ವಿಧಾನಸೌಧ ಚಲೋ ಅಸ್ತ್ರಕ್ಕೆ ಎಫ್ಐಆರ್‌ ಬ್ರಹ್ಮಾಸ್ತ್ರ


Team Udayavani, Aug 18, 2017, 6:00 AM IST

BSY-FIR-17.jpg

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಭ್ರಷ್ಟಾಚಾರ ವಿಚಾರವನ್ನೇ ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಜಿದ್ದಾಜಿದ್ದಿಗೆ ಬಿದ್ದಿರುವ ಕಾಂಗ್ರೆಸ್‌ ಮತ್ತು ಬಿಜೆಪಿ ತಂತ್ರ-ಪ್ರತಿತಂತ್ರ ಹೆಣೆಯುತ್ತಿವೆ.

ಇದರ ಅಂಗವಾಗಿಯೇ ಭ್ರಷ್ಟಾಚಾರ ಆರೋಪ ಹೊತ್ತಿರುವ ಸಚಿವರಾದ ಡಿ.ಕೆ.ಶಿವಕುಮಾರ್‌ ಮತ್ತು ರಮೇಶ್‌ ಜಾರಕಿಹೊಳಿ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಶುಕ್ರವಾರ(ಇಂದು) ವಿಧಾನಸೌಧ ಚಲೋ ಪ್ರತಿಭಟನೆ ಹಮ್ಮಿಕೊಂಡಿದೆ. ಇದರ ಬೆನ್ನಲ್ಲೇ ಬಿಜೆಪಿ ನಾಯಕರ ವಿರುದ್ಧ ಎಸಿಬಿ ಅಸ್ತ್ರ ಪ್ರಯೋಗಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಶಿವರಾಮ ಕಾರಂತ ಬಡಾವಣೆಯಲ್ಲಿನ ಡಿನೋಟಿಫಿಕೇಶನ್‌ ಪ್ರಕರಣ ಸಂಬಂಧ ಎಸಿಬಿ ಮೂಲಕ ಎರಡು ಪ್ರತ್ಯೇಕ ಎಫ್ಐಆರ್‌ ದಾಖಲಿಸಿದೆ.

2009ರಿಂದ 2012ರ ಅವಧಿಯಲ್ಲಿ ಯಲಹಂಕ ಹೋಬಳಿಯ ಆವಲಹಳ್ಳಿ ಗ್ರಾಮದ ಸರ್ವೇ ನಂಬರ್‌ 109/1 ರಲ್ಲಿ 3 ಎಕರೆ 6 ಗುಂಟೆ ಜಮೀನು ಡಿನೋಟಿಫಿಕೇಶನ್‌ ಮಾಡಿದ ಸಂಬಂಧ ಯಡಿಯೂರಪ್ಪ, ಬಿಡಿಎ ಅಂದಿನ ಭೂಸ್ವಾಧೀನ ಉಪ ಆಯುಕ್ತ ಗೌರಿ ಶಂಕರ ಎಸ್‌.ಎನ್‌, ನಗರಾಭಿವೃದ್ಧಿ ಇಲಾಖೆಯ ಅಂದಿನ ಅಧೀನ ಕಾರ್ಯದರ್ಶಿ ಪ್ರೇಮಚಂದ್ರ, ಅಂದಿನ ಉಪಕಾರ್ಯದರ್ಶಿ ಬಸವರಾಜು, ನಗರಾಭಿವೃದ್ಧಿ ಇಲಾಖೆಯ ಅಪರ ಕಾರ್ಯದರ್ಶಿ ಸುಭೀರ್‌ ಹರಿಸಿಂಗ್‌ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದೆ.

ಬೆಂಗಳೂರು ನಗರ ವಿಭಾಗದ ಡಿವೈಎಸ್‌ಪಿ ಆ್ಯಂಟನಿ ಜಾನ್‌ ಜೆ.ಕೆ ಅವರು, ಇವರೆಲ್ಲರ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡು ತನಿಖೆ ಮುಂದುವರಿಸಿರುವುದಾಗಿ 23ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಜತೆಗೆ ಎಲ್ಲಾ ಆರೋಪಿಗಳಿಗೂ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಯಡಿಯೂರಪ್ಪ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಬಿಡಿಎ ಹಾಗೂ ನಗರಾಭಿವೃದ್ಧಿ ಅಧಿಕಾರಿಗಳ ಜೊತೆ ಸೇರಿ ಆವಲಹಳ್ಳಿ ವ್ಯಾಪ್ತಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಜಮೀನು ಡಿನೋಟಿಫಿಕೇಶನ್‌ ಮಾಡಿದ್ದು ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ಜನಸಾಮಾನ್ಯರ ವೇದಿಕೆಯ ಡಾ.ಡಿ ಅಯ್ಯಪ್ಪ ಎಸಿಬಿಗೆ ದೂರು ನೀಡಿದ್ದರು.

ಕಾಂಗ್ರೆಸ್‌ ಪ್ರತಿತಂತ್ರ?
ಐಟಿ ದಾಳಿಯನ್ನೇ ಪ್ರಮುಖವಾಗಿಟ್ಟುಕೊಂಡು ತಮ್ಮ ವಿರುದ್ಧ ಬಿಜೆಪಿ ಶುಕ್ರವಾರದಿಂದ ಒಂದು ವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಕ್ಕೆ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಸಹಿತ ಕಾಂಗ್ರೆಸ್‌ ನಾಯಕರು ಗರಂ ಆಗಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‌ ಹೈಕಮಾಂಡ್‌ ಸಹ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿಯ ಆಡಳಿತ ಕಾಲದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ ಬಿಜೆಪಿಯ ಸಚಿವರು, ಶಾಸಕರ ಭೂ ಹಗರಣಗಳು ಮತ್ತು ಭ್ರಷ್ಟಾಚಾರ ಪ್ರಕರಣಗಳನ್ನು ಬಯಲಿಗೆಳೆಯುವಂತೆ ಸೂಚನೆ ನೀಡಿದೆ ಎಂದು ಹೇಳಲಾಗಿದೆ.

ಹೈಕಮಾಂಡ್‌ನ‌ ಈ ನಿರ್ದೇಶನದಿಂದಾಗಿ ಸಚಿವ ಡಿ.ಕೆ.ಶಿವಕುಮಾರ್‌, ಬಿಜೆಪಿ ಕಾಲದ ಎಲ್ಲಾ ಹಗರಣಗಳ ದಾಖಲೆ ಮತ್ತು ಮಾಹಿತಿ ಸಂಗ್ರಹಿಸಲು ನುರಿತ ಆರ್‌ಟಿಐ ಕಾರ್ಯಕರ್ತರು ಮತ್ತು ನಿವೃತ್ತ ಪೊಲಿಸ್‌ ಅಧಿಕಾರಿಗಳ ತನಿಖಾ ತಂಡವನ್ನು ರಚಿಸಿದ್ದಾರೆ ಎಂದು ತಿಳಿದುಬಂದಿದೆ.

ಯಡಿಯೂರಪ್ಪ ವಿರುದ್ಧದ ಭೂ ಹಗರಣಗಳ ಆರೋಪ, ಕೇಂದ್ರ ಸಚಿವ ಅನಂತ ಕುಮಾರ್‌ ವಿರುದ್ಧವಿರುವ ಹುಡ್ಕೊ ಹಗರಣ ಆರೋಪ, ಮಾಜಿ ಡಿಸಿಎಂ ಆರ್‌.ಅಶೋಕ್‌ ವಿರುದ್ಧದ ಬಿಬಿಎಂಪಿ ವ್ಯಾಪ್ತಿಯಲ್ಲಿ ಬಗರ್‌ ಹುಕುಂ ಸಾಗುವಳಿ ಹೆಸರಿನಲ್ಲಿ ಅಕ್ರಮವಾಗಿ ಆಪ್ತರಿಗೆ ಜಮೀನು ಮಂಜೂರು ಮಾಡಿರುವ ಆರೋಪ, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರ ಕೆಎಚ್‌ಬಿ ಹಗರಣ, ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಕೆಐಎಡಿಬಿ, ಶಾಸಕರಾದ ಎಸ್‌.ಆರ್‌.ವಿಶ್ವನಾಥ್‌, ನಂದೀಶ್‌ ರೆಡ್ಡಿ ಹಾಗೂ ಮಾಜಿ ಶಾಸಕ ಸತೀಶ್‌ ರೆಡ್ಡಿ ಅವರ ಮೇಲಿರುವ ಭೂ ಕಬಳಿಕೆ ಆರೋಪ, ಶೋಭಾ ಕರಂದ್ಲಾಜೆ ಅವರು ಇಂಧನ ಇಲಾಖೆಯಲ್ಲಿ ಮಾಡಿದ್ದರೆನ್ನಲಾದ ಹಗರಣಗಳ ಬಗ್ಗೆ ಸಮಗ್ರ ದಾಖಲೆಗಳನ್ನು  ಸಂಗ್ರಹಿಸುವಂತೆ ತಂಡಕ್ಕೆ ಸೂಚಿಸಿದ್ದಾರೆ ಎನ್ನಲಾಗಿದೆ.

ಪ್ರತಿಭಟನೆ VS ಎಫ್ಐಆರ್‌
ಬಿಜೆಪಿ ರಾಜ್ಯ ಘಟಕ ಆಯೋಜಿಸಿರುವ ವಿಧಾನಸೌಧ ಚಲೋ ಮುನ್ನಾ ದಿನವೇ ಈ ಎಫ್ಐಆರ್‌ ಸಂಗತಿ ಬಯಲಾಗಿರುವುದು ನಾನಾ ಅನುಮಾನಗಳಿಗೆ ಕಾರಣವಾಗಿದೆ. ಆ.10 ರಂದೇ ಬಿಎಸ್‌ವೈ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಆದರೆ ಈಗ ಬಯಲು ಮಾಡಿರುವ ಹಿಂದೆ ಬಿಜೆಪಿಗೆ ತಿರುಗೇಟು ನೀಡುವ ತಂತ್ರವಿದೆ ಎಂದೇ ಹೇಳಲಾಗುತ್ತಿದೆ.

ಬಿಎಸ್‌ವೈ ವಿರುದ್ಧದ ಆರೋಪವೇನು?
ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಹೆಸರಘಟ್ಟ – ಯಲಹಂಕ ವ್ಯಾಪ್ತಿಯಲ್ಲಿ  19 ಸಾವಿರ ನಿವೇಶನಗಳ ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಬಿಡಿಎ 3546 ಎಕರೆ ಜಮೀನು ಸ್ವಾಧೀನ ಪಡೆಸಿಕೊಂಡಿತ್ತು.  ಈ ಪೈಕಿ ಯಡಿಯೂರಪ್ಪ ಕಾನೂನು ಬಾಹಿರವಾಗಿ 257 ಎಕರೆ ಡಿನೋಟಿಫಿಕೇಶನ್‌ ಮಾಡಿದ್ದಾರೆ ಎಂದು ಆರೋಪಿಸಿ ದೂರುದಾರರು ಆರೋಪಿಸಿದ್ದರು.

ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳು ಬಿಜೆಪಿ ನಾಯಕರ ಮೇಲಿದೆ. ಯಡಿಯೂರಪ್ಪನವರು ಚೆಕ್‌ ಮೂಲಕ ಲಂಚ ಪಡೆದಿರುವುದು ನಾವು ಸಾಬೀತುಪಡಿಸಿದ್ದೇವೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಯಾವುದಾದರೂ ಸಾಕ್ಷಿ ಇದ್ದರೆ, ದಾಖಲೆ ತೋರಿಸಲಿ. ಅದು ಬಿಟ್ಟು ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ.
– ಡಾ. ಜಿ. ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ

ಅಮಿತ್‌ ಶಾ ಹಿತವಚನದಿಂದಾಗಿ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ನನ್ನ ಮೇಲಿನ ಐಟಿ ದಾಳಿ ಹಿಂದಿನ ಕುತಂತ್ರ ಎಲ್ಲರಿಗೂ ಗೊತ್ತಿದೆ. ಬಿಜೆಪಿ ಪ್ರತಿಭಟನೆಗೆ ಸೂಕ್ತ ಸಂದರ್ಭದಲ್ಲಿ ಉತ್ತರಿಸುತ್ತೇನೆ. ಬಿಜೆಪಿಯವರು ಏನು ಬೇಕಾದರೂ ಮಾಡಿಕೊಳ್ಳಲಿ. ಆದರೆ, ಕಾಂಗ್ರೆಸ್‌ ದ್ವೇಷ ರಾಜಕಾರಣ ಮಾಡುವುದಿಲ್ಲ. ನನಗೂ ಸಾಕಷ್ಟು ವಿಷಯಗಳು, ಮಾಹಿತಿಗಳು ಗೊತ್ತಿವೆ. ಅದನ್ನು ಸಂದರ್ಭ ಬಂದಾಗ ಹೇಳುತ್ತೇನೆ.
– ಡಿ.ಕೆ. ಶಿವಕುಮಾರ್‌, ಇಂಧನ ಸಚಿವ.

ಯಡಿಯೂರಪ್ಪವಿರುದ್ಧ ಹೊಸ ಎಫ್ಐಆರ್‌ ದಾಖಲಿಸಿರುವುದು ರಾಜಕೀಯ ದ್ವೇಷದ ಕ್ರಮ, ಅಮಿತ್‌ಶಾ ರಾಜ್ಯಕ್ಕೆ ಬಂದು ಹೋದ ಮೇಲೆ ಕಾಂಗ್ರೆಸ್‌ ಭಯಭೀತವಾಗಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸದಂತೆ ಬೆದರಿಸಲು ಈ ರೀತಿ ಮಾಡಲಾಗುತ್ತಿದೆ. ಇಡೀ ಪಕ್ಷ ಯಡಿಯೂರಪ್ಪಜತೆಗಿದೆ. ಶೀಘ್ರವೇ ಕಾಂಗ್ರೆಸ್‌ನವರು ಇದರ ಪ್ರತಿಫ‌ಲ ಅನುಭವಿಸಲಿದ್ದಾರೆ.
– ಆರ್‌. ಅಶೋಕ್‌, ಮಾಜಿ ಉಪ ಮುಖ್ಯಮಂತ್ರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.