ಮುಖ್ಯಮಂತ್ರಿ ಬಾಲ ಸೇವಾ ಯೋಜನೆ: ಸ್ವಾಗತಾರ್ಹ
Team Udayavani, May 30, 2021, 5:56 PM IST
ಬೆಂಗಳೂರು: ಕೊರೊನಾ ಸೋಂಕಿನಿಂದ ತಂದೆ, ತಾಯಿಗಳನ್ನು ಕಳೆದುಕೊಂಡ ಮಕ್ಕಳಿಗಾಗಿ ಕೇಂದ್ರ ಹಾಗೂರಾಜ್ಯ ಸರ್ಕಾರ ಆರ್ಥಿಕ ನೆರವಿನಸಹಾಯ ಹಸ್ತ ಚಾಚಿರುವುದುಸ್ವಾಗತಾರ್ಹ. ಮಹತ್ವದ ಯೋಜನೆಘೋಷಣೆ ಮಾಡಿರುವ ಪ್ರಧಾನಿಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಸಚಿವ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕೊರೊನಾ ಸೋಂಕಿನಿಂದ ಬಹಳಷ್ಟು ಮಕ್ಕಳು ತಂದೆ,ತಾಯಿಗಳನ್ನು ಕಳೆದುಕೊಂಡಿದ್ದಾರೆ.ಅಂತಹ ಮಕ್ಕಳನ್ನು ನಮ್ಮ ಇಲಾಖೆಗುರುತಿಸಿ ಅವರಿಗೆ ನೆರವು ನೀಡಲುಈಗಾಗಲೇ ತೀರ್ಮಾನ ಮಾಡಿದೆ.
ಅನಾಥ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಾಲ ಸೇವಾ ಯೋಜನೆ ಮೂಲಕ ಪ್ರತಿತಿಂಗಳು 3500 ರೂ. ಸಹಾಯ ಧನ ನೀಡುವಮೂಲಕ ಅನಾಥ ಮಕ್ಕಳ ಬಾಳಿಗೆ ಆಶಾಕಿರಣವಾಗಿ ಹೊರ ಹೊಮ್ಮಿದ್ದಾರೆ ಎಂದು ಹೇಳಿದ್ದಾರೆ.