಸೀಟು ಪಡೆದ ಅಭ್ಯರ್ಥಿಗಳು ಶುಲ್ಕ ಪಾವತಿಸಿ, ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅ.5ರವರೆಗೂ ಅವಕಾಶ ಇದೆ. ಅ.6ರ ಸಂಜೆ 5.30ರೊಳಗೆ ಸಂಬಂಧಿಸಿದ ಕಾಲೇಜಿಗೆ ದಾಖಲಾಗಬೇಕು. ಮಾಹಿತಿಗಾಗಿ ಪ್ರಾಧಿಕಾರದ ವೆಬ್ಸೈಟ್ http://kea.kar.nic.in ನೋಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಪರೀಕ್ಷೆ ಮುಂದೂಡಿಕೆ: ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ನಲ್ಲಿ ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸರ್ಕಾರದ ಸೂಚನೆಯಂತೆ ಕೆಇಎ ಮುಂದೂಡಿದೆ. 2015ರಲ್ಲಿಯೇ ನೇಮಕಾತಿ ಆದೇಶ ಆಗಿದ್ದರೂ ಈವರೆಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆದಿಲ್ಲ. ಎರಡೆರೆಡು ಬಾರಿ ಅರ್ಜಿ ಆಹ್ವಾನ ಮಾಡಲಾಗಿದೆ. ಅ.11ರಿಂದ 23ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದಾಗಿಯೂ ಸೂಚನೆ ನೀಡಲಾಗಿತ್ತು. ಈಗ ಏಕಾಏಕಿ ಸರ್ಕಾರವೇ ಪರೀಕ್ಷಾ ದಿನಾಂಕವನ್ನು ಮುಂದೂಡಿದೆ ಮಾತ್ರವಲ್ಲದೆ, ಯಾವಾಗ ನಡೆಸುತ್ತೇವೆ ಎಂಬುದನ್ನೂ ಸ್ಪಷ್ಟಪಡಿಸಿಲ್ಲ.
ಅನುದಾನ ಬಿಡುಗಡೆ
ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಮೀಸಲಿಟ್ಟಿರುವ 450 ಕೋಟಿ ರೂ.ಗಳಲ್ಲಿ 150 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.ಮೂರು ವರ್ಷಗಳಲ್ಲಿ ಸರ್ಕಾರಿ ಪ್ರಾಥಮಿಕ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಕಟ್ಟಡ ದುರಸ್ತಿ, ಮರು ನಿರ್ಮಾಣ ಸೇರಿ ವಿವಿಧ ಕಾಮಗಾರಿಗಳಿಗೆ 450 ಕೋಟಿ.ರೂ.ಗಳನ್ನು ನೀಡಲು ಸರ್ಕಾರ ಒಪ್ಪಿಕೊಂಡಿತ್ತು. 2018-19ನೇ ಸಾಲಿಗೆ ಬಿಡುಗಡೆ ಮಾಡಿರುವ ಅನುದಾನವನ್ನು ಆರ್ಥಿಕ ವರ್ಷಾಂತ್ಯದೊಳಗೆ ಪೂರೈಸುವಂತೆಯೂ ಸರ್ಕಾರ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್