ವೈಜ್ಞಾನಿಕ ಅಭಿವೃದ್ಧಿ, ವಿಜ್ಞಾನದ ಬಳಕೆಗೆ ಬೆಂಗಳೂರು ಪ್ರಶಸ್ತವಾದ ಸ್ಥಳ: ಸಿಎಂ ಬೊಮ್ಮಾಯಿ


Team Udayavani, Sep 27, 2022, 5:05 PM IST

ಸಿಎಂ ಬೊಮ್ಮಾಯಿ

ಬೆಂಗಳೂರು: ವೈಜ್ಞಾನಿಕ ಅಭಿವೃದ್ಧಿ ಹಾಗೂ ವಿಜ್ಞಾನದ ಬಳಕೆಗೆ ಬೆಂಗಳೂರು ಪ್ರಶಸ್ತವಾದ ಸ್ಥಳವಾಗಿದೆ. ಐಟಿ ಬಿಟಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಹೀಗೆ ತಂತ್ರಜ್ಞಾನದ ಎಲ್ಲ ಆಯಾಮಗಳು ಕರ್ನಾಟಕದಲ್ಲಿ ಹೊಸ ರೂಪವನ್ನು ಪಡೆಯುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಎಕ್ಸೈಡ್ ಎನರ್ಜಿ ಸೊಲ್ಯೂಷನ್ಸ್ ಲಿಮಿಟೆಡ್ ಇವರ ವತಿಯಿಂದ ಆಯೋಜಿಸಿರುವ ‘ಎಕ್ಸೈಡ್’ ಎನರ್ಜಿ ಸೊಲ್ಯೂಷನ್ಸ್ ಲಿಮಿಟೆಡ್ ನೂತನ ಕಟ್ಟಡದ ಅಡಿಗಲ್ಲು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕರ್ನಾಟಕದಲ್ಲಿ ಆಧುನಿಕ ವೈಜ್ಞಾನಿಕ ತಂತ್ರಜ್ಞಾನಗಳನ್ನು ಸಂಘಟಿತವಾಗಿ ಬಳಕೆ ಮಾಡುವ ವ್ಯವಸ್ಥೆ ಹಾಗೂ ವಾತಾವರಣವಿದೆ. ಎಕ್ಸೈಡ್ ಕಂಪನಿಯ ಘಟಕದಲ್ಲಿ ಸ್ಥಳೀಯ ಜನರಿಗೆ ಉದ್ಯೋಗಾವಕಾಶ ನೀಡುವ ಬಗ್ಗೆ ಸಂಸ್ಥೆ ಗಮನ ಹರಿಸಬೇಕಿದೆ. ಸರ್ಕಾರ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿ ಆಧುನಿಕ ತಂತ್ರಜ್ಞಾನದ ಬಗ್ಗೆ ತರಬೇತಿಯನ್ನು ಯುವಕರಿಗೆ ನೀಡುತ್ತಿದೆ. ಸಂಸ್ಥೆಯ ಘಟಕದ ನಿರ್ಮಾಣಕ್ಕೆ ಜಮೀನು ನೀಡಿದ ಸ್ಥಳೀಯರ ಕುಟುಂಬಗಳಿಗೆ ಉದ್ಯೋಗ ನೀಡುವ ಮೂಲಕ ಪರಸ್ಪರ ಸಹಕರಿಸಬೇಕಿದೆ ಎಂದರು.

ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ಮೊತ್ತದ ವಿದೇಶಿ ಬಂಡವಾಳ ಹರಿದು ಬರುತ್ತಿದ್ದು, ವಿಶ್ವಮಟ್ಟದ ಅರ್ ಎಂಡ್ ಡಿ ಕೇಂದ್ರಗಳನ್ನು ಹೊಂದಿದೆ. 400 ಫಾರ್ಚೂನ್ ಕಂಪನಿಗಳು ರಾಜ್ಯದಲ್ಲಿದೆ. ನೀತಿಆಯೋಗದಂತೆ ಆವಿಷ್ಕಾರ ಕ್ಷೇತ್ರದಲ್ಲಿ ಕರ್ನಾಟಕ ಒಂದನೇ ಶ್ರೇಯಾಂಕವನ್ನು ತನ್ನದಾಗಿಸಿಕೊಂಡಿದೆ. ರಾಕೆಟ್ ಗಳಲ್ಲಿ ಬಳಸುವ ಕ್ರೈಯೋಜಿನಿಕ್ ಇಂಜಿನ್ಗಳನ್ನು ಉತ್ಪಾದಿಸುವ ಐದನೇ ದೊಡ್ಡ ದೇಶ ಭಾರತ. ಹೆಚ್ ಎ ಎಲ್ ಸಂಸ್ಥೆಯಲ್ಲಿ ಕ್ರೈಯೋಜಿನಿಕ್ ಇಂಜಿನ್ ಗಳ ಉತ್ಪಾದನಾ ಘಟಕವನ್ನು ಇಂದು ಉದ್ಘಾಟಿಸಲಾಗಿದ್ದು, ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ. ಹೊಸ ತಂತ್ರಜ್ಞಾನದ ಕ್ರೈಯೋಜಿನಿಕ್ ಇಂಜಿನ್ ಗಳನ್ನು ಉತ್ಪಾದಿಸಲಾಗುವುದು ಎಂದರು.

ಇದನ್ನೂ ಓದಿ:ನವರಾತ್ರಿ ಹಬ್ಬದ ಅಂಗವಾಗಿ ಬನ್ನಿಮಹಾಕಾಳಿಗೆ ಮಹಿಳೆಯರಿಂದ ವಿಶೇಷ ಮೌನ ವೃತ ಪೂಜೆ, ಆಚರಣೆ

ವಿದ್ಯುತ್ ಪೂರೈಕೆಯಲ್ಲಿ ಸ್ವಯಂಪೂರ್ಣತೆ ಕಾಣುವ ದೇಶಗಳು ಆರ್ಥಿಕತೆಯ ಅಭಿವೃದ್ಧಿ ಕಾಣುತ್ತವೆ. ಮುಂದಿನ ದಿನಗಳಲ್ಲಿ ಇಂಧನ ಕ್ಷೇತ್ರದಲ್ಲಿ ಸಾಕಷ್ಟು ಬೆಳವಣಿಗೆ ಆಗಲಿದೆ. ಭಾರತದಲ್ಲಿ ಒಂದು ದೇಶ ಒಂದು ಗ್ರಿಡ್ ನೀತಿ ಬರಲಿದೆ. ಇಡೀ ಭಾರತದಲ್ಲಿ ಗ್ರಿಡ್ ಸಂಪರ್ಕವನ್ನು ಸಾಧಿಸಲಾಗುತ್ತಿದೆ. ವಿದ್ಯುತ್ ಸಂಗ್ರಹಣೆಯೂ ಅತ್ಯವಶ್ಯವಾಗಿದ್ದು, ಈ ದಿಸೆಯಲ್ಲಿ ಎಕ್ಸೈಡ್ ಕಂಪನಿ ಪ್ರಮುಖ ಪಾತ್ರ ವಹಿಸಲಿದೆ. ಎಕ್ಸೈಡ್ ಸಂಸ್ಥೆಯ ಬ್ಯಾಟರಿ ಉತ್ಪಾದನಾ ಘಟಕದ ಸ್ಥಾಪನೆಗೆ ಸರ್ಕಾರದಿಂದ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.