ಬಾಹುಬಲಿ ಕಾಫಿ ಟೇಬಲ್ ಬುಕ್ ಬಿಡುಗಡೆ
Team Udayavani, Feb 23, 2018, 6:00 AM IST
ಬೆಂಗಳೂರು: ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಮಹಾಮಸ್ತಕಾಭಿಷೇಕದ ಅಂಗವಾಗಿ “ಉದಯವಾಣಿ’ ಹೊರತಂದಿರುವ ಬಾಹುಬಲಿ ಕುರಿತ ಅತ್ಯಾಕರ್ಷಕ ಕೃತಿಯನ್ನು (ಕಾಫಿ ಟೇಬಲ್ ಬುಕ್) ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಬಿಡುಗಡೆಗೊಳಿಸಿದರು.
ಅಧಿಕೃತ ನಿವಾಸ ಕಾವೇರಿಯಲ್ಲಿ ಕೃತಿ ಬಿಡುಗಡೆಗೊಳಿಸಿ ವಿಶ್ವದ ಗಮನ ಸೆಳೆದಿರುವ ಮಹಾಮಸ್ತಕಾಭಿಷೇಕದ ಪ್ರಯುಕ್ತ “ಉದಯವಾಣಿ’ ಪತ್ರಿಕೆಯು ವಿಶೇಷ ಕೃತಿ ಹೊರತಂದಿರುವುದು ಶ್ಲಾಘನೀಯ ಎಂದು ಹೇಳಿದರು.
ಶ್ರವಣಬೆಳಗೊಳ ಹಾಗೂ ಬಾಹುಬಲಿ ಇತಿಹಾಸದ ಸಮಗ್ರ ಚಿತ್ರಣ ನೀಡುವುದರ ಜತೆಗೆ ಬಾಹುಬಲಿ ಮೂರ್ತಿ, ಮಹಾಮಸ್ತಕಾಭಿಷೇಕ, ಆ ಪರಿಸರದ ಧಾರ್ಮಿಕ ಹಾಗೂ ಐತಿಹಾಸಿಕ ಸ್ಥಳಗಳ ಅಂದವಾದ ಚಿತ್ರ ಒಳಗೊಂಡಿರುವುದು ಕೃತಿಯ ಮೆರುಗು ಹೆಚ್ಚಿಸಿದೆ ಎಂದು ತಿಳಿಸಿದರು.
ಶ್ಲಾಘನೆ
ಇದೇ ಸಂದರ್ಭದಲ್ಲಿ ಶ್ರವಣಬೆಳಗೊಳದಲ್ಲಿ ಕೃತಿ ಬಿಡುಗಡೆಗೊಳಿಸಿದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಇದೊಂದು ಕಲಾತ್ಮಕ ಕೃತಿ ಎಂದು ಬಣ್ಣಿಸಿದರು.
ಉದಯವಾಣಿಯ ಈ ಪ್ರಯತ್ನ ಶ್ರೀ ಕ್ಷೇತ್ರದ ಇತಿಹಾಸದ ಪುಟದಲ್ಲಿ ದಾಖಲಾಗಲಿದೆ. ಅಸಂಖ್ಯಾತ ಭಕ್ತ ಸಮೂಹಕ್ಕೆ ಇದು ಮೆಚ್ಚುಗೆಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ತರಂಗ ವ್ಯವಸ್ಥಾಪಕ ಸಂಪಾದಕರಾದ ಡಾ. ಸಂಧ್ಯಾ ಪೈ ಅವರಿಗೆ ಸಂದೇಶ ರವಾನಿಸಿದರು.
ಮಣಿಪಾಲ್ ಮೀಡಿಯಾ ಸಮೂಹದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನೋದ್ಕುಮಾರ್, ಉದಯವಾಣಿ ಬೆಂಗಳೂರು ಆವೃತ್ತಿ ಸಂಪಾದಕ ಶಿವಸುಬ್ರಹ್ಮಣ್ಯ ಕೆ. ಉಪಸ್ಥಿತರಿದ್ದರು. “ಬಾಹುಬಲಿ’ ಕಾಫಿ ಟೇಬಲ್ ಬುಕ್ 152 ಪುಟಗಳನ್ನು ಒಳಗೊಂಡಿದೆ.
Video:FAKKRUDHIN H
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!