ಬಂಜೆತನ ಸಮಸ್ಯೆ ನಿವಾರಿಸಿದರೆ ಸಮತೋಲನ


Team Udayavani, May 8, 2019, 3:01 AM IST

banjetana

ಬೆಂಗಳೂರು: ತಾಯ್ತತನದ ಕನಸು ಕಾಣುತ್ತಿರುವ ಸ್ತ್ರೀಯರಲ್ಲಿ ಬಂಜೆತನ ಎಂಬ ಸಮಸ್ಯೆ ಎದುರಾದರೆ ಮಾನಸಿಕ ಸಮತೋಲನ ಕಳೆದುಕೊಳ್ಳುವುದಲ್ಲದೆ, ಬದುಕಿನಲ್ಲಿ ನೆಮ್ಮದಿ ಕಳೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಡಾ: ರಮಾಸ್‌ ಟೆಸ್ಟ್‌ ಟ್ಯೂಬ್‌ ಬೇಬಿ ಸೆಂಟರ್‌ ಸಂಸ್ಥಾಪಕಿ ಮತ್ತು ಐವಿಎಫ್‌ ತಜ್ಞೆ ಡಾ: ಪಿ. ರಮಾ ದೇವಿ ತಿಳಿಸಿದ್ದಾರೆ.

ಇಂದಿರಾನಗರದ ಶಾಖೆಯ 6ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, 27 ವರ್ಷಗಳ ಹಿಂದೆ ಹೈದರಾಬಾದ್‌ನಲ್ಲಿ ಡಾ. ರಮಾಸ್‌ ಇನ್ಸ್‌ಟಿಟ್ಯೂಟ್‌ ಫಾರ್‌ ಫರ್ಟಿಲಿಟಿ ಸೆಂಟರ್‌ ಆರಂಭಿಸಿದ್ದೆವು. ಅದು ಇದೇ ದಿನವಾದ್ದರಿಂದ ರಮಾಸ್‌ನ 28ನೇ ವರ್ಷಾಚರಣೆಯೂ ಇಂದೇ ಆಗಿದೆ.

ಇಂದಿನ ನಾಗರಿಕರು ತಮ್ಮ ಜೀವನ ಶೈಲಿಯನ್ನು ಸ್ವತ್ಛ, ಸುಂದರ ಹಾಗೂ ಆರೋಗ್ಯವಾಗಿರಿಸಿಕೊಳ್ಳದೆ ಒತ್ತಡಗಳ ಕೂಟ ಮಾಡಿಕೊಂಡು ನೆಮ್ಮದಿ ಹಾಳು ಮಾಡಿಕೊಳ್ಳುತ್ತಿದ್ದಾರೆ. ಪರಿಣಾಮವಾಗಿ ಬಂಜೆತನ, ಗರ್ಭಕೋಶ ಹಾಗೂ ಇನ್ನಿತರ ಸಮಸ್ಯೆಗಳಿಗೆ ಒಳಗಾಗುತಿದ್ದಾರೆ.

ಹಾಗಂತ ಬಂಜೆತನ ಎಂಬುದು ದೊಡ್ಡ ಸಮಸ್ಯೆಯಲ್ಲ ಹಾಗೂ ಇದು ಕೇವಲ ಮಹಿಳೆಯರಲ್ಲಿ ಮಾತ್ರವಲ್ಲ. ಪುರುಷರಲ್ಲೂ ಉಂಟು. ಗರ್ಭಕೋಶದ ಸಮಸ್ಯೆಗಳಿಗೆ ಐವಿಎಫ್‌ ಚಿಕಿತ್ಸೆ ಮಾತ್ರವೇ ಪರಿಹಾರವಲ್ಲ. ಆಹಾರಶೈಲಿ, ಆರೋಗ್ಯಕರ ವಾತಾವರಣ, ಒತ್ತಡ ನಿಯಂತ್ರಣ, ಯೋಗ, ಧ್ಯಾನ, ವ್ಯಾಯಾಮದಿಂದಲೂ ಸರಿಪಡಿಸಬಹುದು ಎಂದರು.

ಈ ವೇಳೆ ಸೆಂಟರ್‌ನ ಸಿಇಒ ಡಾ. ರಾಖಿ ಮಿಶ್ರಾ ಮಾತನಾಡಿ, ದೈನಂದಿನ ಸಮಸ್ಯೆಗಳು, ಪತಿ, ಪತ್ನಿ ಹೊಂದಾಣಿಕೆಯಲ್ಲಿ ಕೊರತೆ, ಸಂಬಂಧಗಳ ಬಗ್ಗೆ ಅಸಡ್ಡೆ, ಪರಿಸರ ಮಾಲಿನ್ಯ ಮುಂತಾದ ಕಾರಣಗಳಿಂದಲೂ ಗರ್ಭಕೋಶಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಬರುವ ಸಾಧ್ಯತೆ ಉಂಟು.

ಅದಕ್ಕಾಗಿ ಚಿಂತಿಸಬೇಕಾದ ಅಗತ್ಯವೂ ಇಲ್ಲ. ತಜ್ಞ ವೈದ್ಯರ ಸಲಹೆ, ಸೂಕ್ತ ಚಿಕಿತ್ಸೆ ಹಾಗೂ ಆರೈಕೆಯಿಂದ ಸರಿಪಡಿಸಬಹುದಾಗಿದೆ. ನಮ್ಮಲ್ಲಿ ಚಿಕಿತ್ಸೆಯೊಂದಿಗೆ ಸಮರಸ ಜೀವನಕ್ಕೆ ಸಲಹೆ ನೀಡುವುದು. ಗರ್ಭಿಣಿ ಸ್ತ್ರೀಯ ಆರೋಗ್ಯ ಕಾಪಾಡುವುದು.

ಗರ್ಭದಲ್ಲಿ ಬೆಳೆಯುತ್ತಿರುವ ಮಗುವಿನ ರಕ್ಷಣೆ ಹಾಗೂ ಯೋಗಕ್ಷೇಮ ನೋಡಿಕೊಳ್ಳುವ ಎಲ್ಲ ಕ್ರಿಯೆಗಳು ತಜ್ಞರ ನೇತೃತ್ವದಲ್ಲಿ ನಡೆಯುತ್ತವೆ. ಎಲ್ಲವೂ ಪಾರದರ್ಶಕ ಹಾಗೂ ಮಾನವೀಯತೆ ದೃಷ್ಟಿಕೋನದಲ್ಲಿ ನಿರ್ವಹಿಸಲಾಗುತ್ತದೆ ಎಂದು ವಿವರಿಸಿದರು.

ಬೆಂಗಳೂರು ಸೇರಿದಂತೆ ನಮ್ಮ ಸಮೂಹದಲ್ಲಿ ಎಂಟು ಸೆಂಟರ್‌ಗಳಿದ್ದು, ಮುಂಬರುವ ದಿನಗಳಲ್ಲಿ ವೈಟ್‌ಫೀಲ್ಡ್‌, ಕೋರಮಂಗಲ ಹಾಗೂ ಎಲೆಕ್ಟ್ರಾನಿಕ್ಸ್‌ ಸಿಟಿಯಲ್ಲಿ ಸುಸಜ್ಜಿತ ಸೆಟಲೈಟ್‌ ಸೆಂಟರ್‌ಗಳನ್ನು ತೆರೆಯಲಿದ್ದೇವೆ.
-ಡಾ. ರಾಖಿ ಮಿಶ್ರಾ. ಸೆಂಟರ್‌ನ ಸಿಇಒ

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.