ಬಾಬಾಬುಡನ್‌ಗಿರಿ : ಮುಜಾವರ್‌ ನೇಮಕ ಸಮರ್ಥನೆ


Team Udayavani, Sep 27, 2018, 6:35 AM IST

high-court-karnataka.jpg

ಬೆಂಗಳೂರು: ಬಾಬಾಬುಡನ್‌ಗಿರಿಯ ದತ್ತಪೀಠದಲ್ಲಿ ಪೂಜಾವಿಧಿಗಳನ್ನು ನೇರವೇರಿಸಲು “ಮುಜಾವರ್‌’ (ಮುಸ್ಲಿಂ ಅರ್ಚಕ) ನೇಮಕ ಮಾಡಿರುವ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿರುವ ರಾಜ್ಯ ಸರ್ಕಾರ, ಈ ಸಂಬಂಧ ಹೊರಡಿಸಿರುವ ಆದೇಶದಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಬುಧವಾರ ಹೈಕೋರ್ಟ್‌ಗೆ  ಹೇಳಿದೆ.

ಮುಜಾವರ್‌ಗೆ ಮಾತ್ರ ಪೂಜೆಗೆ ಅವಕಾಶ ನೀಡಿರುವ ಸರ್ಕಾರದ ಆದೇಶವ‌ನ್ನು ಪ್ರಶ್ನಿಸಿ ಶ್ರೀಗುರು ದತ್ತಾತ್ರೇಯಪೀಠ ದೇವಸ್ಥಾನ ಸಂವರ್ಧನಾ ಸಮಿತಿಯ ಟ್ರಸ್ಟಿ ನಾಗರಾಜ್‌ ಅರಸ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾ. ಬಿ.ವಿ. ನಾಗರತ್ನ ಅವರ ಏಕಸದಸ್ಯ ನ್ಯಾಯಪೀಠಕ್ಕೆ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ದಿನೇಶ್‌ ರಾವ್‌ ಅವರು ಈ ವಿಷಯ ಸ್ಪಷ್ಟಪಡಿಸಿದರು.

ವಿಚಾರಣೆ ವೇಳೆ ” ಈ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದ ಉಪಸಮಿತಿಯ ವರದಿ ಆಧರಿಸಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ಅವರ ನೇತೃತ್ವದ ತಜ್ಞರ ಸಮಿತಿ ಶಿಫಾರಸಿನಂತೆ ಮೌಲ್ವಿ ಸೈಯದ್‌ ಗೌಸ್‌ ಮೊಹಿದ್ದೀನ್‌ ಅವರನ್ನು ದತ್ತಪೀಠದಲ್ಲಿ ಪೂಜಾ ವಿಧಿ ವಿಧಾನ ನೆರೆವೇರಿಸಲು ಮುಜಾವರ್‌ ಆಗಿ ನೇಮಿಸಲಾಗಿದೆ. ಈಗ ಅದರಲ್ಲಿ ಬದಲಾವಣೆ ಮಾಡುವ ಅವಕಾಶವಿಲ್ಲ’ ಎಂದರು.

ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲರು ಹಿಂದೂಗಳಿಗೆ ಪೂಜೆಯ ಹಕ್ಕಿದೆ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ ಎಂದರು. ಹಾಗಿದ್ದಲ್ಲಿ, ಆ ಕುರಿತ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಅ.9ಕ್ಕೆ ಮುಂದೂಡಿತು.

ಈ ಪ್ರಕರಣದಲ್ಲಿ ಕೋಮುಸಾಮರಸ್ಯ ಮತ್ತು ಸೌಹಾರ್ದತೆ ಕಾಪಾಡುವುದು ನ್ಯಾಯಾಲಯದ ಕಾಳಜಿಯಾಗಿದೆ ಎಂದು ಪುನರುತ್ಛರಿಸಿದ ನ್ಯಾಯಪೀಠ, ಹಿಂದೂ-ಮುಸ್ಲಿಂ ಎರಡೂ ಧರ್ಮಗಳ ನಡುವೆ ಸಾಮರಸ್ಯ ಕಾಯ್ದುಕೊಳ್ಳುವಂತಹ ಪರಿಹಾರ ಕಂಡುಕೊಳ್ಳುವಂತೆ ಸರ್ಕಾರ ಮತ್ತು ಅರ್ಜಿದಾರರಿಗೆ ಸಲಹೆ ನೀಡಿತು. ಅದೇ ರೀತಿ ಹಿಂದೂ ದೇವರಿಗೆ ಮುಸ್ಲಿಂ ಮುಜಾವರ್‌ ಪೂಜೆ ಮಾಡುವುದರಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆ, ಮುಜುಗರ ಆಗಲಿದೆ ಎಂದು ನ್ಯಾಯಪೀಠ ಎಂದೂ ಸಹ ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.