ಒಳಾಂಗಣ ಚಿತ್ರೀಕರಣಕ್ಕಾಗಿ ಮನವಿ
Team Udayavani, Jun 23, 2021, 5:15 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನುಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್, ಒಳಾಂಗಣ ಚಿತ್ರೀಕರಣಕ್ಕೆ ಅನುಮತಿ ನೀಡುವಂತೆ ಕೋರಿ ವಾಣಿಜ್ಯ ಮಂಡಳಿ ಪರವಾಗಿ ಸರ್ಕಾರಕ್ಕೆ ಮನವಿ ಮಾಡಿದರು.
ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಸಿನಿಮಾಗಳ ನಿರ್ಮಾಪಕರು ಲಕ್ಷಾಂತರಬಂಡವಾಳ ಹೂಡಿ ಒಳಾಂಗಣದಲ್ಲಿ ಚಿತ್ರೀಕರಿಸಲು ಸೆಟ್ಗಳನ್ನು ನಿರ್ಮಿಸಿದ್ದು, ಒಳಾಂಗಣ ಚಿತ್ರೀಕರಣಕ್ಕೆ ಅನುಮತಿ ಇಲ್ಲದಿರುವ ಕಾರಣಸೆಟ್ಗಳು ದುಸ್ಥಿತಿಗೆ ಬರುತ್ತಿವೆ ಎಂದು ಮನವರಿಕೆ ಮಾಡಿಕೊಟ್ಟರು.