ಮತ್ತೆ ಜಾಹೀರಾತು ಫ‌ಲಕಗಳ ಪರ್ವ


Team Udayavani, Aug 8, 2019, 3:08 AM IST

mathe

ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ರೂಪಿಸಿರುವ “ಬಿಬಿಎಂಪಿ ಜಾಹೀರಾತು ಕರಡು-2019’ಕ್ಕೆ ಆಕ್ಷೇಪಣೆ ಸಲ್ಲಿಸಲು ಇದ್ದ ಕೊನೆಯ ಅವಕಾಶವನ್ನೂ ಬಿಬಿಎಂಪಿ ಕಳೆದುಕೊಂಡಿದೆ. ಇದರಿಂದ ಇನ್ನು ಮುಂದೆ ನಗರದಲ್ಲಿ ಮತ್ತೆ ಎಲ್ಲೆಂದರಲ್ಲಿ ಜಾಹೀರಾತು ಫ‌ಲಕಗಳು ತಲೆ ಎತ್ತುವ ಸಾಧ್ಯತೆ ಇದ್ದು, ನಗರಾಭಿವೃದ್ಧಿ ಇಲಾಖೆಯ ಹೊಸ ಕರಡಿನಲ್ಲಿ ರಾಜಭವನ, ವಿಧಾನಸೌಧ ಮತ್ತು ವಿಕಾಸಸೌಧ ಸೇರಿದಂತೆ ಪ್ರಮುಖ ನಿಷೇಧಿತ ಸ್ಥಳಗಳಲ್ಲೂ ಜಾಹೀರಾತು ಫ‌ಲಕ ಅಳವಡಿಸಲು ಅವಕಾಶ ಕಲ್ಪಿಸಲಾಗಿದೆ.

ಬಿಬಿಎಂಪಿ ರಚಿಸಿದ್ದ “ಹೊರಾಂಗಣ ಸೈನೇಜ್‌ ಮತ್ತು ಸಾರ್ವಜನಿಕ ಸಂದೇಶ ನೀತಿ ಹಾಗೂ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಬೈಲಾ-2018′ ಕಡೆಗಣಿಸಿ, ನಗರಾಭಿವೃದ್ಧಿ ಇಲಾಖೆ ಹೊಸ ಕರಡು ರಚಿಸಿದೆ. ನಗರಾಭಿವೃದ್ಧಿ ಇಲಾಖೆಯ ಈ ನಡೆ ಪಾಲಿಕೆ ಮತ್ತು ನಗರಾಭಿವೃದ್ಧಿ ಇಲಾಖೆಯ ನಡುವೆ ಸಂರ್ಘ‌ಷಕ್ಕೂ ಕಾರಣವಾಗಿದೆ.

ನಗರಾಭಿವೃದ್ಧಿ ಇಲಾಖೆಯು ಜು.24ರಂದು ಕರ್ನಾಟಕ ರಾಜ್ಯ ಪತ್ರದಲ್ಲಿ “ಬಿಬಿಎಂಪಿ ಜಾಹೀರಾತು ಕರಡು-2019′ ನಿಯಮವನ್ನು ಪ್ರಕಟಿಸಿತ್ತು. ಇದಕ್ಕೆ 15 ದಿನಗಳ ಒಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸುವುದಕ್ಕೆ ಕಲಾವಕಾಶವನ್ನೂ ನೀಡಿತ್ತು. ಇದರ ಅನ್ವಯ ಆ.8ರ ಒಳಗಾಗಿ ಆಕ್ಷೇಪಣೆ ಸಲ್ಲಿಸಬೇಕಾಗಿತ್ತು. ಈ ಸಂಬಂಧ ಕೌನ್ಸಿಲ್‌ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಬೇಕಿತ್ತು.

ನಗರಾಭಿವೃದ್ಧಿ ಇಲಾಖೆಯ ತೀರ್ಮಾನವನ್ನು ವಿರೋಧಿಸಲು ಹಾಗೂ ಜಾಹೀರಾತು ನಿಯಮಾವಳಿ ಬಗ್ಗೆ ಚರ್ಚೆ ಮಾಡುವುದಕ್ಕಾಗಿಯೇ ಬಿಬಿಎಂಪಿ ಜು.29ರಂದು ವಿಶೇಷ ಕೌನ್ಸಿಲ್‌ ಸಭೆಯನ್ನೂ ಕರೆದಿತ್ತು. ಜತೆಗೆ ಜು.30ರಂದು ನಡೆದ ಕೌನ್ಸಿಲ್‌ ಸಭೆಯಲ್ಲೂ ಈ ಬಗ್ಗೆ ಸುದೀರ್ಘ ಚರ್ಚೆ ನಡೆದಿತ್ತು. ಸಭೆಯಲ್ಲಿ ಜಾಹೀರಾತು ಕರಡಿಗೆ ಎಲ್ಲ ಪಕ್ಷದ ಸದಸ್ಯರೂ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಯಾವುದೇ ನಿರ್ಣಯ ತೆಗೆದುಕೊಂಡಿರಲಿಲ್ಲ.

ಆದರೆ, ಮೈತ್ರಿ ಸರ್ಕಾರದ ಅವಧಿಯಲ್ಲಿ ರಚನೆಯಾಗಿದ್ದ “ಬಿಬಿಎಂಪಿ ಜಾಹೀರಾತು ಕರಡು -2019’ಕ್ಕೆ ಆಡಳಿತ ಪಕ್ಷದ ಕೆಲವು ನಾಯಕರು ಪರೋಕ್ಷವಾಗಿ ಬೆಂಬಲಿಸಿದ್ದರು. ಒಮ್ಮತದ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಾಗದೆ ಇರುವುದರಿಂದ ಮತ್ತೆ ಸಭೆ ಕರೆಯಲಾಗುವುದು ಎಂದು ಪಾಲಿಕೆಯ ಆಡಳಿತ ಪಕ್ಷದ ನಾಯಕರು ಹೇಳಿದ್ದರು. ಆದರೆ, ಈಗ ಸಭೆಯನ್ನೂ ಕರೆಯದೆ, ಪಾಲಿಕೆಯಲ್ಲಿ ಯಾವ ನಿರ್ಣಯವನ್ನೂ ತೆಗೆದುಕೊಳ್ಳದೆ ಪರೋಕ್ಷವಾಗಿ ಹೊಸ ಬೈಲಾ ಜಾರಿಗೆ ಬರುವಂತಾಗಿದೆ.

ಆಡಳಿತ ಪಕ್ಷದ ವಾದವೇನು?: ಈಗಾಗಲೇ ಬಿಬಿಎಂಪಿ ಜಾಹೀರಾತು ಬೈಲಾ ಸಿದ್ಧಪಡಿಸಿ ಜಾರಿ ಮಾಡಿದೆ. ಅದರಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುವ ಸ್ಕೈ ವಾಕ್‌, ಬಸ್‌ ನಿಲ್ದಾಣ ಹಾಗೂ ಶೌಚಾಲಯಗಳ ಬಳಿ ಖಾಸಗಿ ಜಾಹೀರಾತಿಗೆ ಅವಕಾಶ ನೀಡಿದೆ. ಈ ಕುರಿತು ಚರ್ಚೆಯಾಗಬೇಕಿದೆ.

ವಿರೋಧ ಪಕ್ಷದ ವಾದವೇನು?: ಜಾಹೀರಾತು ಮಾಫಿಯಾಗೆ ಸಹಾಯ ಮಾಡುವ ಉದ್ದೇಶದಿಂದಲೇ ನಿರ್ಣಯ ತೆಗೆದುಕೊಳ್ಳುವುದಕ್ಕೆ ಆಡಳಿತ ಪಕ್ಷ ನಗರಾಭಿವೃದ್ಧಿ ಇಲಾಖೆ ರಚಿಸಿದ್ದ ಜಾಹೀರಾತು ಕರಡು ಬಗ್ಗೆ ಆಕ್ಷೇಪಣೆ ಸಲ್ಲಿಸಲು ತಡಮಾಡಿದೆ. ಆ ಮೂಲಕ ನಗರಾಭಿವೃದ್ಧಿ ಇಲಾಖೆ ರೂಪಿಸಿರುವ ಕರಡು ಜಾರಿಗೆ ಪರೋಕ್ಷ ಬೆಂಬಲ ನೀಡಿದೆ.

ಜಾಹೀರಾತಿಗೆ ಸಂಬಂಧಿಸಿದಂತೆ ಪಾಲಿಕೆ ಸಭೆಯಲ್ಲಿ ಬಿಬಿಎಂಪಿ ಸದಸ್ಯರು ಚರ್ಚೆ ಮಾಡಿರುವ ಸಂಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ.
-ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಜಾಹೀರಾತು ಮಾಫಿಯಾದೊಂದಿಗೆ ಆಡಳಿತ ಪಕ್ಷದ ಸದಸ್ಯರು ನೇರವಾಗಿ ಶಾಮೀಲಾಗಿದ್ದಾರೆ. ಈ ಉದ್ದೇಶದಿಂದಲೇ ನಿರ್ಣಯ ತೆಗೆದುಕೊಂಡಿಲ್ಲ. ಇದನ್ನು ಸರ್ಕಾರದ ಗಮನಕ್ಕೆ ತರಲಾಗುವುದು.
-ಪದ್ಮನಾಭ ರೆಡ್ಡಿ, ವಿರೋಧ ಪಕ್ಷದ ನಾಯಕ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.